ಸುಮಲತಾ ಅಂಬರೀಷ್‌ ಗೆಲುವು ಸಾಧಿಸುತ್ತಾರೆ: ಯಶ್‌


Team Udayavani, May 16, 2019, 11:16 AM IST

man-1

ಮದ್ದೂರು: ಮಂಡ್ಯ ಲೋಕಸಭಾ ಕ್ಷೇತ್ರದ ಫ‌ಲಿತಾಂಶ ಕುರಿತಾಗಿ ಸ್ಪಷ್ಟವಾಗಿ ಹೇಳದೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಗೆಲುವು ಸಾಧಿಸಲಿದ್ದಾರೆ ಎಂದಷ್ಟೇ ಚಿತ್ರನಟ ಯಶ್‌ ತಿಳಿಸಿದರು.

ಮದ್ದೂರು ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮ ದಲ್ಲಿ ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಸುಮಲತಾ ಅಂಬರೀಷ್‌ ಪರ ಉತ್ತಮ ವಾತಾವರಣ ವಿದ್ದು ಈಗಾಗಲೇ ಗೆಲುವಿನ ಅಂತರ ಹೇಳಿದರೆ ನಾವೇ ಕೊಚ್ಚಿ ಕೊಂಡಂತಾಗುತ್ತದೆ ಎಂದರು. ಮಂಡ್ಯದ ಫ‌ಲಿತಾಂಶವನ್ನು ನಿರ್ದಿಷ್ಠವಾಗಿ ಹೇಳ್ಳೋದಕ್ಕೆ ಆಗುವು ದಿಲ್ಲ. ಜಿಲ್ಲೆಯ ಮತದಾರರು ಯಾರನ್ನು ಕೈಹಿಡಿಯಲಿ ದ್ದಾರೆ ಎಂಬುದು ಮೇ 23ರ ಬಳಿಕವೇ ನಿರ್ಧಾರವಾಗಲಿದೆ ಎಂದು ಹೇಳಿದರು.

ಜನತೆ ಪರ:ಚುನಾವಣೆ ಮುಗಿದ ಬಳಿಕ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸದಿರುವ ಬಗ್ಗೆ ಎದುರಾಳಿಗಳು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಮಂಡ್ಯಕ್ಕೆ ಹಲವಾರು ಬಾರಿ ಆಗಮಿಸಿದ್ದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಹಲವಾರು ಗ್ರಾಮ ಗಳಿಗೆ ಭೇಟಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರ ಜತೆ ನಿಲ್ಲುವುದಾಗಿ ತಿಳಿಸಿದರು.

ತಾವು ಮಂಡ್ಯ ರಾಜಕಾರಣಕ್ಕೆ ಬರುವುದಿಲ್ಲವೆಂದ ರಲ್ಲದೇ ತಾವು ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಗೆಲುವು ಕಂಡಲ್ಲಿ ಉತ್ತಮ ಕೆಲಸ ಕಾರ್ಯ ಕೈಗೊಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿದ್ದಾರೆಂದರು.

ಜೋಡೆತ್ತು ಸಿನಿಮಾ: ಜೋಡೆತ್ತು ಟೈಟಲ್ ನೋಂದಣಿ ಆಗಿದ್ದು ತಾನು ಆ ಸಿನಿಮಾದಲ್ಲಿ ನಟಿಸುತ್ತಿಲ್ಲ. ದರ್ಶನ್‌ ಪ್ರೀತಿಯಿಂದ ಜೋಡೆತ್ತೆಂದು ಬಣ್ಣಿಸಿದ್ದರು. ತನಗಿಂತ ಹಿರಿಯ ನಟರಾದ ದರ್ಶನ್‌ ಹೇಳಿದ ಟೈಟಲ್ ಎಲ್ಲೆಡೆ ಫೇಮಸ್‌ ಆಯಿತು. ದರ್ಶನ್‌ ಅವರಂತಹ ದೊಡ್ಡ ಸ್ಟಾರ್‌ ಜತೆ ಸಿನಿಮಾ ಮಾಡಬೇಕೆಂದರೆ ಒಳ್ಳೆ ಕಥೆ ಸಿಗಬೇಕಿದೆ. ಕಥೆ ಬಂದರೆ ದರ್ಶನ್‌ರ ಜತೆ ಸಿನಿಮಾ ಮಾಡುತ್ತೇನೆಂದರು. ಇನ್ನು ನಿಖೀಲ್ ಎಲ್ಲಿದಿಯಪ್ಪಾ…ಸಿನಿಮಾಗೆ ಈಗಲೇ ಶುಭ ಕೋರಿದ ಅವರು ಕೆಜಿಎಫ್-2 ಸಿನಿಮಾ ಚಿತ್ರೀಕರಣ ಶುರುವಾಗುತ್ತಿದೆ ಎಂದರು.

ಅಭಿನಂದನೆ: ಕೆರೆಮೇಗಲದೊಡ್ಡಿಗೆ ತೆರಳುವ ಮಾರ್ಗಮಧ್ಯೆ ಶಿವಪುರದಲ್ಲಿ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ರಾಧಿಕ, ಹಾಲಪ್ಪ ದಂಪತಿಗಳ ಪುತ್ರಿ ಲಹರಿ ಅವರ 3ನೇ ವರ್ಷದ ಹುಟ್ಟು ಹಬ್ಬದ ವೇಳೆ ಪಾಲ್ಗೊಂಡು ಕೇಕ್‌ ಕತ್ತರಿಸಿ ಶುಭ ಹಾರೈಸಿದರು. ಸ್ಥಳದಲ್ಲಿದ್ದ ನಟ ಯಶ್‌ ಅವರ ನೂರಾರು ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು.

ಈ ವೇಳೆ ಪುರಸಭೆ ಸದಸ್ಯರಾದ ಸಚಿನ್‌, ನಂದೀಶ್‌, ಮಾಜಿ ಅಧ್ಯಕ್ಷ ಎಂ.ಪಿ.ಅಮರ್‌ಬಾಬು, ಮುಖಂಡರಾದ ಇಂಡುವಾಳ ಸಚ್ಚಿದಾನಂದ, ನಾಗೇಶ್‌, ಎಪಿಎಂಸಿ ಮಾಜಿ ನಿರ್ದೇಶಕ ಮಹೇಂದ್ರ ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.