ಇವನ್ಯಾರ ಮಗನೋ ಹಿಂಗವ್ನಲ್ಲ…

ಪಿಕ್ಚರ್‌ ಅಬಿ ಬಾಕಿ ಹೈ...

Team Udayavani, May 17, 2019, 6:00 AM IST

16

ಸಾಮಾನ್ಯವಾಗಿ ಹೀರೋಗಳನ್ನ ಸಿನಿಮಾಗಳಲ್ಲಿ ಭರ್ಜರಿ ಬಿಲ್ಡಪ್‌ ಸೀನ್‌ಗಳ ಮೂಲಕ, ಅದ್ಧೂರಿ ಸಾಂಗ್ಸ್‌ ಮೂಲಕ ಇಂಟ್ರಡ್ನೂಸ್‌ ಮಾಡುವುದನ್ನು ನೀವೆಲ್ಲ ನೋಡಿರುತ್ತೀರಿ. ಆದರೆ ಇಲ್ಲೊಂದು ಚಿತ್ರತಂಡ ಚಿತ್ರ ಬಿಡುಗಡೆಗೂ ಮೊದಲೇ ಹೀರೋಗಾಗಿಯೇ ವಿಶೇಷ ಮ್ಯೂಸಿಕ್‌ ಅಲ್ಬಂ ಒಂದನ್ನು ಮಾಡಿ ಆ ಮೂಲಕ ಹೀರೋ ಇಂಟ್ರೋಡಕ್ಷನ್‌ ಕೊಟ್ಟು ಬಳಿಕ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ.

ಅಂದಹಾಗೆ, ಆ ಮ್ಯೂಸಿಕ್‌ ಅಲ್ಬಂ ಹೆಸರು “ಏ ಸೋನಾ…’ ಹಲವು ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಬಸವರಾಜ್‌ ಪಡಕೋಟೆ ಈ ಮ್ಯೂಸಿಕ್‌ ಅಲ್ಬಂ ಅನ್ನು ನಿರ್ಮಿಸಿದ್ದು, ಈ ಅಲ್ಬಂ ಮೂಲಕ ತಮ್ಮ ಪುತ್ರ ರಘು ಪಡಕೋಟೆ ಅವರನ್ನು ಹೀರೋ ಆಗಿ ಪ್ರೇಕ್ಷಕರಿಗೆ ಪರಿಚಯಿಸಿದ್ದಾರೆ. “ಏ ಸೋನಾ…’ ಅಲ್ಬಂನ ಹಾಡಿನಲ್ಲಿ ರಘು ಪಡಕೋಟೆ ಅವರಿಗೆ ನಾಯಕಿಯಾಗಿ ಶಾಲಿನಿ ಗೌಡ ಹೆಜ್ಜೆ ಹಾಕಿದ್ದಾರೆ. ಸರಿಗಮಪ ಖ್ಯಾತಿಯ ಸುನೀಲ್‌, ಈ ಅಲ್ಬಂನ ಹಾಡಿಗೆ ಸಂಗೀತ ಸಂಯೋಜಿಸಿ, ಹಾಡಿಗೆ ಧ್ವನಿಯಾಗಿದ್ದಾರೆ. ಜೊತೆ ಹಾಡಿನಲ್ಲಿ ತೆರೆಮೇಲೆ ಕೂಡ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ “ಏ ಸೋನಾ…’ ಮ್ಯೂಸಿಕ್‌ ಅಲ್ಬಂ ಅದ್ಧೂರಿಯಾಗಿ ಬಿಡುಗಡೆಯಾಯಿತು. ಕನ್ನಡಪರ ಹೋರಾಟಗಾರ ಟಿ. ಎ. ನಾರಾಯಣ ಗೌಡ, ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು, ನಟ ರಾಮ್‌, ಗಣೇಶ್‌ ರಾವ್‌ ಕೇಸರ್ಕರ್‌ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು, “ಏ ಸೋನಾ…’ ಮ್ಯೂಸಿಕ್‌ ಅಲ್ಬಂ ಮತ್ತು ರಘು ಪಡಕೋಟೆ ನಾಯಕನಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರ “ಯಾರ್‌ಮಗ’ ಚಿತ್ರದ ಟೈಟಲ್‌ ಪೋಸ್ಟರ್‌ ಅನ್ನು ಅನಾವರಣಗೊಳಿಸಿ, ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ವೇಳೆ ಮಾತನಾಡಿದ ನವನಟ ರಘು ಪಡಕೋಟೆ, “ಬಾಲ್ಯದಿಂದಲೂ ಚಿತ್ರರಂಗದತ್ತ ಆಸಕ್ತಿ ಬೆಳೆಸಿಕೊಂಡಿರುವ ನಾನು ಇಲ್ಲೇ ಏನಾದರೂ ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ ಇದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಚಿತ್ರರಂಗಕ್ಕೆ ಬರುವುದಕ್ಕೆ ಮುಂಚೆ ಬಹಳ ವರ್ಷಗಳಿಂದ ನೃತ್ಯ ಕಲಿಕೆ, ಅಭಿನಯದ ತರಬೇತಿ ಪಡೆದುಕೊಳ್ಳುತ್ತಿದ್ದೇನೆ. ಏ ಸೋನಾ… ಮ್ಯೂಸಿಕ್‌ ಅಲ್ಬಂ ಮೂಲಕ ನನ್ನ ಪ್ರತಿಭೆಯನ್ನು ಪ್ರೇಕ್ಷಕರಿಗೆ ಪರಿಚಯ ಮಾಡಿ ನಂತರ ಚಿತ್ರದಲ್ಲಿ ಅಭಿನಯಿಸುವ ನಿರ್ಧಾರಕ್ಕೆ ಬಂದೆ’ ಎಂದರು.

