ಬಿಡಾಡಿ ದನಗಳಿಗೂ ತಪ್ಪಿಲ್ಲ ನೀರಿನ ಗೋಳು


Team Udayavani, May 17, 2019, 4:14 PM IST

gadaga-tdy-2..

ಗದಗ: ಹೆಚ್ಚುತ್ತಿರುವ ತಾಪದಿಂದ ದಾಹ ತೀರಿಸಿಕೊಳ್ಳಲು ನಳಕ್ಕೆ ಬಾಯಿವೊಡ್ಡಿರುವ ಮೂಕ ಜೀವಿಗಳು.

ಗದಗ: ಗದಗ- ಬೆಟಗೇರಿ ಅವಳಿ ನಗರದ ವಿವಿಧೆಡೆ ರಸ್ತೆ ವಿಭಜಕಗಳ ಮಧ್ಯೆ ನೆಟ್ಟಿರುವ ಸಸಿಗಳನ್ನು ಉಳಿಸಿಕೊಳ್ಳಲು ನಗರಸಭೆ ತೋರುವಷ್ಟು ಕಾಳಜಿಯನ್ನು ಬೀಡಾಡಿ ದನಗಳ ದಾಹ ತೀರಿಸುವತ್ತ ಗಮನ ಹರಿಸುತ್ತಿಲ್ಲ. ಹೀಗಾಗಿ ಪ್ರಾಣಿಗಳು ಬಿಸಿಲಿನ ಬೇಗೆಯಿಂದ ದೇಹ ತಣಿಸಿಕೊಳ್ಳಲು ಪೋಲಾಗುವ ನಳ ಹಾಗೂ ರಸ್ತೆಗಳಲ್ಲಿ ನಿಂತ ನೀರಿಗೆ ಬಾಯಿವೊಡ್ಡುವಂತಾಗಿದೆ.

ಹೌದು, ಸತತ ಬರಗಾಲ ಹಾಗೂ ಮಳೆ ಕೊರತೆಯಿಂದಾಗಿ ಬಿಸಿಲಿನ ತಾಪ ದಿನಗಳೆದಂತೆ ಹೆಚ್ಚುತ್ತಿದೆ. ಕಳೆದ ಹದಿನೈದು ದಿನಗಳಿಂದ ಉಷ್ಣಾಂಶ ಗರಿಷ್ಠ 38ರಿಂದ 40 ಡಿಗ್ರಿ ಸೆಲ್ಸಿಯಸ್‌ ವರೆಗೆ ದಾಖಲಾಗುತ್ತಿದೆ. ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ಜನಸಾಮಾನ್ಯರು ಎಳೆ ನೀರು, ತಂಪು ಪಾನೀಯಗಳಿಗೆ ಮೊರೆ ಹೋಗುತ್ತಿದ್ದಾರೆ. ಆದರೆ, ಬಿರು ಬಿಸಿಲಿನಿಂದ ಪ್ರಾಣಿಗಳಿಗೆ ಕುಡಿಯುವ ನೀರು ಸಿಗದೇ ಅನುಭವಿಸುವ ಸಂಕಷ್ಟ ಅವುಗಳಿಗೇ ಗೊತ್ತು.

ಆಗಾಗ ನಗರಸಭೆ ನಡೆಸಿದ ಬೀಡಾಡಿ ದನಗಳ ಕಾರ್ಯಾಚರಣೆಯಿಂದಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಇತ್ತೀಚೆಗೆ ಬೀಡಾಡಿ ದನಗಳ ಸಂಖ್ಯೆ ಭಾಗಶಃ ಕಡಿಮೆಯಾಗಿವೆ. ಆ ಪೈಕಿ ಬಹುತೇಕ ಮಾಲೀಕರಿಗೆ ಸೇರಿವೆ. ಆದರೆ, ಮಾಲೀಕರ ಮನೆಗಳಲ್ಲಿ ಜಾಗ, ಮೇವಿನ ಕೊರತೆಯಿಂದಾಗಿ ಸೂರ್ಯೋದಯವಾಗುತ್ತಿದ್ದಂತೆ ದನಗಳು ಬೀದಿಗೆ ಬರುತ್ತಿವೆ. ಹೀಗಾಗಿ ನೂರಾರು ದನಗಳು ಹಸಿವು, ದಾಹ ತೀರಿಸಿಕೊಳ್ಳಲು ಪರಿತಪಿಸುವಂತಾಗಿದೆ.

