ಹೂಳಿನ ಮುಸುಕಿನಲ್ಲಿ ಮುಳುಗಿದ ಮಲಪ್ರಭಾ

•2.5 ಟಿಎಂಸಿ ಹೂಳು ಶೇಖರಣೆ•ನೀರು ಸಂಗ್ರಹ ಸಾಮರ್ಥ್ಯ ಕುಸಿತ•ನಡೆಯದ ಸಮೀಕ್ಷೆ; ಕಾಣದ ಇಚ್ಛಾಶಕ್ತಿ

Team Udayavani, May 17, 2019, 3:46 PM IST

belegavi-tdy-5..

ಸವದತ್ತಿಯ ನವಿಲುತೀರ್ಥ ಅಣೆಕಟ್ಟು.

ಸವದತ್ತಿ: ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ನೀರುಣಿಸುತ್ತಿರುವ ಮಲಪ್ರಭಾ ನದಿ ಬರಿದಾಗುವ ಸ್ಥಿತಿ ತಲುಪಿದ್ದು, ಜನ ಜಾನುವಾರುಗಳಿಗೆ; ರೈತರ ಬೆಳೆಗಳಿಗೆ ನೀರಿನ ಅಭಾವ ಎದುರಾಗಿ ಬೇಸಿಗೆಯ ಬೇಗೆಗೆ ಬೆಂದು ಹೋಗಿದ್ದಾರೆ.

ಸವದತ್ತಿ ತಾಲೂಕಿನಲ್ಲಿರುವ ಮಲಪ್ರಭಾ ನದಿಗೆ ನಿರ್ಮಾಣ ಮಾಡಲಾಗಿರುವ ನವಿಲುತೀರ್ಥ ಅಣೆಕಟ್ಟು 38 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯ ಹೊಂದಿದ್ದರೂ ಭಾರೀ ಪ್ರಮಾಣದ ಹೂಳು ತುಂಬಿದ್ದರಿಂದ ಆಣೆಕಟ್ಟು ಭರ್ತಿಯಾದರೂ ಕೇವಲ 14ರಿಂದ 16ಟಿಎಂಸಿ ನೀರು ಮಾತ್ರ ಸಂಗ್ರಹವಾಗುತ್ತಿದೆ.

ಮಲಪ್ರಭಾ ಆಣೆಕಟ್ಟು 154.53 ಮೀ. ಉದ್ದ ಹಾಗೂ 40.23 ಮೀ. ಎತ್ತರವಿದೆ. ಇದರ ಹಿನ್ನೀರಿನಲ್ಲಿ 13,578 ಹೆಕ್ಟೇರ್‌ ಪ್ರದೇಶ ಮುಳುಗಡೆಯಾಗಿದೆ. ಇದರ ಎಡದಂಡೆ ಕಾಲುವೆ 150 ಕಿಮೀ ಉದ್ದವಿದ್ದು, ಇದರಿಂದ 53,136 ಹೆಕ್ಟೇರ್‌ ಪ್ರದೇಶ ನೀರಾವರಿಗೊಳಗಾಗಿದೆ. ಬಲದಂಡೆ ಕಾಲುವೆಯು 142 ಕಿಮೀ ಉದ್ದವಿದ್ದು, 1,39,921 ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸುತ್ತ್ತಿದೆ. ಆದರೆ ನೀರಿನ ಪ್ರಮಾಣ ಇಳಿಮುಖವಾಗಿದ್ದರಿಂದ ಸುಮಾರು 80-90 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಮಾತ್ರ ನದಿ ನೀರು ತಲುಪಿದೆ. ಸದ್ಯಕ್ಕೆ 2038.15 ಅಡಿ ನೀರಿನ ಸಂಗ್ರಹವಿದ್ದು ಸುಮಾರು 7 ಟಿಎಂಸಿ ಅಡಿ ನೀರು ಸಂಗ್ರಹವೆಂದು ಅಂದಾಜಿಸಬಹುದು. ಇದರಲ್ಲಿ ನಿತ್ಯ 164 ಕ್ಯೂಸೆಕ್‌ ನೀರು ಕುಡಿಯಲು ಹರಿಬಿಡಲಾಗುವುದು.

ಕಣಕುಂಬಿಯಿಂದ ನದಿಗೆ ಅಡ್ಡಲಾಗಿ ಒಟ್ಟಾರೆ 7 ತಡೆಗೋಡೆ ಕಮ್‌ ಬಾಂದಾರ ಗಳನ್ನು ಕುಡಿಯುವ ನೀರಿನ ಸಂಗ್ರಹಣೆಗೆ ನಿರ್ಮಿಸಲಾಗಿತ್ತು. ಆದರೆ ಈಗ ಆ ಎಲ್ಲವೂ ಖಾಲಿಯಾಗಿವೆ. ಕಳೆದ ಮಳೆಗಾಲದಲ್ಲಿ ಮಳೆ ಕೈಕೊಟ್ಟಿದ್ದರಿಂದ ಮಲಪ್ರಭೆ ಸಂಪೂರ್ಣವಾಗಿ ಭರ್ತಿಯ ಹಂತ ತಲುಪಿರಲಿಲ್ಲ. ಸದ್ಯ ಮಲಪ್ರಭೆ ಒಡಲು ಖಾಲಿಯಾಗುತ್ತಿರುವುದು ಈ ಭಾಗದ ಜನರಲ್ಲಿ ಆತಂಕ ಸೃಷ್ಠಿಸಿದೆ.

