ಪ. ಪಂ.ನಿಂದ 7 ಲಕ್ಷ ರೂ. ಮೀಸಲು

ಮಳೆಗಾಲ: ಬೆಳ್ತಂಗಡಿ ತಾಲೂಕು ಆಡಳಿತ ಸಿದ್ಧತೆ

Team Udayavani, May 17, 2019, 6:00 AM IST

20

ಬೆಳ್ತಂಗಡಿ: ಮಳೆಗಾಲ ಎದುರಿಸಲು ತಾಲೂಕು ಆಡಳಿತದಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಈಗಾಗಲೇ ತಹಶೀಲ್ದಾರ್‌ ಸಮ್ಮುಖದಲ್ಲಿ ಎಲ್ಲ ಅಧಿಕಾರಿ ವರ್ಗದೊಂದಿಗೆ ಒಂದು ಸುತ್ತಿನ ಪೂರ್ವಭಾವಿ ಸಭೆ ನಡೆಸಲಾಗಿದೆ.

ಮಾನ್ಸೂನ್‌ ಮುನ್ನೆಚ್ಚರಿಕೆಯಾಗಿ ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಅಪಾಯ ಕಾರಿ ಪ್ರದೇಶವನ್ನು ಗುರುತಿಸುವ ಕೆಲಸ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಪಾಯಕಾರಿ ಪ್ರದೇಶದಲ್ಲಿರುವವರ ಮಾಹಿತಿ ಕಲೆಹಾಕುವ ವ್ಯವಸ್ಥೆ ಮಾಡಲಾಗಿದ್ದು, ಸರಕಾರಿ ಮೇಲಧಿಕಾರಿ ಯಿಂದ ಹಿಡಿದು ಡಿ ದರ್ಜೆ ನೌಕರರ ವರೆಗೆ ಇಲಾಖೆಯಲ್ಲಿ ಮಾಹಿತಿ ಸಂಗ್ರಹಿಸಿಡಲಾಗಿದೆ. ಯಾವುದೇ ಅಧಿಕಾರಿ ಹೆಡ್‌ಕ್ವಾಟ್ರಸ್‌ ಬಿಡದಂತೆ ಸೂಚಿಸಲಾಗಿದ್ದು, ಜೂನ್‌ ಮೊದಲ ವಾರದೊಳಗೆ ತಂಡ ರಚಿಸಲಾಗುತ್ತದೆ ಎಂದು ತಹಶೀಲ್ದಾರ್‌ ತಿಳಿಸಿದ್ದಾರೆ.

ಚಾರ್ಮಾಡಿಯಲ್ಲಿ ಕ್ರೇನ್‌ ನಿಯೋಜನೆ
ಚಾರ್ಮಾಡಿ ಪ್ರದೇಶದಲ್ಲಿ ಸಣ್ಣ ರಸ್ತೆಯಾಗಿರುವುದರಿಂದ 3 ಕ್ರೇನ್‌ ನಿಯೋಜಿಸಲಾಗುತ್ತದೆ. ಅಪಘಾತ ಸಂದರ್ಭ ಅರ್ಧ ಗಂಟೆಯೊಳಗೆ ತಲುಪುವಂತೆ ಕ್ರಮ ಕೈಗೊಳ್ಳುವ ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸ್ಥಳೀಯವಾಗಿ ಹಿಟಾಚಿ, ಕ್ರೇನ್‌ ಮಾಲಕರ ಕುರಿತು ಮಾಹಿತಿ ಪಡೆಯಲಾಗಿದೆ.

6 ಟ್ರೀ ಕಟ್ಟಿಂಗ್‌ಗೆ ಯಂತ್ರ
ಮಳೆಗಾಲಕ್ಕೂ ಮುನ್ನ ರಸ್ತೆ ಅಂಚಿ ನಲ್ಲಿರುವ ಅಪಾಯಕಾರಿ ಮರ ತೆರವು ಹಾಗೂ ಕಟಾವಿಗೆ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಸ್ಪಂದಿಸಿದೆ. ತಾಲೂಕು ಆಡಳಿತದಲ್ಲಿ 2 ಯಂತ್ರಗಳಿದ್ದು, ಅರಣ್ಯ ಅಧಿಕಾರಿಗಳ ತಂಡದಲ್ಲಿ 2, ಅಗ್ನಿಶಾಮಕ ಇಲಾಖೆಯಲ್ಲಿ 2 ಮರ ಕಟಾವು ಯಂತ್ರ ಇರಿಸಲಾಗಿದೆ. 1 ಬೋಟ್‌ ಇದ್ದು, ಸುಸ್ಥಿತಿಯಲ್ಲಿ ಇಡಲು ಸೂಚಿಸಲಾಗಿದೆ.

