ಭೀಷ್ಮ ಕೆರೆಗೆ ಮತ್ತಷ್ಟು ಮೆರಗು

ಭರದಿಂದ ಸಾಗಿದ 2ನೇ ಹಂತದ ಅಭಿವೃದ್ಧಿ ಕಾರ್ಯ •ಸೌಂದರ್ಯೀಕರಣ ಜತೆ ಹೆಚ್ಚಲಿದೆ ಅಂತರ್ಜಲ

Team Udayavani, May 15, 2019, 12:32 PM IST

gadaga-tdy-1…

ಗದಗ: ಭೀಷ್ಮಕೆರೆ ಬಸವೇಶ್ವರ ಪುತ್ಥಳಿ ಬಲಭಾಗದಲ್ಲಿ ಹೂಳು ತೆಗೆಯುತ್ತಿರುವುದು.

ಗದಗ: ಐತಿಹಾಸಿಕ ಹಾಗೂ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವೆಂದೇ ಗುರುತಿಸಿಕೊಂಡ‌ ಇಲ್ಲಿನ ಭೀಷ್ಮ ಕೆರೆಯಲ್ಲಿ ಇದೀಗ 2ನೇ ಹಂತದ ಅಭಿವೃದ್ಧಿ ಕಾರ್ಯ ಭರದಿಂದ ಸಾಗಿದೆ. ಸುಮಾರು 9.56 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮತ್ತು ವಿಸ್ತರಣೆ ಮಾಡಲಾಗುತ್ತಿದ್ದು, ಕೆರೆ ಸುತ್ತಲಿನ ಗೇಬಿಯನ್‌ ವಾಲ್ ಸೇರಿದಂತೆ ಹತ್ತು ಹಲವು ಸೌಲಭ್ಯಗಳು ಗಮನ ಸೆಳೆಯಲಿವೆ.

ಹೌದು. ನಗರದ ಹೃದಯ ಭಾಗದಲ್ಲಿ ಸುಮಾರು 103 ಎಕರೆ ಪ್ರದೇಶದಲ್ಲಿ ಮೈಯೊಡ್ಡಿಕೊಂಡಿರುವ ಭೀಷ್ಮ ಕೆರೆ ಕೆಲ ವರ್ಷಗಳಿಂದ ಕೊಳಚೆ ನೀರು ಹರಿಸುವ ಗುಂಡಿಯಾಗಿತ್ತು. ಆದರೆ, ಕೆರೆ ಅಂಗಳದಲ್ಲಿ ಜಗಜ್ಯೋತಿ ಬಸವೇಶ್ವರ ಪುತ್ಥಳಿ ನಿರ್ಮಿಸಿದ್ದರಿಂದ ಐತಿಹಾಸಿಕ ಕೆರೆ ಪುನಃ ತನ್ನ ಮೂಲ ಸ್ವರೂಪಕ್ಕೆ ತಿರುಗುವಂತಾಗಿದೆ. ಶಾಸಕ ಎಚ್.ಕೆ.ಪಾಟೀಲ ಅವರ ದೂರದೃಷ್ಟಿ ಮತ್ತು ಕಾಳಜಿಯಿಂದ ಭೀಷ್ಮಕೆರೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ.

ಈಗಾಗಲೇ ಕೆರೆ ಅಂಗಳದಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆ, ಉದ್ಯಾನ ಅಭಿವೃದ್ಧಿ ಪಡಿಸಲಾಗಿದೆ. ಮಕ್ಕಳ ಆಟಿಕೆಗಳನ್ನು ಅಳವಡಿಸಲಾಗಿದೆ. ಕೆರೆಯ 29ಎಕರೆ ಪ್ರದೇಶದಲ್ಲಿ ಹೂಳು ತೆಗೆದು, ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ ಕೆರೆಗೆ ತುಂಗಭದ್ರಾ ನದಿ ನೀರು ತುಂಬಿಸಿದ್ದರಿಂದ ದೋಣಿ ವಿಹಾರ, ಸಾಹಸಿಗರಿಗೆ ಜಲ ಕ್ರೀಡೆಗಳನ್ನು ಸವಿಯುವ ಅವಕಾಶ ಕಲ್ಪಿಸಿದ್ದರಿಂದ ಪ್ರವಾಸಿಗರ ಆಕರ್ಷಣೆಗೆ ಕಾರಣವಾಗಿದೆ. ಇನ್ನೂ ಒಂದು ಹೆಜ್ಜೆ ಮುಂದಿಟ್ಟಿರುವ ಜಿಲ್ಲಾಡಳಿತ 9.56 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ ಮತ್ತು ವಿಸ್ತರಣೆ ಕಾಮಗಾರಿ ಕೈಗೆತ್ತಿಕೊಂಡಿದೆ.