ಹೂಳಿನಿಂದ ನೀರಿನ ಸಂಗ್ರಹ ಕುಂಠಿತ: 1969ರಲ್ಲಿ ನಿರ್ಮಾಣವಾದ ಇಂದಿರಾ (ನವಿಲು ತೀರ್ಥ) ಅಣೆಕಟ್ಟಿನ ಒಟ್ಟು ನೀರಿನ ಸಾಮರ್ಥ್ಯ 37.731 ಟಿಎಂಸಿ. 1973 ರಲ್ಲಿ ಪ್ರಥಮ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದು ಇಲ್ಲಿಯವರೆಗೆ ಒಟ್ಟು 7 ಬಾರಿ ಭರ್ತಿಯಾದ ದಾಖಲೆಯಿದೆ. ಈವರೆಗೂ ಸುಮಾರು 2.5 ಟಿಎಂಸಿ ಹೂಳು ಶೇಖರಣೆಯಾಗಿರಬಹುದು ಎನ್ನಲಾಗುತ್ತಿದೆ. ಆಣೆಕಟ್ಟು ನಿರ್ಮಾಣವಾದಾಗಿನಿಂದ ಹೂಳು ತೆಗೆಯುವ ಪ್ರಯತ್ನಕ್ಕೆ ಮುಂದಾಗದೇ ಇರುವುದು ಖೇದಕರ ಸಂಗತಿ. ಹೂಳು ತೆಗೆಸುವ ಕಾರ್ಯಕ್ಕೆ ಅಣೆಕಟ್ಟು ನಿರ್ಮಾಣ ಮಾಡಬೇಕಾದಾಗ ಎಷ್ಟು ಹಣ ವ್ಯಯಿಸಲಾಗಿತ್ತೋ ಅಷ್ಟು ಹಣ ವ್ಯಯಿಸಬೇಕಾಗುತ್ತದೆ. ಆದರೆ ಈ ಕುರಿತು ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ಹೂಳಿನ ಕುರಿತು 10 ವರ್ಷಕ್ಕೊಮ್ಮೆ ಸಮೀಕ್ಷೆ ನಡೆಯಬೇಕು. ಆದರೆ ನವಿಲು ತೀರ್ಥಕ್ಕೆ ಯಾವುದೇ ಸರ್ವೆ ನಡೆದಿಲ್ಲ.

ಚುನಾವಣೆ ಸಂದರ್ಭದಲ್ಲಿ ಎಲ್ಲ ರಾಜಕಾರಣಿಗಳು ಕಳಸಾ ಬಂಡೂರಿ ಮಹದಾಯಿ ವಿಚಾರವನ್ನೆತ್ತಿ ತಮ್ಮ ಪಕ್ಷದ ಅಸ್ತಿತ್ವಕ್ಕೆ ಹೆಣಗಾಡುತ್ತಾರೆ. ಆದರೆ ಆ ಹೋರಾಟವನ್ನು ಬಿಟ್ಟು ಎಲ್ಲರೂ ಸೇರಿ ಆಣೆಕಟ್ಟಿನಲ್ಲಿ ಸಂಗ್ರಹವಾದ ಹೂಳನ್ನು ತೆಗೆಸಿದ್ದರೆ ಬರ ಪರಿಸ್ಥಿತಿಯಲ್ಲೂ 4 ಜಿಲ್ಲೆ, 13 ತಾಲೂಕಿನ ಜನ ಜಾನುವಾರುಗಳಿಗೆ ಸತತ 9 ತಿಂಗಳು ನೀರು ಹರಿಸುವ ಸಾಮರ್ಥ್ಯ ನವಿಲು ತೀರ್ಥ ಅಣೆಕಟ್ಟಿಗೆ ಇದೆ.

ಬೇಸಿಗೆ ದಿನಗಳಲ್ಲಿ ಈ ಹೂಳೆತ್ತುವ ಕಾರ್ಯ ಪ್ರಾರಂಭಿಸಬೇಕಿತ್ತು. ಆದರೆ ಕುಡಿಯುವ ನೀರಿನ ಸಂಗ್ರಹವಿದ್ದುದರಿಂದ ಮುಂದಿನ ಬೇಸಿಗೆಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ ಹೂಳೆತ್ತುವ ಕಾರ್ಯ ಪ್ರಾರಂಭಿಸಿದರೆ ಈ ಭಾಗದ ಜನರು ಮತ್ತು ರೈತರಿಗೆ ನೀರಿನ ಅಭಾವ ಉಂಟಾಗದು. ಹೇಳಿಕೊಳ್ಳುವಷ್ಟು ಹೂಳು ಆಣೆಕಟ್ಟಿನಲ್ಲಿಲ್ಲ. ಹೂಳೆತ್ತುವ ಕಾರ್ಯ ನಡೆಯಬೇಕೆಂದಲ್ಲಿ ಸರಕಾರವೇ ಅಂತಿಮ. ಎಲ್ಲ ಮಾಹಿತಿ ಆಧಾರದ ಮೇಲೆ ಸರಕಾರವೇ ಕ್ರಮ ಜರುಗಿಸಬೇಕು.

•ಡಿ.ಎಸ್‌. ಕೊಪ್ಪದ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.