ಚಿತ್ರರಂಗ ಮತ್ತು ಅಭಿನಯದ ಕಡೆಗೆ ರಘು ಅವರಿಗಿದ್ದ ಆಸಕ್ತಿಯನ್ನು ನೋಡಿ ರಘು ಅವರ ತಂದೆ ಬಸವರಾಜ್‌ ಪಡಕೋಟೆ ತಮ್ಮ “ಪಡಕೋಟೆ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಚೊಚ್ಚಲ ಬಾರಿಗೆ “ಯಾರ್‌ಮಗ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸುರೇಶ್‌ ರಾಜು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಲೋಕಿ ಸಂಗೀತ ಸಂಯೋಜಿಸುತ್ತಿದ್ದು, ಚಿತ್ರಕ್ಕೆ ಸತೀಶ್‌ ಛಾಯಾಗ್ರಹಣವಿದೆ. ಯಾರ್‌ಮಗ’ ಚಿತ್ರದಲ್ಲಿ ನಾಯಕ ರಘು ಪಡಕೋಟೆಗೆ ನವನಟಿ ವಿದ್ಯಾ ಪ್ರಭು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ಹಲವು ಹಿರಿಯ, ಕಿರಿಯ ಕಲಾವಿದರ ತಾರಾಗಣ ಇರಲಿದೆ ಎಂದಿದೆ ಚಿತ್ರತಂಡ.

ಸದ್ಯ “ಯಾರ್‌ಮಗ’ ಚಿತ್ರದ ಚಿತ್ರೀಕರಣಕ್ಕೆ ಅಣಿಯಾಗಿರುವ ಚಿತ್ರತಂಡ, ಇದೇ ವರ್ಷಾಂತ್ಯಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ. “ಯಾರ್‌ಮಗ’ ಚಿತ್ರದ ಮೂಲಕ ಬೆಳ್ಳಿತೆರೆ ಪ್ರವೇಶಿಸಲು ಸಿದ್ಧತೆ ಮಾಡಿಕೊಂಡಿರುವ ನವನಟ ರಘು ತೆರೆಮೇಲೆ ಎಷ್ಟರ ಮಟ್ಟಿಗೆ ಕಮಾಲ್‌ ಮಾಡಲಿದ್ದಾರೆ ಅನ್ನೋದಕ್ಕೆ ಚಿತ್ರ ತೆರೆಗೆ ಬಂದ ಮೇಲಷ್ಟೇ ಉತ್ತರ ಸಿಗಲಿದೆ.

ಜಿ.ಎಸ್‌.ಕೆ ಸುಧನ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

ಇಂದಿನಿಂದ ತೆರೆಯಲ್ಲಿ ಅನ್ನ ಪ್ರಸಾದ

Anna Movie; ಇಂದಿನಿಂದ ತೆರೆಯಲ್ಲಿ ‘ಅನ್ನ’ ಪ್ರಸಾದ

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Sandalwood; 8 ತಿಂಗಳು 150 ಸಿನಿಮಾ.. ಗೆದಿದ್ದು ಕೆಲವು, ಸೋತಿದ್ದು ಹಲವು

Sandalwood; 8 ತಿಂಗಳು 150 ಸಿನಿಮಾ.. ಗೆದ್ದಿದ್ದು ಕೆಲವು, ಸೋತಿದ್ದು ಹಲವು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.