ಡ್ಯಾಂ ಇದ್ದರೂ ನೀರಿಗೆ ಹಾಹಾಕಾರ


Team Udayavani, May 17, 2019, 5:31 PM IST

kopala-tdy-1…

ಕೊಪ್ಪಳ: ತುಂಗಭದ್ರಾ ಜಲಾಶಯ ಜಿಲ್ಲೆಯಲ್ಲೇ ಇದ್ದರೂ 282ಕ್ಕೂ ಹೆಚ್ಚು ಹಳ್ಳಿಗಳು ಇಂದಿಗೂ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಪ್ರತಿ ಬೇಸಿಗೆಯಲ್ಲಿ ಜನರ ಗೋಳಾಟ, ಪರಿಪಾಟಲು ಯಾರಿಗೂ ಹೇಳತೀರದಂತ ಸ್ಥಿತಿಯಿದೆ. ಜಿಲ್ಲಾಡಳಿತ ಪ್ರತಿ ವರ್ಷ ಕೋಟ್ಯಂತರ ರೂ. ಹಣ ವೆಚ್ಚ ಮಾಡಿದರೂ ಜನರು ನೀರಿಗೆ ಬಿಕ್ಕುವ ಸ್ಥಿತಿ ತಪ್ಪಿಲ್ಲ.

ಜಿಲ್ಲೆ ಮೊದಲೇ ಬರಪೀಡಿತ ಎಂಬ ಹಣೆಪಟ್ಟಿ ಹೊತ್ತಿದೆ. ಮಳೆಯ ಅಭಾವದಿಂದ ಈ ಭಾಗದಲ್ಲಿ ಅಂತರ್ಜಲದ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಕೆರೆ, ಬಾವಿ ನೀರಿನ ಮೂಲಗಳನ್ನೇ ನಂಬಿ ಜೀವನ ನಡೆಸುವ ಜನತೆ ಕೊಡ ನೀರಿಗೆ ತೋಟ, ಗದ್ದೆಗಳಿಗೆ ಅಲೆದಾಡುತ್ತಿದ್ದಾರೆ.

•ಜಿಲ್ಲೆಯಲ್ಲಿ ನೀರಿಗೆ ಬಾಯ್ದೆರೆದ 282 ಹಳ್ಳಿಗಳು

•ತುಂಗಭದ್ರೆ ಪಕ್ಕದಲ್ಲೇ ಇದ್ದರೂ ಬಿಕ್ಕುವ ಜನ

•13 ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನೀರು

•ಕೋಟಿ ಕೋಟಿ ಬಂದರೂ, ಸಮಸ್ಯೆ ಕಗ್ಗಂಟು

ಜಿಲ್ಲೆಯ 737 ಜನವಸತಿ ಪ್ರದೇಶಗಳಲ್ಲಿ 282 ಗ್ರಾಮಗಳು ಕುಡಿಯುವ ನೀರಿನ ಸಮಸ್ಯಾತ್ಮಕ ಹಳ್ಳಿಗಳೆಂದು ಜಿಲ್ಲಾಡಳಿತದ ವರದಿಯೇ ಹೇಳುತ್ತದೆ. ಪ್ರತಿ ಬೇಸಿಗೆಯಲ್ಲಿ ಏಪ್ರಿಲ್, ಮೇನಲ್ಲಿ ಸಮಸ್ಯಾತ್ಮಕ ಹಳ್ಳಿಗಳ ಸಂಖ್ಯೆ 330ರ ಗಡಿದಾಟುತ್ತದೆ. ನೀರಿನ ಹಾಹಾಕಾರ ಉಲ್ಭಣಿಸಿದಾಗ ಮಾತ್ರ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು ಎದ್ದು ಬಿದ್ದು ಕ್ರಿಯಾಯೋಜನೆ ರೂಪಿಸಲು ಓಡಾಡುತ್ತಿರುತ್ತಾರೆ. ಆದರೆ ಪೂರ್ವ ಯೋಜನೆ ಅವರಲ್ಲಿ ಕಾಣಲ್ಲ.

