ಕಲ್ಲು ಎಸೆಯುವ ಹಬ್ಬ


Team Udayavani, May 16, 2019, 6:00 AM IST

4

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಹಲವು ಬಗೆಯ ಆಚರಣೆಗಳಿವೆ, ಹಾಗೆಯೇ ಕೆಲವು ಹಬ್ಬಗಳು ಹಿಂದಿನ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬಂದಿವೆ. ಅಂತ ಕೆಲವು ಆಚರಣೆಗಳಲ್ಲಿ ಮಧ್ಯಪ್ರದೇಶದ ಗೋಟಾ¾ರ್‌ ಮೇಳ ಅಥವಾ ಕಲ್ಲು ಎಸೆಯುವ ಆಚರಣೆಯೂ ಒಂದು. ನೋಡುಗರಿಗೆ ಒಂದು ರೀತಿಯ ರೋಮಾಂಚನ ಉಂಟುಮಾಡುವ ಮತ್ತು ಅಷ್ಟೇ ಅಪಾಯಕಾರಿಯಾದ ಈ ಆಚರಣೆ ಇಂದಿಗೂ ಹಳೆಯ ಸಂಪ್ರದಾಯವಾಗಿದೆ.

ಮಧ್ಯಪ್ರದೇಶದ ಚಿಂದ್ವಾರದಿಂದ ಸುಮಾರು 70 ಕಿ.ಮೀ. ದೂರದಲ್ಲಿರುವ ಪಂದುರ್‌ ನಾ ಮತ್ತು ಸಾವರ್ಗಾನ್‌ ಎಂಬ ಹಳ್ಳಿಯ ನಿವಾಸಿಗಳ ನಡುವೆ ನಡೆಯುವ ಈ ಕಾಳಗ ಅತ್ಯಂತ ಕುತೂಹಲ ಮತ್ತು ಬೀಭತ್ಸವಾಗಿ ಸಾಗುತ್ತದೆ. ಈ ಎರಡು ಹಳ್ಳಿಗಳ ನಡುವೆ ಹರಿಯುವ ಜಾಮ್‌ ನದಿಯು ಈ ಆಚರಣೆಯ ಕೇಂದ್ರಬಿಂದು. ಈ ಆಚರಣೆಯು ಪ್ರತಿ ವರ್ಷದ ಭಾದ್ರಪದ ಮಾಸದ ಎರಡನೇ ದಿನ ನಡೆಯುತ್ತದೆ.

ಗೋಟಾರ್‌ ಮೇಳಕ್ಕೆ ಒಂದು ದಿನ ಬಾಕಿ ಇರುವಾಗಲೇ ಜಾಮ್‌ ನದಿಯ ಮಧ್ಯಭಾಗದಲ್ಲಿ ದೊಡ್ಡ ಮರದ ಕಾಂಡವನ್ನು ನಿಲ್ಲಿಸಿ ಅದರ ತುದಿಯಲ್ಲಿ ಧ್ವಜ ಹಾರಿಸಲಾಗುತ್ತದೆ. ಹಾಗೂ ನದಿಯ ಇಕ್ಕೆಲಗಳಲ್ಲಿ ಎರಡೂ ಹಳ್ಳಿಗಳವರು ಕಲ್ಲುಗಳನ್ನು ಗುಡ್ಡೆ ಹಾಕಿಕೊಳ್ಳುತ್ತಾರೆ. ಹಬ್ಬದ ದಿನ ಎರಡೂ ಹಳ್ಳಿಗಳ ಯಾರಾದರೂ ಒಬ್ಬ ವ್ಯಕ್ತಿ ಹೋಗಿ ಧ್ವಜವನ್ನು ತರಬೇಕು. ಯಾವ ಹಳ್ಳಿಯವರು ಧ್ವಜ ಪಡೆಯುವರೋ ಅವರೇ ವಿಜಯಶಾಲಿಗಳಾಗುತ್ತಾರೆ. ಹಾಗಾಗಿ ಆ ಕೆಲಸಕ್ಕೆ ಸಾವಿನ ಭಯವಿಲ್ಲದ ಧೃಡಕಾಯದ ಯುವಕರನ್ನು ಆಯ್ಕೆ ಮಾಡಿಕೊಂಡಿರುತ್ತಾರೆ.

