ಸರ್ಕಟನ್‌ ನಾಲೆ ಪರಿಶೀಲಿಸಿದ ಅಧಿಕಾರಿಗಳು


Team Udayavani, May 16, 2019, 3:00 AM IST

sarkatan

ಕೊಳ್ಳೇಗಾಲ: ನಗರದ ಹೃದಯ ಭಾಗದಲ್ಲಿರುವ ಸರ್ಕಟನ್‌ ನಾಲೆ ಕಾಮಗಾರಿ ಆರಂಭಗೊಂಡು ವರ್ಷವೇ ಪೂರೈಸಿದ್ದರೂ ಕಾಮಗಾರಿ ಪೂರ್ಣಗೊಳ್ಳದೆ ನಾಲೆ ಅಕ್ರಮ ಒತ್ತುವರಿಗೆ ಸಿಲುಕಿ ಗಬ್ಬುನಾರುತ್ತಿದೆ ಎಂದು ಉದಯವಾಣಿ ದಿನಪತ್ರಿಕೆಯಲ್ಲಿ ವಿಶೇಷ ವರದಿ ಹಿನ್ನೆಲೆಯಲ್ಲಿ ನಾಲೆಗೆ ಉನ್ನತ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಹೃದಯಭಾಗದಿಂದ ಆರಂಭಿಸಬೇಕಾಗಿದ್ದ ಸರ್ಕಟನ್‌ ನಾಲೆಯ ಕಾಮಗಾರಿಯನ್ನು ಅಧಿಕಾರಿಗಳು ಕೊನೆಯ ಭಾಗದಿಂದ ಆರಂಭಿಸಿ ಕಾಮಗಾರಿ ಸಂಪೂರ್ಣ ನನೆಗುದಿಗೆ ಬಿದ್ದಿರುವ ವರದಿಯನ್ನು ಕಳೆದ ಏ.22 ರಂದು ಉದಯವಾಣಿ ಪ್ರಕಟಿಸಿದ ಹಿನ್ನೆಲೆ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು, ಕಾಮಗಾರಿ ಕೂಡಲೇ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಮೈಸೂರಿನ ಕಬಿನಿ ನಾಲಾ ವಿಭಾಗದ ಸೂಪರಿಟೆಂಡೆಂಟ್‌ ಇಂಜಿನಿಯರ್‌ ಶ್ರೀಕಂಠ ಪ್ರಸಾದ್‌ ಸೂಚನೆ ನೀಡಿದರು.

ತಾಂತ್ರಿ ಕಾರಣದಿಂದ ಸಮಸ್ಯೆ: ಇದೇ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಇಂಜಿನಿಯರ್‌ ಶ್ರೀಕಂಠ ಪ್ರಸಾದ್‌, ಸರ್ಕಟನ್‌ ನಾಲೆ, ಕುಪ್ಪಮ್ಮ ಕಾಲುವೆ, ಹಂಪಾಪುರ ಕೆರೆಯ ನಾಲೆ ದುರಸ್ತಿಗೆ 20.30 ಕೋಟಿ ರೂ. ವೆಚ್ಚದಲ್ಲಿ ಅನುದಾನ ಬಿಡುಗಡೆಯಾಗಿದ್ದು, ಕುಪ್ಪಮ್ಮ ಕಾಲುವೆ ಕಾಮಗಾರಿ ಪ್ರಾರಂಭವಾಗಿದ್ದು, ಸರ್ಕಟನ್‌ ನಾಲೆಯಲ್ಲಿ ಹೂಳೆತ್ತಿಸಿದ ಅಧಿಕಾರಿಗಳು, ತಾಂತ್ರಿಕ ಕಾರಣದಿಂದ ನಂತರ ಕಾಮಗಾರಿ ಸಂಪೂರ್ಣ ನನೆಗುದಿಗೆ ಬಂದಿದೆ ಎಂದರು.

4 ತಿಂಗಳಲ್ಲಿ ಕಾಮಗಾರಿ ಪೂರ್ಣ: ನಾಲೆಯ ಕಾಮಗಾರಿಯನ್ನು 4 ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಚಿಕ್ಕರಂಗನಾಥ ಕೆರೆಯ ಕೋಡಿಯಿಂದ ಕೊಂಗಳಕೆರೆವರೆಗೂ ಸುಮಾರು 1600 ಮೀ. ಉದ್ದ, 7.5 ಮೀ. ಅಗಲದಲ್ಲಿ ಬಾಕ್ಸ್‌ ಮಾದರಿಯಲ್ಲಿ ನಿರ್ಮಾಣ ಮಾಡಲಾಗುವುದು. ಚರಂಡಿ ಮಧ್ಯಭಾಗದಲ್ಲಿ ಗಟ್ಟಿ ಮಣ್ಣು ಸಿಗುವವರೆಗೂ ನಾಲೆಯ ಹಳೆಯ ಮಣ್ಣುಗಳನ್ನು ಹೊರ ತೆಗೆಯಲಾಗುವುದು. ನಂತರ ರೋಲ್‌ ಮಾಡಿ ಎರಡು ಕಡೆ ಗೋಡೆಗಳನ್ನು ನಿರ್ಮಾಣ ಮಾಡಿ, ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಇಲಾಖೆಗಳ ಗುದ್ದಾಟ: ನಾಲೆಯ ಉದ್ದಕ್ಕೂ ಇದ್ದ ಮರಗಳನ್ನು ಅರಣ್ಯ ಇಲಾಖೆಯವರು ತೆರವು ಮಾಡುವಲ್ಲಿ ಮೆದು ಧೋರಣೆ ತೋರಿದರು ಮತ್ತು ನಾಲೆಯ ಎರಡು ಬದಿಯಲ್ಲಿ ಅಕ್ರಮ ಒತ್ತುವರಿ ಸ್ಥಳವವನ್ನು ತೆರವು ಮಾಡುವಲ್ಲಿ ನಗರಸಭೆ ಅಧಿಕಾರಿಗಳು ಸಹಕಾರ ನೀಡದ ಪ್ರತಿಫ‌ಲವಾಗಿ ಕಾಮಗಾರಿ ವಿಳಂಬವಾಗಬೇಕಾಯಿತು ಎಂದು ಇಲಾಖೆಗಳ ಒಳಗಿನ ಗುದ್ದಾಟವನ್ನು ಹೊರ ಹಾಕಿದರು.

ವಿನ್ಯಾಸ ಶಾಖೆಯ ಎಇಇ ಚಂದ್ರಶೇಖರ, ನಿವೃತ್ತ ಸೂಪರಿಟೆಂಡೆಂಟ್‌ ಎಂಜಿನಿಯರ ಸಂಪತ್‌ ಕುಮಾರ್‌, ಕಬಿನಿ ನಾಲಾ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಉಮೇಶ್‌ ಮತ್ತು ಸಿಬ್ಬಂದಿ ವರ್ಗ ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.