“ಚಿತ್ರಬ್ರಹ್ಮ’ನ ನೆನಪಿನಲ್ಲಿ ಸಂಗೀತ ಸಂಜೆ


Team Udayavani, May 16, 2019, 3:00 AM IST

puttanna

ಕನ್ನಡ ಚಿತ್ರರಂಗದ “ಚಿತ್ರಬ್ರಹ್ಮ’ ಖ್ಯಾತಿಯ ಹಿರಿಯ ನಿರ್ದೇಶಕ ದಿ. ಎಸ್‌.ಆರ್‌ ಪುಟ್ಟಣ್ಣ ಕಣಗಾಲ್‌ ಅವರ ಹೆಸರು, ಅವರ ಚಿತ್ರಗಳು ಇಂದಿಗೂ ಕನ್ನಡ ಚಿತ್ರರಂಗದಲ್ಲಿ, ಸಿನಿಪ್ರಿಯರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಇನ್ನು ಪುಟ್ಟಣ್ಣ ಕಣಗಾಲರ ಚಿತ್ರದ ಹಾಡುಗಳಂತೂ ಎವರ್‌ಗ್ರೀನ್‌ ಎನ್ನುವಂತೆ, ಕೇಳುಗರ ಬಾಯಲ್ಲಿ ಯಾವಾಗಲೂ ಗುನುಗುತ್ತಿರುತ್ತವೆ.

ಈಗ ಮತ್ತೂಮ್ಮೆ ಪುಟ್ಟಣ್ಣ ಕಣಗಾರ ಚಿತ್ರಗಳು ಮತ್ತು ಅವರ ಚಿತ್ರಗಳ ಹಾಡುಗಳನ್ನು ಮೆಲುಕು ಹಾಕುವಂಥ ಕಾರ್ಯಕ್ರಮವೊಂದು ಈ ವಾರಾಂತ್ಯದಲ್ಲಿ ಆಯೋಜನೆಯಾಗಿದೆ. ಇದೇ ಮೇ 18ರ ಭಾನುವಾರ, ಸಂಜೆ 6ಗಂಟೆಯಿಂದ ನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಪ್ರೇಮಚಂದ್ರಸಾಗರ್‌ ಆಡಿಟೋರಿಯಂನಲ್ಲಿ “ಮೂಕ ಹಕ್ಕಿಯು ಹಾಡುತಿದೆ’ ಎಂಬ ಹೆಸರಿನಲ್ಲಿ ಪುಟ್ಟಣ್ಣ ಕಣಗಾಲರ ಚಿತ್ರಗಳ ಗೀತಗಾಯನ ಕಾರ್ಯಕ್ರಮ ನಡೆಯುತ್ತಿದ್ದು,

ಈ ಕಾರ್ಯಕ್ರಮದಲ್ಲಿ, ಪುಟ್ಟಣ್ಣ ಕಣಗಾಲರ ಜೊತೆ ಕೆಲಸ ಮಾಡಿದ ಅನೇಕ ಕಲಾವಿದರು, ತಂತ್ರಜ್ಞರು, ಸಹವರ್ತಿಗಳು, ಕುಟುಂಬ ಸದಸ್ಯರು, ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆ. ಅಲ್ಲದೆ ಕಾರ್ಯಕ್ರಮದಲ್ಲಿ ಹಿರಿಯ ನಟ ಶ್ರೀನಾಥ್‌, ಜಯಂತಿ, ರಾಮಕೃಷ್ಣ, ಶಿವರಾಂ, ಜೈಜಗದೀಶ್‌, ಪದ್ಮವಾಸಂತಿ, ಅಪರ್ಣ, ನಿರ್ದೇಶಕ ಪಿ.ಹೆಚ್‌ ವಿಶ್ವನಾಥ್‌ ಮೊದಲಾದವರನ್ನು ಗೌರಸಲಾಗುತ್ತಿದೆ.

“ಮೂಕ ಹಕ್ಕಿಯು ಹಾಡುತಿದೆ’ ಸಂಗೀತ ಸಂಜೆ ಕಾರ್ಯಕ್ರಮ ವೆಂಕಟೇಶ್‌ ಮತ್ತು ದಿವ್ಯಶ್ರೀ ವೆಂಕಟೇಶ್‌ ಸಾರಥ್ಯದಲ್ಲಿ ನಡೆಯುತ್ತಿದ್ದು, ಇದರಲ್ಲಿ ಪುಟ್ಟಣ್ಣ ಕಣಗಾಲ್‌ ನಿರ್ದೇಶನದ ಜನಪ್ರಿಯ ಚಿತ್ರಗಳ ಸುಮಾರು ಐವತ್ತು ಗೀತೆಗಳನ್ನು ಸಿಂಚನ್‌ ದೀಕ್ಷಿತ್‌, ದಿವ್ಯಶ್ರೀ ವೆಂಕಟೇಶ್‌, ಕುಮಾರನ್‌ ಮುತ್ತುರಾಮನ್‌, ಮೇಘನಾ ಭಟ್‌, ಗೋವಿಂದ್‌ ಕರ್ನೂಲ್‌ ಸೇರಿದಂತೆ ಹಲವು ಗಾಯಗರು ವೇದಿಕೆಯಲ್ಲಿ ಪ್ರಸ್ತುತಪಡಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹಿರಿಯ ನಿರ್ದೇಶಕ ಕರಿಸುಬ್ಬು ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ 250 ರೂ ಪ್ರವೇಶ ದರವಿದ್ದು, ಕಾರ್ಯಕ್ರಮದಲ್ಲಿ ಸಂಗ್ರಹವಾಗುವ ಹಣವನ್ನು ನಿರಾಶ್ರಿತ ಮಕ್ಕಳು, ಮಹಿಳೆಯರು ಹಾಗೂ ಗೋ ಸಂರಕ್ಷಣಾ ಕೇಂದ್ರಗಳಿಗೆ ನೆರವು ನೀಡಲು ಬಳಸಿಕೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.