ಬೆಳೆ ಕುಸಿತದಿಂದ ಗಗನಕ್ಕೇರಿದೆ ತರಕಾರಿ ಬೆಲೆ


Team Udayavani, May 16, 2019, 12:21 PM IST

tmk-1

ಹುಳಿಯಾರು: ಜನರಿಗೆ ಈಗ ತರಕಾರಿ ಬೆಲೆಯ ತಲೆ ಬಿಸಿ ಹೆಚ್ಚಾಗುತ್ತಿದೆ. ವಾರದಿಂದ ವಾರಕ್ಕೆ ತರಕಾರಿ ಬೆಲೆ ಏರಿತ್ತಿದ್ದು, ಜನ ತರಕಾರಿ ಕೊಳ್ಳಲು ಹಿಂದು ಮುಂದು ನೋಡುವಂತ್ತಾಗಿದೆ. ಹೋಟೆಲ್ಗಳಲ್ಲಂತಲೂ ತರ ಕಾರಿ ಸಾರು ಸಿಗದಾಂತಾಗಿದೆ.

ಮದುವೆ ಸೇರಿದಂತೆ ಶುಭ ಕಾರ್ಯ ಮಾಡುವವರು ತರಕಾರಿ ಬೆಲೆ ಕೇಳಿ ಬೆಚ್ಚಿ ಬೀಳುತ್ತಿದ್ದಾರೆ. ಹುಳಿಯಾರು ಮಾರುಕಟ್ಟೆಗೆ ಹಾಸನದಿಂದ ತರಕಾರಿ ಬರುತ್ತದೆ. ಆದರೆ, ಹಾಸನ ದಲ್ಲೇ ತರಕಾರಿ ಬೆಳೆ ಕುಸಿದಿದ್ದು, ಬೆಲೆ ಹೆಚ್ಚಳವಾಗಿದೆ. ಇದರ ಪರಿಣಾಮ ಹುಳಿಯಾರಿನಲ್ಲೂ ಬೆಲೆ ಗಗನ ಮುಖೀಯಾಗಿದೆ. ಇದಕ್ಕೆ ಮಳೆ ಕೊರತೆ, ಬಿಸಿಲಿನ ಝಳ ಹೆಚ್ಚಳ ಹಾಗೂ ಅಂತರ್ಜಲ ಕುಸಿತದಿಂದ ಕೃಷಿಗೆ ನೀರಿನ ಕೊರತೆ ಎದುರಾಗಿ ಸದ್ಯ ತರಕಾರಿ ಬೆಳೆಯು ವವರ ಸಂಖ್ಯೆ ಕಡಿಮೆಂಯಾಗಿರುವುದು ಕಾರಣ ಎನ್ನಲಾಗಿದೆ.

ತರಕಾರಿಗೆ ಅಧಿಕ ಬೇಡಿಕೆ: ಮದುವೆ ಮತ್ತಿತರ ಶುಭ ಕಾರ್ಯಗಳ ಹೆಚ್ಚಳ ಮತ್ತು ರಂಜಾನ್‌ ಮಾಸದ ಕಾರಣಕ್ಕೆ ತರಕಾರಿಗಳಿಗೆ ಬೇಡಿಕೆ ಸಹ ಹೆಚ್ಚಿದೆ. ಆದರೆ, ಪೂರೈಕೆಯ ಪ್ರಮಾಣ ಕಡಿಮೆ ಇದೆ. ಇದರಿಂದ ಸಹಜವಾಗಿ ಬೆಲೆ ಹೆಚ್ಚಳವಾಗಿದೆ. ವಾರದಿಂದ ವಾರಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದೆ.

ಕೆ.ಜಿ ಹುರಳಿಕಾಯಿಗೆ 80 ರೂ.: ಕಳೆದ ವಾರಕ್ಕೆ ಹೋಲಿಸಿದರೆ ತರಕಾರಿ ಬೆಲೆಗಳಲ್ಲಿ ಏರಿಕೆ ಕಂಡು ಬಂದಿದೆ. ಜನಪ್ರಿಯ ತರಕಾರಿಗಳಲ್ಲಿ ಒಂದಾದ ಹುರಳಿಕಾಯಿ (ಬೀನ್ಸ್‌) ಕಳೆದ ವಾರ ಕೆ.ಜಿ.ಗೆ 40 ರೂ. ಇತ್ತು. ಈ ವಾರ 80 ರೂ.ಗೆ ಜಿಗಿದಿದೆ. ಹಸಿರು ಮೆಣಸಿಕಾಯಿ 60-70 ರೂ. ಆಗಿದೆ. ಕ್ಯಾರೆಟ್ 40 ರೂ. ಆಗಿದೆ. ಟೊಮೊಟೋ ಅಂತೂ ದಾಖಲೆಯ ಬೆಲೆ ಅಂದರೆ 50-60 ರೂ. ಆಗಿದೆ. ಉಳಿದಂತೆ ಬೆಂಡೆಕಾಯಿ, ಹೂ ಕೋಸು, ಮೂಲಂಗಿ, ಆಲೂಗಡ್ಡೆ, ಉಳ್ಳಾಗಡ್ಡಿ ಬೆಲೆಯಲ್ಲಿ ಅಲ್ಪಸ್ವಲ್ಪ ವ್ಯತ್ಯಾಸವಾಗಿದೆ.