ನಗರಸಭೆ ನೀರಿನ ತೊಟ್ಟಿಗಳು ಮಾಯ!:

ಕೆಲ ವರ್ಷಗಳ ಹಿಂದೆ ಗದಗ- ಬೆಟಗೇರಿ ಅವಳಿ ನಗರದಲ್ಲಿ ಬೀಡಾಡಿ ದನಗಳ ಅನುಕೂಲಕ್ಕಾಗಿ ನಗರಸಭೆಯಿಂದ ಹಳೇ ಬಸ್‌ ನಿಲ್ದಾಣ, ವೀರೇಶ್ವರ ಗ್ರಂಥಾಲಯ, ಒಕ್ಕಲಗೇರಿ, ಧೋಬಿ ಘಾಟ, ಭೀಷ್ಮ ಕೆರೆ, ಮಹೇಂದ್ರಕರ ಸರ್ಕಲ್, ಪಾಲಾ-ಬಾದಾಮಿ ರಸ್ತೆ, ಬೆಟಗೇರಿ ಸೇರಿದಂತೆ ಸುಮಾರು 8-10 ಕಡೆ ನೀರಿನ ತೊಟ್ಟಿ ಇರಿಸಲಾಗಿತ್ತು. ಅದರೊಂದಿಗೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಇಲಾಖೆಯಿಂದಲೇ ನೀರಿನ ತೊಟ್ಟಿ ಇಡಲಾಗಿತ್ತು. ಬೇಸಿಗೆ ದಿನಗಳಲ್ಲಿ ಎಲ್ಲ ನೀರಿನ ತೊಟ್ಟಿಗಳನ್ನೂ ನಗರಸಭೆ ಟ್ಯಾಂಕರ್‌ ಮೂಲಕ ನೀರು ತುಂಬಿಸಲು ವಿಶೇಷ ಒತ್ತು ನೀಡಲಾಗುತ್ತಿತ್ತು. ಆ ಪೈಕಿ ನಗರಸಭೆ ಅಳವಡಿಸಿದ್ದ ನೀರಿನ ತೊಟ್ಟಿಗಳು ಸಿಮೆಂಟಿನದ್ದಾಗಿದ್ದರಿಂದ ರೈಲ್ವೆ ನಿಲ್ದಾಣ ಸಮೀಪದ ದುರ್ಗಾ ದೇವಿ ದೇವಸ್ಥಾನದ ಬಳಿ ಅಳವಡಿಸಿರುವ ತೊಟ್ಟಿ ಹೊರತಾಗಿ ಬಹುತೇಕ ಮಾಯವಾಗಿವೆ ಎಂಬುದು ನಗರಸಭೆ ಮೂಲಗಳ ಹೇಳಿಕೆ.

ಇನ್ನು ರೈಲ್ವೆ ಇಲಾಖೆ ಕಾಮಗಾರಿಯೊಂದರ ನಿಮಿತ್ತ ನಿಲ್ದಾಣದ ಬಳಿ ತೊಟ್ಟಿಯನ್ನೂ ಧ್ವಂಸಗೊಳಿಸಿದ್ದರಿಂದ ಬೀಡಾಡಿ ದನಗಳೊಂದಿಗೆ ಅಲ್ಲಿನ ಟಾಂಗಾಗಳ ಕುದುರೆಗಳೂ ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಟಾಂಗಾ ಕುದುರೆಗಳ ನೀರಿನ ದಾಹ ತೀರಿಸಿಲು ಆನತಿ ದೂರದ ದುರ್ಗಾದ ದೇವಿ ದೇವಸ್ಥಾನದ ಬಳಿ ತೊಟ್ಟಿಗೆ ಕರೆತರುತ್ತಾರೆ ಎಂದು ಹೇಳಲಾಗಿದೆ.

ಆದರೆ, ಬೆಟಗೇರಿ ಬಸ್‌ ನಿಲ್ದಾಣ, ಸೆಟ್ಲಮೆಂಟ್, ಸ್ಟೇಷನ್‌ ರಸ್ತೆ, ಗಾಂಧಿ ವೃತ್ತ, ಶಾನಭಾಗ ಹೋಟೆಲ್ ಭಾಗದಲ್ಲಿ ಇಂದಿಗೂ ಹೆಚ್ಚಾಗಿ ಬೀಡಾಡಿ ದನಗಳು ಬೀಡು ಬಿಡುತ್ತಿವೆ. ಆಯಾ ಭಾಗದಲ್ಲಿ ಪ್ರಾಣಿಗಳು ದಾಹ ನೀಗಿಸಿಕೊಳ್ಳಲು ಯಾವುದೇ ವ್ಯವಸ್ಥೆಯಿಲ್ಲದೇ, ಪರದಾಡುವಂತಾಗಿದೆ. ಇನ್ನು ರಸ್ತೆಗಳಲ್ಲಿ ಬೀಡಾಡಿ ದನಗಳ ಅಡ್ಡಾದಿಡ್ಡಿ ಓಡಾಟದಿಂದ ವಾಹನ ಸವಾರರಿಗೆ ಸಂಚಕಾರ ತಂದೊಡ್ಡುತ್ತಿವೆ ಎಂಬುದು ಗಮನಾರ್ಹ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.