ಗೋಟಾ¾ರ್‌ ಮೇಳದ ನಿಯಮ ಬಹಳ ಸರಳವಾಗಿದ್ದು ಇದರಲ್ಲಿ ಭಾಗವಹಿಸುವವರು ಅಂದರೆ ದ್ವಜವನ್ನು ತರಲು ಪ್ರಯತ್ನಿಸುವವರು ಇದೇ ತಮ್ಮ ಜೀವನದ ಅಂತಿಮ ದಿನ ಎಂದು ತಿಳಿದಿರಬೇಕು ಅಷ್ಟೆ. ಹಬ್ಬದ ದಿನ ಇಬ್ಬರೂ ನೀರಿಗೆ ಹಾರಿದಾಕ್ಷಣ ಒಮ್ಮೆಗೇ ಕಲ್ಲಿನ ಮಳೆ ಶುರುವಾಗುತ್ತದೆ. ತಮ್ಮ ಊರಿನ ಘನತೆ ಕಾಪಾಡಿಕೊಳ್ಳಲು ಎರಡೂ ಕಡೆಯವರು ಕಲ್ಲಿನ ಮಳೆ ಸುರಿಸುತ್ತಲೇ ಹೋಗುತ್ತಾರೆ. ಕೊನೆಗೆ ಧ್ವಜ ತಂದವರು ವಿಜಯಿಗಳಾಗುತ್ತಾರೆ. ಸ್ಥಳೀಯ ದಂತ ಕಥೆಯ ಪ್ರಕಾರ, ಗೋಟಾ¾ರ್‌ ಮೇಳದ ಆಚರಣೆ ಪಂದುರ್‌ ನಾ ರಾಜನ ಕತೆಯಿಂದ ಪ್ರೇರಿತವಾಗಿದೆ.

ಈ ರಾಜ, ಸಾವರ್ಗಾನ್‌ ನಗರದ ರಾಜನ ಮಗಳ ಸೌಂದರ್ಯದ ಬಗ್ಗೆ ಕೇಳಿದ ಮೇಲೆ ಆಕೆಯನ್ನು ಹೇಗಾದರೂ ಮಾಡಿ ಪಡೆಯುವ ಹಂಬಲ ಹೆಚ್ಚಾಯಿತು. ಧೈರ್ಯ ಸಾಹಸಗಳಿಗೆ ಹೆಸರಾದ ಆತ ನದಿ ದಾಟಿ ಹೋಗಿ ಆಕೆಯನ್ನು ಅಪಹರಿಸಿದ. ಸಾವರ್ಗಾನಿನ ಪ್ರಜೆಗಳಿಗೆ ಈ ವಿಷಯ ತಿಳಿಯುತ್ತಿದ್ದಂತೆ ಆವರು ಅಪಹರಣಕಾರನನ್ನು ಹಿಡಿಯಲು ದೌಡಾಯಿಸಿದರು. ಅವರು ಬರುವ ವೇಳೆಗೆ ಪಂದುರ್ನಾದ ರಾಜ ನದಿ ದಾಟಿದ್ದ. ಆದರೂ ಧೃತಿಗೆಡದ ಸಾವರ್ಗಾನ್‌ ಪ್ರಜೆಗಳು ಕಲ್ಲುಗಳನ್ನು ಆಯ್ದು ಬೀಸಿ ಆತನತ್ತ ಒಗೆದರು. ಇದನ್ನರಿತ ಪಂದುರ್‌ನಾ ರಾಜ್ಯದ ಪ್ರಜೆಗಳು ತಮ್ಮ ರಾಜನನ್ನು ಕಾಪಾಡಲು ಧಾವಿಸಿ ಅವರು ಕೂಡ ತಮ್ಮ ಕಡೆಯ ನದಿಯ ದಡದಲ್ಲಿದ್ದ ಕಲ್ಲುಗಳಿಂದ ಸಾವರ್ಗಾನ್‌ ಪ್ರಜೆಗಳತ್ತ ಬೀಸಿ ಒಗೆದು ಸೇಡು ತೀರಿಸಿಕೊಂಡರು. ತಮ್ಮ ರಾಜ ಸುರಕ್ಷಿತವಾಗಿ ಅರಮನೆಯನ್ನು ತಲುಪಲು ಅವಕಾಶ ಕಲ್ಪಿಸಿಕೊಟ್ಟರು.

ಇವತ್ತು ಗೋಟಾ¾ರ್‌ ಮೇಳ ಎನ್ನುವ ಕಲ್ಲು ಎಸೆಯುವ ಆಚರಣೆ ಸಂಪ್ರಾದಾಯವಾಗಿ ಉಳಿದಿದೆ. ಇಂಥ ಅಮಾನವೀಯ, ಭಯಾನಕ ಆಚರಣೆಯನ್ನು ಕೈಬಿಡಲು ಮಧ್ಯಪ್ರದೇಶ ಸರ್ಕಾರ ಮಾಡಿದ ಯಾವ ಮನವಿಯೂ ಕೈಗೂಡಿಲ್ಲ. ನೂರಾರು ಜನ ಗಾಯಗೊಳ್ಳುವ ಈ ಆಚರಣೆ ಅಪಾಯಕಾರಿಯಾದುದು.

– ಪುರುಷೋತ್ತಮ್‌ ವೆಂಕಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.