ಶೇ.100 ಕೆರೆ ವಿಸ್ತರಣೆ: ಕೇಂದ್ರ ಸರಕಾರದ ಅಮೃತ್‌ ಸಿಟಿ ಯೋಜನೆಯಡಿ ಶೇ.50 ಅನುದಾನ ಲಭಿಸಲಿದ್ದು, ರಾಜ್ಯ ಸರಕಾರ ಶೇ. 20, ಗದಗ-ಬೆಟಗೇರಿ ನಗರಸಭೆಯಿಂದ ಶೇ.30 ವಂತಿಗೆ ಸೇರಿ ಒಟ್ಟು 9.56 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮತ್ತು ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿಂದೆ 29.26 ಎಕರೆ ಪ್ರದೇಶದಲ್ಲಿ ಹೂಳು ತೆಗೆದು ಒಡಲು ತುಂಬಿಸಲಾಗಿತ್ತು. ಆದರೆ, ಇದೀಗ ಬಸವೇಶ್ವರ ಪುತ್ಥಳಿಯ ಬಲ ಮತ್ತು ಹಿಂಭಾಗ ಸೇರಿದಂತೆ ಸುಮಾರು 59.17 ಎಕರೆ ಪ್ರದೇಶದಲ್ಲಿ ಹೂಳು ತೆಗೆಯಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬಸವೇಶ್ವರ ಪುತ್ಥಳಿ ಸುತ್ತಲೂ ದೋಣಿ ಹಾಗೂ ಕಾಲ್ನಡಿಗೆಯಲ್ಲೂ ಪ್ರದಕ್ಷಣೆ ಸುತ್ತುವ ಅವಕಾಶ ದೊರೆಯಲಿದೆ.

ಕೆರೆ ಭಾಗದಲ್ಲಿ ಏನೇನು ಇರಲಿದೆ? ಒಟ್ಟು 113 ಎಕರೆ ಪ್ರದೇಶದಲ್ಲಿರುವ ಭೀಷ್ಮ ಕೆರೆಯಲ್ಲಿ ಶೇ.70 ಭಾಗದಲ್ಲಿ ನೀರು ನಿಲುಗಡೆ ಹಾಗೂ ಇನ್ನುಳಿದ ಶೇ.30 ಪ್ರದೇಶದಲ್ಲಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತ್ತಿದೆ. ಭೀಷ್ಮಕೆರೆಗೆ ಈಗಿರುವ ಪ್ರವೇಶ ದ್ವಾರ ಬಳಿ ಸುಮಾರು 500 ವಾಹನಗಳಿಗೆ ಸಾಕಾಗುವಷ್ಟು ಪಾರ್ಕಿಂಗ್‌ ಸ್ಪಾಟ್, ಓಪನ್‌ ಜಿಮ್‌, ಫುಡ್‌ ಕೋರ್ಟ್‌, ವಸ್ತು ಪ್ರದರ್ಶನ ಮಳಿಗೆ, ಬಯಲು ಚಿತ್ರಮಂದಿರ, ಕಾರಂಜಿ, ಚಿಣ್ಣರ ಈಜುಕೊಳ, ಮಕ್ಕಳ ಉದ್ಯಾನ, ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗುತ್ತದೆ.

ಗೋವಾ ಮೂಲದ ಸಂಸ್ಥೆಗೆ ಕಾಮಗಾರಿ: ಕಾಮಗಾರಿ ಆರಂಭಗೊಂಡು ಈಗಾಗಲೇ ಮೂರ್‍ನಾಲ್ಕು ತಿಂಗಳು ಕಳೆದಿದೆ. ಗೋವಾ ಮೂಲದ ಎಫೆಕ್ಟಿವ್‌ ಆರ್ಕಿಟೆಕ್ಚರ್‌ ಸರ್ವೀಸಸ್‌ ಎಂಬ ಸಂಸ್ಥೆಗೆ ಕಾಮಗಾರಿ ಗುತ್ತಿಗೆ ನೀಡಲಾಗಿದೆ. 12 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಲಾಗಿದೆ ಎಂದು ಹೇಳಲಾಗಿದೆ. ಆದರೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಎಲ್ಲವೂ ಅಂದುಕೊಂಡಂತೆ ನಡೆದರೆ, ಒಂದು ವರ್ಷದೊಳಗೆ ಗದಗ ನಗರದ ಭೀಷ್ಮ ಕೆರೆ ಉತ್ತರ ಕರ್ನಾಟಕ ಪ್ರಮುಖ ಪ್ರವಾಸಿ ತಾಣವಾಗಿ ಗಮನ ಸೆಳೆಯುವ ಸಾಧ್ಯತೆಯಿದೆ.

ಕೆರೆಯ ಸೌಂದರ್ಯವನ್ನು ಸವಿಯಲು ಕೆರೆ ಸುತ್ತಲೂ ಸುಮಾರು 1.9 ಕಿ.ಮೀ.ನಷ್ಟು ವಾಕಿಂಗ್‌ ಪಾತ್‌ ಹಾಗೂ ಬೆಳಕಿನ ವ್ಯವಸ್ಥೆ ಮಾಡಲಾಗುತ್ತದೆ. ಸಾರ್ವಜನಿಕರ ಅನುಕೂಲಕ್ಕಾಗಿ ಉಪಾಹಾರ ಮಳಿಗೆಗಳು, ಮಕ್ಕಳನ್ನು ಸೆಳೆಯುವ ಈಜುಕೊಳ, ಪಾರ್ಕ್‌ ಹಾಗೂ ಜಲ ಕ್ರೀಡೆಗಳಿಗೆ ವ್ಯವಸ್ಥೆ ಮಾಡಲಾಗುತ್ತದೆ. ಅದಕ್ಕಿಂತ ಮುಖ್ಯವಾಗಿ ಸುಮಾರು 59 ಎಕರೆ ವಿಸ್ತರಣೆಯಿಂದ ನಗರದಲ್ಲಿ ಅಂತರ್ಜಲ ಮಟ್ಟವೂ ಗಣನೀಯವಾಗಿ ಹೆಚ್ಚುತ್ತದೆ.-ಎಲ್. ಜಿ. ಪತ್ತಾರ, ನಗರಸಭೆ ಮುಖ್ಯಅಭಿಯಂತರ.

•ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.