ಪೌಷ್ಟಿಕ ಆಹಾರ ಸೇವಿಸಿದರೆ ಸದೃಢ ಆರೋಗ್ಯ: ಪೂಜಾರ


Team Udayavani, May 17, 2019, 5:45 PM IST

kopala-tdy-4..

ಯಲಬುರ್ಗಾ: ಯಡ್ಡೋಣಿ ಸರಕಾರಿ ಆಯುರ್ವೇದಿಕ್‌ ಆಸ್ಪತ್ರೆಯಲ್ಲಿ ಪೌಷ್ಟಿಕ ಆಹಾರ ಮಹತ್ವ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.

ಯಲಬುರ್ಗಾ: ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸರಕಾರ ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ಸರಕಾರಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಹೇಳಿದರು.

ತಾಲೂಕಿನ ಯಡ್ಡೋಣಿ ಗ್ರಾಮದ ಸರಕಾರಿ ಆಯುರ್ವೇದಿಕ್‌ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಾಸಿಕ ಪೋಷಣಾ ಅಭಿಯಾನ ಕಾರ್ಯಕ್ರಮದಡಿ ಹಮ್ಮಿಕೊಂಡ ಪೌಷ್ಟಿಕ ಆಹಾರದ ಮಹತ್ವ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಪಂಚದಲ್ಲಿ ಕಲುಷಿತ ನೀರು, ಆಹಾರ ಸೇವನೆಯಿಂದ ಲಕ್ಷಾಂತರ ಜನರು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ, ಸಾರ್ವಜನಿಕರು ನೀರು, ಆಹಾರ ಸೇವನೆಯಲ್ಲಿ ಜಾಗೃತಿ ವಹಿಸಿದರೆ ಮಾತ್ರ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದರು.

ಪೌಷ್ಟಿಕತೆ ಎಂದರೆ ಮಾನವನ ಆರೋಗ್ಯ ಮತ್ತು ಬೆಳವಣಿಗೆಗೆ ಅಗತ್ಯವಿರುವ ಆಹಾರವನ್ನು ಒದಗಿಸುವ ಮತ್ತು ಪಡೆಯುವ ಪ್ರಕ್ರಿಯೆ. ಜೀವನದುದ್ದಕ್ಕೂ ನಾವು ವಿವಿಧ ಆಹಾರಗಳು, ಪಾನೀಯಗಳು ಮತ್ತು ತಿನಿಸುಗಳನ್ನು ಸೇವಿಸುತ್ತೇವೆ. ಆರೋಗ್ಯಕರ ಆಹಾರವು ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಗರ್ಭಿಣಿಯರು ದಿನದಲ್ಲಿ ಮಾಮೂಲಿಗಿಂತ ಹೆಚ್ಚು ಆಹಾರ ಸೇವಿಸಬೇಕು. ಹಾಲು, ಹಸಿರು ತರಕಾರಿ, ಸೊಪ್ಪು ಮತ್ತು ಹಣ್ಣುಗಳನ್ನು ಹೆಚ್ಚಾಗಿ ಉಪಯೋಗಿಸಬೇಕು. ಆಹಾರದಲ್ಲಿ ಐಯೋಡಿನಯುಕ್ತ ಉಪ್ಪನ್ನು ಮಾತ್ರ ಬಳಸಬೇಕು. ಗರ್ಭಾವಸ್ಥೆಯಲ್ಲಿ ಆಗಾಗ ವಿಶ್ರಾಂತಿ ಪಡೆಯಬೇಕು ಹಾಗೂ ಅಪೌಷ್ಟಿಕತೆಯನ್ನು ತೊಲಗಿಸಿ, ಪೌಷ್ಟಿಕತೆಯನ್ನು ಸ್ವಾಗತಿಸಿ ಎಂದು ಹೇಳಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಡಿ. ಬೆನ್ನೂರ ಮಾತನಾಡಿ, ಗ್ರಾಮೀಣ ಪ್ರದೇಶದ ಜನತೆ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದರು.

ಕ್ಷಯರೋಗ ಮೇಲ್ವಿಚಾರಕ ಪ್ರವೀಣ ಎಚ್. ಮಾತನಾಡಿ, ಕ್ಷಯರೋಗ ಒಂದು ಸಾಂಕ್ರಾಮಿಕ ರೋಗವಾಗಿದೆ. ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಸಂಜೆ ಜ್ವರ ಬರುವುದು, ರಾತ್ರಿ ಬೆವರುವಿಕೆ, ಹಸಿವು ಆಗದಿರುವುದು ಕ್ಷಯರೋಗದ ಮುಖ್ಯ ಲಕ್ಷಣವಾಗಿವೆ. ಇಂತಹ ಲಕ್ಷಣಗಳು ಕಂಡ ಕೂಡಲೇ ಸಮೀಪದ ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಬ್ಬ ಚಿಕಿತ್ಸೆ ಪಡೆಯದ ಕ್ಷಯರೋಗಿ ಕೆಮ್ಮುವುದರಿಂದ, ಸೀನುವುದರಿಂದ ವರ್ಷದಲ್ಲಿ ಸುಮಾರು ಹತ್ತರಿಂದ ಹದಿನೈದು ಜನರಿಗೆ ರೋಗ ಹರಡುತ್ತಾನೆ. ಅಂತಹ ಜನರನ್ನು ಹುಡುಕಿ ಇಲಾಖೆ ಚಿಕಿತ್ಸೆ ಕೊಡಿಸುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು.

ವಿವಿಧ ತರಕಾರಿ, ಹಣ್ಣು ಹಂಪಲು, ಮೊಳಕೆ ಕಟ್ಟಿದ ಕಾಳುಗಳು, ಹಸಿರು ಸೊಪ್ಪಿನ ತರಕಾರಿ, ಹಾಲು ಮೊಟ್ಟೆಯನ್ನು ಪ್ರದರ್ಶಿಸಲಾಯಿತು.

ಗುನ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ದಯಾನಂದ ಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ವಿ.ಆರ್‌. ತಾಳಿಕೋಟಿ, ಲಕ್ಷ್ಮೀ ಕೆ., ಶೈನಾಜ್‌ಬಿ ವಾಲಿಕಾರ್‌, ಮಲ್ಲಯ್ಯ ಕಟ್ಟಿಮನಿ, ಬಸಮ್ಮ ಅಂಗಡಿ, ಹನಮಕ್ಕ ಗುನ್ನಾಳ, ವಿಜಯಲಕ್ಷ್ಮೀ ಅಂಗಡಿ, ಶಿವಲೀಲಾ ಹುನಗುಂದ, ಕಮಲಾಕ್ಷಿ ಹಿರೇಮಠ, ಸರಸ್ವತಿ ಕೋಳೂರ, ