ಅಂತೂ ಇಂತೂ ವಿಜಯನಗರ ಬಡಾವಣೆಗೆ ನೀರು ಬಂತು


Team Udayavani, May 14, 2019, 3:40 PM IST

kopp-6

ಕೊಪ್ಪಳ: ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಇಲ್ಲಿನ 26ನೇ ವಾರ್ಡ್‌ನ ವಿಜಯನಗರ ಬಡಾವಣೆಗೆ ಕೊನೆಗೂ ನೀರು ಪೂರೈಕೆ ಪ್ರಾರಂಭವಾಗಿದೆ. ವಾರ್ಡ್‌ ಸದಸ್ಯೆ ದೇವಕ್ಕ ಕಂದಾರಿ ಅವರ ಸತತ ಪ್ರಯತ್ನದಿಂದ ವಾರ್ಡ್‌ಗೆ ನೀರು ಪೂರೈಕೆಯಾಗಿದ್ದು, ಸೋಮವಾರ ಓಣಿಯಲ್ಲಿ ಸಂಭ್ರಮ ಮನೆ ಮಾಡಿತ್ತು.

ಹೌದು.. ತುಂಗಭದ್ರಾ ಜಲಾಶಯ ಪಕ್ಕದಲ್ಲೇ ಇದ್ದರೂ ಕೊಪ್ಪಳದ ಜನತೆ ಕುಡಿಯುವ ನೀರಿಗೆ ಎಲ್ಲೆಡೆ ಅಲೆದಾಡುವಂತ ಪರಿಸ್ಥಿತಿ ಇದೆ. ಹೊಲ, ಗದ್ದೆಗಳಿಗೆ, ಹಳ್ಳದ ತಟದಲ್ಲಿನ ಬೋರ್‌ವೆಲ್ಗೆ ತೆರಳಿ ನೀರು ತರುವಂತ ಸ್ಥಿತಿಯಿದೆ. ಅಲ್ಲದೇ, 26ನೇ ವಾರ್ಡಿನಲ್ಲಂತೂ ಅತೀವ ನೀರಿನ ಸಮಸ್ಯೆ. ವಾರ್ಡ್‌ ಸದಸ್ಯರ ಪರಿಶ್ರಮದಿಂದ ಕೊನೆಗೂ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಇಲ್ಲಿನ ಜನತೆ ಹಬ್ಬದಂತೆ ನೀರಿಗೆ ಪೂಜೆ ಮಾಡಿ, ಸಿಹಿ ವಿತರಿಸಿ ಸಂಭ್ರಮಿಸಿದರು.

ನೀರಿನ ಸಮಸ್ಯೆಯಿಂದಾಗಿ ವಾರ್ಡ್‌ನಲ್ಲಿನ ಹಾಸ್ಟೆಲ್ಗೆ ವಿದ್ಯಾರ್ಥಿನಿಯರು ಆಗಮಿಸಲು ಹಿಂದೇಟು ಹಾಕುವಂತ ಸ್ಥಿತಿಯಿತ್ತು. ಅಂತೂ ವಿಜಯನಗರದ ಬಡಾವಣೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ತುಂಗಭದ್ರಾ ನೀರನ್ನು ಓಣಿಗೆ ತಂದಿದ್ದಕ್ಕೆ ಬಡಾವಣೆಯ ಜನರ ಮನಸ್ಸಿನಲ್ಲಿ ಉಲ್ಲಾಸ ತುಂಬಿ ತುಳುಕುತ್ತಿತ್ತು.

ಈ ಸಂಭ್ರಮದಲ್ಲಿ ನಗರಸಭೆ ಸದಸ್ಯೆ ದೇವಕ್ಕ ಕಂದಾರಿ, ಮುಖಂಡರಾದ ಹಾಲೇಶ ಕಂದಾರಿ ಬಸವರಾಜ ಬನ್ನಿಕೊಪ್ಪ, ರಾಘವೇಂದ್ರ ನರಗುಂದ, ಶರಣಯ್ಯ ಹಿರೇಮಠ, ಶಿವಣ್ಣ ಹಟ್ಟಿ, ನಿವಾಸಿಗಳಾದ ಕಾಸೀಂ, ಸಂಜೀವ, ಪಾಪಣ್ಣ ನಾಯಕ, ಸಿದ್ದು ಭಾಗ್ಯನಗರ, ಕುಮಾರ, ಜೀಲಾನಸಾಬ್‌, ನಜೀರಸಾಬ್‌ ಚಿಲವಾಡ್ಗಿ, ಮುರುಳೀಧರ ಭಜಂತ್ರಿ, ರಾಯನಗೌಡ, ಮಂಜುನಾಥ ಗುಗ್ರಿ, ಮೈಲಾರಪ್ಪ ವಕೀಲರು, ಯಾಕುಬ್‌ ಸಾಬ್‌, ಗೈಬು ಮೇಸ್ತ್ರಿ, ನಾಗಪ್ಪ ಚಳ್ಳಾರಿ ಸೇರಿ ಇತರರು ಇದ್ದರು.

ಎಲ್ಲದಕ್ಕೂ ನೀರು ಬಹಳ ಮುಖ್ಯ. ವಿಜಯನಗರ ಬಡಾವಣೆಯ ಜನರು ಕೊಳವೆಬಾಯಿಯನ್ನೇ ಅವಲಂಬಿಸಿದ್ದರು. ಈಗ ತುಂಗಭದ್ರಾ ನದಿಯ ಸಿಹಿ ನೀರುನ್ನು ಪೂರೈಸಿದ್ದು ಖುಷಿಯಾಗಿದೆ. ನೀರು ಒದಗಿಸುವ ಪ್ರಕ್ರಿಯಲ್ಲಿ ಭಾಗವಹಿಸಿದ ಎಲ್ಲ ನಗರಸಭೆಯ ಅಧಿಕಾರಿ ವರ್ಗಕ್ಕೆ ಮತ್ತು ಸಿಬ್ಬಂದಿಗೆ ಧನ್ಯವಾದ ಸಲ್ಲಿಸುತ್ತೇನೆ.
•ದೇವಕ್ಕ ಲಕ್ಷ್ಮಣ ಕಂದಾರಿ,ವಾರ್ಡ್‌ ಸದಸ್ಯೆ
ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ತುಂಬಾ ಇತ್ತು. ಬಹಳ ದಿನಗಳ ನಮ್ಮ ಬೇಡಿಕೆ ಈಡೇರಿದಂತಾಗಿದೆ. ವಾರ್ಡ್‌ ಸದಸ್ಯೆ ದೇವಕ್ಕ ಕಂದಾರಿ ಅವರ ಶ್ರಮದಿಂದ ನಮಗೆ ಸಿಹಿ ನೀರು ಲಭಿಸಿದೆ. ಅದಕ್ಕೆ ತುಂಬ ಖುಷಿಯಾಗಿದೆ.
•ಪಾಪಣ್ಣ ನಾಯಕ, ಸ್ಥಳೀಯ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.