![Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್](https://www.udayavani.com/wp-content/uploads/2024/12/3-35-415x249.jpg)
ವಿಎಸ್ಕೆ ವಿವಿ ಘಟಿಕೋತ್ಸವ ಇಂದು
•ರಾಜಸ್ಥಾನದ ರಾಜಯೋಗಿನಿ ದಾದಿ ಹೃದಯ ಮೋಹಿನಿಗೆ ಗೌರವ ಡಾಕ್ಟರೇಟ್ ಪ್ರದಾನ • 121 ವಿದ್ಯಾರ್ಥಿಗಳಿಗೆ ರ್ಯಾಂಕ್
Team Udayavani, May 14, 2019, 3:10 PM IST
![ballry-tdy-1..](https://www.udayavani.com/wp-content/uploads/2019/05/ballry-tdy-1..-620x222.jpg)
ಬಳ್ಳಾರಿ: ಶ್ರೀಕೃಷ್ಣದೇವರಾಯ ವಿವಿ ಕುಲಪತಿ ಪ್ರೊ. ಎಂ.ಎಸ್.ಸುಭಾಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ಮೇ 14 ರಂದು ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯಲಿದೆ ಎಂದು ವಿವಿ ಕುಲಪತಿ ಪ್ರೊ. ಎಂ.ಎಸ್. ಸುಭಾಶ್ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಎಸ್ಕೆ ವಿವಿ ಸ್ಥಾಪನೆಯಾಗಿ 10 ವರ್ಷಗಳು ಪೂರ್ಣಗೊಂಡಿವೆ. ದಶಕದ ಹಿಂದೆ 900 ಇದ್ದ ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಖ್ಯೆ ಇಂದು 2 ಸಾವಿರ ತಲುಪಿದೆ ಎಂದರು.
ನವದೆಹಲಿಯ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷ, ಕನ್ನಡಿಗರಾದ ಪ್ರೊ. ಅನಿಲ್ ಡಿ.ಸಹಸ್ರಬುಧೆ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ, ವಿವಿ ಕುಲಾಧಿಪತಿ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ, ಸಮ ಕುಲಾಧಿಪತಿ ಜಿ.ಟಿ.ದೇವೇಗೌಡ ಪದವಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.
ವಿಎಸ್ಕೆ ವಿವಿಗೆ ಈ ಹಿಂದೆ 12ಬಿ ಮಾನ್ಯತೆ ಸಿಕ್ಕಿರಲಿಲ್ಲ. ಇದರಿಂದ ವಿವಿಗೆ ಪ್ರತಿ ವರ್ಷ ರೂಸಾದಿಂದ ಬರುವ ಸುಮಾರು 20 ಕೋಟಿ ರೂ.ಅನುದಾನ ದೊರೆಯುತ್ತಿರಲಿಲ್ಲ. ಇದಕ್ಕೆ ವಿವಿಯಲ್ಲಿನ ಅಸೋಸಿಯೇಟ್ ಪ್ರೊಫೆಸರ್, ಬೋಧಕೇತರ ಸಿಬ್ಬಂದಿ ಕೊರತೆ ಕಾರಣವಾಗಿತ್ತು. ಯುಜಿಸಿ ನಿಯಮಗಳ ಪ್ರಕಾರ ಸುಮಾರು 20 ಕೋರ್ಸ್ಗಳಿಗೆ ಶೇ.25 ರಷ್ಟು ಸಿಬ್ಬಂದಿ ಇರಬೇಕು. ಸಹಾಯಕ ಪ್ರಾಧ್ಯಾಪಕರು ಇದ್ದರೂ, ಅಸೋಸಿಯೇಟ್ ಪ್ರೊಫೆಸರ್ಗಳ ಕೊರತೆ ಇತ್ತು. ಕಳೆದ ವರ್ಷ 28 ಅಸೋಸಿಯೇಟ್ ಪ್ರೊಫೆಸರ್ಗಳ ನೇಮಕಾತಿಯಿಂದ ಈ ಕೊರತೆ ನೀಗಿದಂತಾಗಿದೆ. ಕಳೆದ ವರ್ಷ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ವಿವಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ತೋರಿರುವುದು 12ಬಿ ಮಾನ್ಯತೆ ದೊರೆಯಲು ನೆರವಾಗಲಿದೆ. ಕಳೆದ ಏಪ್ರಿಲ್ನಲ್ಲಿ ಯುಜಿಸಿ ತಜ್ಞರ ಸಮಿತಿ ವಿವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶೀಘ್ರದಲ್ಲೇ ವಿವಿಗೆ 12ಬಿ ಮಾನ್ಯತೆಯೊಂದಿಗೆ, ನ್ಯಾಕ್ ವತಿಯಿಂದಲೂ ಮಾನ್ಯತೆ ದೊರೆಯುವ ನಿರೀಕ್ಷೆಯಿದೆ ಎಂದು ವಿವರಿಸಿದರು.