ಈಜುಗಾರರ ತಂಡ ರಚನೆ
ತಾಲೂಕು ವ್ಯಾಪ್ತಿಯಲ್ಲಿರುವ ಈಜು ಗಾರರ ತಂಡವನ್ನು ರಚಿಸಲಾಗುವು ದರೊಂದಿಗೆ ಹೊರ ವಲಯಗಳಲ್ಲಿರುವ ಪರಿಣತರ ಮಾಹಿತಿ ಪಡೆಯಲಾಗಿದೆ. ತುರ್ತು ವಿಕೋಪ ಸಂದರ್ಭ ಮಂಗ ಳೂರು ಪ್ರಕೃತಿ ವಿಕೋಪ ತಂಡ (ಎನ್‌ಡಿಆರ್‌ಎಫ್‌) ದಿಂದಲೂ ಸಹಾಯ ಪಡೆಯ ಲಾಗುತ್ತದೆ. ಜಿಲ್ಲಾಧಿಕಾರಿ ಅನುಮತಿ ಪಡೆದು ಸಹಾಯ ಕೋರಲಾಗುತ್ತದೆ. ವೇಣೂರು ಫಲ್ಗುಣಿ ನದಿ ಸಮೀಪವೂ ಬೋಟ್‌ ನಿಯೋಜಿಸಲಾಗುತ್ತಿದೆ. ಸರ ಕಾರಿ ವಾಹನದಲ್ಲಿ ಹಗ್ಗ ಮತ್ತು ಕತ್ತಿ ಇಟ್ಟು ಕೊಳ್ಳಲು ಸೂಚಿಸಲಾಗಿದೆ.

ವಯರ್‌ಲೆಸ್‌ ಕನೆಕ್ಟಿವಿಟಿ
ನೆಟ್‌ವರ್ಕ್‌ ಇಲ್ಲದ ಪ್ರದೇಶಗಳಲ್ಲಿ ಸಿಬಂದಿಗೆ ವಯರ್‌ಲೆಸ್‌ ಕನೆಕ್ಟಿವಿಟಿಗೆ ಕ್ರಮ ಕೈಗೊಳ್ಳಲಾಗಿದೆ. ಜೀಪ್‌ನಲ್ಲಿ ಹಾಗೂ ಕಂಟ್ರೋಲ್‌ ರೂಮ್‌ನಲ್ಲಿ ವ್ಯವಸ್ಥೆ ಮಾಡಲಾದ್ದು, ಚಾರ್ಮಾಡಿ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಪೊಲೀಸ್‌ ರಿಪೀಟರ್‌ ಅಳವಡಿಸಲು ಮನವಿ ಮಾಡಲಾಗಿದೆ. ಇನ್ನುಳಿದಂತೆ ತಾಲೂಕು ವ್ಯಾಪ್ತಿಯಲ್ಲಿ ಟವರ್‌ ನಿರ್ವಹಣೆ ಮಾಡುವವರ ವಿಳಾಸ ಹಾಗೂ ಯಾವ ಕಂಪೆನಿ ಟವರ್‌ ಎಂಬ ಮಾಹಿತಿ ತಾ.ಪಂ.ಗೆ ನೀಡುವಂತೆ ಸೂಚಿಸಲಾಗಿದೆ.

ವೈದ್ಯಕೀಯ ನಿರ್ವಹಣೆ
ಆರೋಗ್ಯ ಇಲಾಖೆ ಹಾಗೂ ಪಶು ವೈದ್ಯಕೀಯ ಅಧಿಕಾರಿಗಳಿಗೆ ಔಷಧ ಸಂಗ್ರಹ ಹಾಗೂ ಅವಶ್ಯ ಔಷಧಗಳ ಸರಬರಾಜು ಮಾಡಿಡುವಂತೆ ಈಗಾಗಲೇ ಸೂಚಿಸಲಾಗಿದೆ. ಸಿಬಂದಿ ಕಾರ್ಯಪ್ರವೃತ್ತರಾಗಿರಲು ಆದೇಶ ಹೊರಡಿಸಲಾಗಿದೆ.