ವಿಶೇಷವೆಂಬಂತೆ, ತುಂಗಭದ್ರಾ ಡ್ಯಾಂ ಜಿಲ್ಲೆಯಲ್ಲೇ ಇದ್ದರೂ ನೀರಿನ ಬವಣೆ ಮಾತ್ರ ನೀಗಿಲ್ಲ. ಕಳೆದ ವರ್ಷ ಡ್ಯಾಂ ಭರ್ತಿಯಾದರೂ ಜಿಲ್ಲೆಯ ಜನ ತೋಟ, ಗದ್ದೆ, ಕೆರೆ, ಬಾವಿಗಳಲ್ಲಿ ನಿಂತ ನೀರನ್ನೇ ಬಳಸುತ್ತಿದ್ದಾರೆ. ಪರ ಊರುಗಳಿಂದ ಜನರು ನೀರು ತಂದು ಜೀವನ ನಡೆಸುವಂತಹ ಸ್ಥಿತಿಯಿದೆ. ಇಲ್ಲಿನ ಶಾಸಕ, ಸಂಸದರು ಶಾಶ್ವತ ಯೋಜನೆ ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ.

ಕ್ರಿಯಾಯೋಜನೆ: ಪ್ರಸಕ್ತ ಬೇಸಿಗೆಯಲ್ಲಿ ನೀರಿನ ಬವಣೆ ನಿವಾರಿಸಲು ಸರ್ಕಾರ ಜಿಪಂನ ಟಾಸ್ಕ್ ಫೋರ್ಸ್‌ನಡಿ 3.75 ಕೋಟಿ, ಎಸ್‌ಡಿಆರ್‌ಎಫ್‌ನಡಿ 1.30 ಕೋಟಿ, ಜಿಲ್ಲಾಧಿಕಾರಿ ಬರ ಪರಿಹಾರದಲ್ಲಿ 3.43 ಕೋಟಿ ಸೇರಿದಂತೆ ಒಟ್ಟು ಕುಡಿಯುವ ನೀರು ಪೈಪ್‌ಲೈನ್‌ ದುರಸ್ತಿ, ಕೊಳವೆ ಬಾವಿ ಬಾಡಿಗೆ, ಕೊಳವೆಬಾವಿ ಕೊರೆಯಿಸುವುದು ಸೇರಿ ಜನರಿಗೆ ನೀರು ಪೂರೈಕೆಗೆ 8.48 ಕೋಟಿ ರೂ.ನಲ್ಲಿ ಕ್ರಿಯಾಯೋಜನೆ ರೂಪಿಸಿ ಬಿಡುಗಡೆಯನ್ನೂ ಮಾಡಿದೆ. ಆದರೆ ಜಿಲ್ಲೆಯ 110 ಗ್ರಾಮಗಳಲ್ಲಿ 138 ಖಾಸಗಿ ಬೋರ್‌ವೆಲ್ ಮೂಲಕ ನೀರು ಪೂರೈಸುವಂತಹ ಸ್ಥಿತಿಯಿದೆ. ಇನ್ನೂ ಕುಷ್ಟಗಿ ತಾಲೂಕಿನ ಗುಡ್ಡದ ದೇವಲಾಪುರ, ಹನುಮನಾಳ, ಸಾಸ್ವಿಹಾಳ, ಅಡವಿಬಾವಿ, ರ್ಯಾವಣಕಿ, ಚಂದ್ರಗಿರಿ ಸೇರಿ ಜಿಲ್ಲೆಯ 13 ಹಳ್ಳಿಗಳಲ್ಲಿ ಟ್ಯಾಂಕರ್‌ ನೀರು ಪೂರೈಸಲಾಗುತ್ತಿದ್ದು, ಮೇ ಕೊನೆಯಲ್ಲಿ ಈ ಹಳ್ಳಿಗಳ ಸಂಖ್ಯೆ 40ರ ಗಡಿ ದಾಟಬಹುದು ಎಂದು ಜಿಲ್ಲಾಡಳಿತ ಲೆಕ್ಕಾಚಾರ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಹಲವು ಕಡೆ ಕೆಟ್ಟಿವೆ. ದುರಸ್ತಿಗೆ ಗ್ರಾಪಂಗಳು ನರಳಾಡುತ್ತಿದ್ದರೆ, ಸಂಘ-ಸಂಸ್ಥೆಗಳ ಆಶ್ರಯದಲ್ಲಿರುವ ಘಟಕಗಳು ಸರಿಯಾಗಿವೆ. ಹಲವೆಡೆ ಘಟಕಗಳಿಗೆ ನೀರಿಗೆ ಬರ ಬಂದಿದೆ. ಪ್ರತಿ ವರ್ಷ ಕುಡಿಯುವ ನೀರಿಗೆ ಕೋಟಿ ಕೋಟಿ ಅನುದಾನ ಬಂದರೂ ಸಮಸ್ಯೆ ಕಗ್ಗಂಟಾಗುತ್ತಿದೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

9-gangavathi

Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.