ಸೊಪ್ಪಿನ ಬೆಲೆ ಸ್ವಲ್ಪ ಕಡಿಮೆ: ಹುಳಿಯಾರು ಸುತ್ತಮುತ್ತ ಸೊಪ್ಪು ಬೆಳೆಗಾರರು ಹೆಚ್ಚಾಗಿದ್ದ ಕಾರಣ ಕೊತ್ತಂಬರಿ, ಪಾಲಕ್‌, ಮೆಂತ್ಯೆ, ದಂಟು ಹೀಗೆ ವಿವಿಧ ಸೊಪ್ಪುಗಳು ಕಡಿಮೆ ದರದಲ್ಲಿ ಸಿಗುತ್ತಿತ್ತು. ಆದರೆ, ಅಂತರ್ಜಲ ಕುಸಿತವಾಗಿ ಕೊಳವೆ ಬಾವಿಯಲ್ಲಿ ನೀರು ಬಾರದಾಗಿ ಸೊಪ್ಪು ಬೆಳೆಯುವವರು ಸಹ ಕಡಿಮೆಯಾಗಿದ್ದಾರೆ. ಪರಿಣಾಮ ಸೊಪ್ಪಿನ ಬೆಲೆ ಸಹ ಹೆಚ್ಚಳವಾಗಿದೆ. ಕೆಲವೊಂದು ಸಂದರ್ಭದಲ್ಲಿ ಒಂದು ಕಟ್ಟು ಕೊತ್ತಂಬರಿ ಸೊಪ್ಪಿನ ಬೆಲೆ ಹತ್ತದಿನೈದು ರೂ.ಗಳಿಗೂ ಹೆಚ್ಚಾದ ನಿದರ್ಶನವಿದೆ.

ವ್ಯಾಪಾರಗಳಿಗೆ ನಷ್ಟವಾಗುವ ಸಾಧ್ಯತೆ: ತರಕಾರಿ ಬೆಲೆ ಜಾಸ್ತಿಯಾಗಿರುವ ಕಾರಣ ಹಿಂದೆಲ್ಲ ಕೆ.ಜಿಗಟ್ಟಲೇ ಖರೀದಿಸುತ್ತಿದ್ದವರು ಈಗ ಅರ್ಧ, ಕಾಲು ಕೆ.ಜಿ ಸಾಕೆನ್ನುತ್ತಿದ್ದಾರೆ. ಅಲ್ಲದೆ, ಬೆಲೆಗಳು ಹೆಚ್ಚಾದ ಪರಿಣಾಮ ತರಕಾರಿ ಕೊಳ್ಳುವವರ ಸಂಖ್ಯೆ ಕಡಿಮೆ ಯಾಗುತ್ತಿದೆ. ಮಾಂಸಹಾರಿಗಳಂತೂ ಕೆ.ಜಿ.ತರಕಾರಿಗೆ ಕೆ.ಜಿ.ಕೋಳಿ ಬರುತ್ತದೆ ಎಂದು ಗೇಲಿ ಮಾಡುತ್ತಿದ್ದಾರೆ.

ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರು ಬೀನ್ಸ್‌, ಮೆಣಸಿನ ಕಾಯಿ, ಟೊಮೊಟೋ ಖರೀದಿಸಲು ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ನಮ್ಮ ವ್ಯಾಪಾರಕ್ಕೆ ಪೆಟ್ಟು ಬಿದ್ದಿದೆ ಎಂದು ತರಕಾರಿ ವ್ಯಾಪಾರಿ ಖಾಜಾಪೀರ್‌ ಹೇಳುತ್ತಾರೆ.

ಒಟ್ಟಾರೆ ಬೆಲೆ ಏರಿಕೆಯ ಬಿಸಿ ಮಧ್ಯಮ ಮತ್ತು ಬಡ ವರ್ಗದ ಮೇಲೆ ತಟ್ಟುತ್ತಿದೆ. ಅಲ್ಲದೆ, ಹೋಟೆಲ್ ಉದ್ಯಮದ ಮೇಲೂ ತರಕಾರಿ ಏರಿಕೆಯ ಬಿಸಿ ತಟ್ಟಿದೆ. ಈಗ ಮಳೆ ಬಂದು ರೈತರು ತರಕಾರಿ ಬೆಳೆಯಲು ಮುಂದಾದರೂ ಅವು ಮಾರುಕಟ್ಟೆಗೆ ಬರುವುದು ಕನಿಷ್ಠ ಎಂದರೂ ಎರಡು- ಮೂರು ತಿಂಗಳು ಬೇಕಾ ಗುತ್ತದೆ. ಅಲ್ಲಿಯವರೆವಿಗೂ ತರಕಾರಿ ಬೆಲೆ ಎಲ್ಲಿಗೆ ಹೋಗಿ ಮುಟ್ಟುತ್ತದೋ ಊಹಿಸಲಾಗದಾಗಿದೆ.

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರು, ಈಗ ನಿತ್ಯ ಬಳಕೆಯ ತರಕಾರಿ ಬೆಲೆಯೂ ಗಗನಕ್ಕೇರುತ್ತಿ ರುವ
ಕಾರಣ ಹೈರಾಣಾಗಿ ದ್ದಾರೆ. ಮುಂಗಾರು ಪೂರ್ವ ಮಳೆ ಕೈಕೊಟ್ಟಿರುವ ಕಾರಣ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಮಹಿಳೆ ಯರಂತೂ ದಿನನಿತ್ಯ ಯಾವ ಅಡುಗೆ ಮಾಡು ವುದು ಎಂಬ ಚಿಂತೆಗೀಡಾಗಿ ಹೆಚ್ಚಾಗಿ ಸೊಪ್ಪಿನ ಸಾರು ಮಾಡಲು ಮುಂದಾಗುತ್ತಿದ್ದಾರೆ.
●ಪುಟ್ಟರಾಜು, ಗ್ರಾಹಕ, ಹುಳಿಯಾರು

● ಎಚ್.ಬಿ.ಕಿರಣ್‌ಕುಮಾರ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.