ಚರಂಡಿ ಹೂಳೆತ್ತಲು ಟೆಂಡರ್‌
ನಗರ ಪ್ರದೇಶದಲ್ಲಿ ಚರಂಡಿ ಹೂಳೆತ್ತುವ ಕೆಲಸಕ್ಕೆ ಪ. ಪಂ.ನಿಂದ ಟೆಂಡರ್‌ ಕರೆಯಲಾಗಿದೆ. ಮೇ 28ರಿಂದ ಕಾಮಗಾರಿ ಆರಂಭಗೊಳ್ಳಲಿದೆ. ಪಟ್ಟಣದ ವ್ಯಾಪ್ತಿಯ 11 ವಾರ್ಡ್‌ನ ಚರಂಡಿ ಹೂಳೆತ್ತಲು 4.90 ಲಕ್ಷ ರೂ. ಹಾಗೂ ರಾಷ್ಟ್ರೀಯ ಹೆದ್ದಾರಿ ಚರಂಡಿ ದುರಸ್ತಿಗೆ 2.40 ಲಕ್ಷ ರೂ. ಮೀಸಲಿಡಲಾಗಿದೆ. ಈಗಾಗಲೇ ಪೌರ ಕಾರ್ಮಿಕರ ಮೂಲಕ ಚರಂಡಿ ಹಾಗೂ ರಸ್ತೆ ಬದಿಯ ಪ್ಲಾಸ್ಟಿಕ್‌ ತ್ಯಾಜ್ಯ ವಿಲೇವಾರಿಗೆ ಸೂಚಿಸಲಾಗಿದೆ ಎಂದು ಬೆಳ್ತಂಗಡಿ ಪ.ಪಂ. ಎಂಜಿನಿಯರ್‌ ಮಹಾವೀರ ಆರಿಗ ಹಾಗೂ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಅರುಣ್‌ ಬಿ. ತಿಳಿಸಿದ್ದಾರೆ.

ಮಕ್ಕಳ ಮೇಲೆ ನಿಗಾ
ನೆರೆ ಪ್ರದೇಶ ಹಾಗೂ ಮಳೆ ಅತೀವವಾಗಿ ಸುರಿದರೆ ಆ ಪ್ರದೇಶದ ಶಾಲೆಗೆ ರಜೆ ನೀಡುವ ಅವಕಾಶ ತಾಲೂಕು ಆಡಳಿತಕ್ಕೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಶಾಲಾ ಎಸ್‌ಡಿಎಂಸಿ ಜತೆ ಸಂಪರ್ಕದಲ್ಲಿರುವಂತೆ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗುತ್ತದೆ. ಅಂಗನವಾಡಿ ಕೇಂದ್ರಗಳ ಕುರಿತಾಗಿಯೂ ನಿಗಾ ವಹಿಸುವಂತೆ ಸಿಡಿಪಿಒಗೆ ಸೂಚಿಸಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಮಕ್ಕಳನ್ನು ಸ್ಥಳೀಯ ಸರಕಾರಿ ಕಟ್ಟಡಗಳಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗಿದೆ.

ವಾರದೊಳಗೆ ತಂಡ ರಚನೆ
ವಾರದೊಳಗೆ ಮಳೆಗಾಲ ಮುನ್ನೆಚ್ಚರಿಕೆಯಾಗಿ ತಂಡ ರಚಿಸಲಾಗುತ್ತಿದ್ದು, ಈ ಹಿಂದೆ ನೆರೆ ಉಂಟಾಗಿರುವ ಪ್ರದೇಶಗಳಲ್ಲಿ ಗಂಜಿ ಕೇಂದ್ರ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದ್ದು, ಮಳೆಗಾಲ ಆರಂಭಕ್ಕೆ ತಾಲೂಕು ಆಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
– ಗಣಪತಿ ಶಾಸ್ತ್ರಿ ತಹಶೀಲ್ದಾರ್‌

24×7 ಸಹಾಯವಾಣಿ
ತುರ್ತು ಸಂದರ್ಭ ತಾ.ಪಂ.ನ ಸಹಾಯವಣಿ ಸಂಖ್ಯೆ 0825 6232047, ಪಟ್ಟಣ ಪಂಚಾಯತ್‌ನ 0825 6234596 ದೂರವಾಣಿ ದಿನದ 24 ಗಂಟೆ ಸಂಪರ್ಕಕ್ಕೆ ಲಭ್ಯವಾಗಲಿದೆ.

-  ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.