ವಿವಿಯಿಂದ ಕಳೆದ ವರ್ಷ ಕೇವಲ 3 ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿತ್ತು. ಈ ಬಾರಿ 26 ಪದವಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಸ್ನಾತಕ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪ್ರಮಾಣ ಪ್ರತಿಶತ ಶೇ.75ಕ್ಕೆ ಏರಿಕೆಯಾಗಿದೆ. ಸ್ನಾತಕೋತ್ತರ ಕೋರ್ಸ್ಗಳಲ್ಲಿ ಪ್ರತಿಶತ ಶೇ.93 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಸ್ನಾತಕ ಕೋರ್ಸ್ಗಳಲ್ಲಿ 80, ಸ್ನಾತಕೋತ್ತರ ಕೋರ್ಸ್ಗಳಲ್ಲಿ 121 ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದಾರೆ. ಸ್ನಾತಕ ಕೋರ್ಸ್ನಲ್ಲಿ 18, ಸ್ನಾತಕೋತ್ತರ ಕೋರ್ಸ್ಗಳಲ್ಲಿ 54 ವಿದ್ಯಾರ್ಥಿಗಳು ಉತ್ತಮ ಸಾಧನೆಯಿಂದಾಗಿ ಚಿನ್ನದ ಪದಕ ಪಡೆದಿದ್ದಾರೆ. ವಿವಿಧ ಖಾಸಗಿ ಕಂಪನಿಗಳಿಂದ ವಿವಿಯ ಸುಮಾರು 200 ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ ಲಭಿಸಿದೆ ಎಂದು ತಿಳಿಸಿದರು.
ದಾದಿ ಹೃದಯ ಮೋಹಿನಿಯವರಿಗೆ ಗೌರವ ಡಾಕ್ಟರೇಟ್: ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಿಂದ ಈ ಬಾರಿ ರಾಜಸ್ಥಾನ ಮೂಲದ ಬ್ರಹ್ಮಕುಮಾರಿ ಸಂಸ್ಥೆಯ ಹೆಚ್ಚುವರಿ ಮುಖ್ಯಸ್ಥೆ ರಾಜಯೋಗಿನಿ ದಾದಿ ಹೃದಯ ಮೋಹಿನಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಸ್ಥಳೀಯವಾಗಿ ರಂಗಭೂಮಿ ಕಲಾವಿದ ಬೆಳಗಲ್ಲು ವೀರಣ್ಣ, ರಾಜ್ಯಮಟ್ಟದಲ್ಲಿ ಶಿವಮೊಗ್ಗದ ಮಂಜುನಾಥ ಭಂಡಾರಿ, ಧಾರವಾಡದ ವೆಂಕಟೇಶ ಕುಮಾರ, ಮಾರ್ಕಂಡೇಯ ಯಲ್ಲಪ್ಪ ದೊಡ್ಡಮನಿ, ರಾಷ್ಟ್ರಮಟ್ಟದಲ್ಲಿ ರಾಜಸ್ಥಾನ ಮೂಲದ ಬ್ರಹ್ಮಕುಮಾರಿ ಸಂಸ್ಥೆಯ ಹೆಚ್ಚುವರಿ ಮುಖ್ಯಸ್ಥೆ ರಾಜಯೋಗಿನಿ ದಾದಿ ಹೃದಯ ಮೋಹಿನಿ ಸೇರಿ ಒಟ್ಟು ಐದು ಅರ್ಜಿಗಳನ್ನು ರಾಜ್ಯಪಾಲರ ಆಯ್ಕೆ ಸಮಿತಿಗೆ ಕಳುಹಿಸಿಕೊಡಲಾಗಿತ್ತು. ಅದರಲ್ಲಿ ರಾಜ್ಯಪಾಲರು ಶಿಕ್ಷಣ, ಸಮಾಜ ಸೇವೆ, ಅಧಾತ್ಮ ಸೇವೆ ಪರಿಗಣಿಸಿ ರಾಜಯೋಗಿನಿ ದಾದಿ ಹೃದಯ ಮೋಹಿನಿ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಮೇ 14 ರಂದು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದರು.
ಆಡಳಿತ ವಿಭಾಗದ ಕುಲಸಚಿವೆ ಪ್ರೊ. ತುಳುಸಿಮಾಲಾ, ಮೌಲ್ಯಮಾಪನಾ ಕುಲಸಚಿವ ಕೆ.ರಮೇಶ್ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
![Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್](https://www.udayavani.com/wp-content/uploads/2024/12/3-35-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು](https://www.udayavani.com/wp-content/uploads/2024/12/vv-4-150x84.jpg)
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
![Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ](https://www.udayavani.com/wp-content/uploads/2024/12/nagalsk-150x84.jpg)
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
![1-qewqe](https://www.udayavani.com/wp-content/uploads/2024/12/1-qewqe-150x90.jpg)
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
![1-lokkk](https://www.udayavani.com/wp-content/uploads/2024/12/1-lokkk-150x98.jpg)
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
![Ballari–Minister](https://www.udayavani.com/wp-content/uploads/2024/12/Ballari-Minister-150x90.jpg)
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
![1](https://www.udayavani.com/wp-content/uploads/2024/12/1-37-150x80.jpg)
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
![Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್](https://www.udayavani.com/wp-content/uploads/2024/12/3-35-150x90.jpg)
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
![28 cricketers who said goodbye in 2024; Here is the list](https://www.udayavani.com/wp-content/uploads/2024/12/retired-150x87.jpg)
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
![5-hunsur](https://www.udayavani.com/wp-content/uploads/2024/12/5-hunsur-150x90.jpg)
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
![ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ](https://www.udayavani.com/wp-content/uploads/2024/12/Upendra-2-150x87.jpg)
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.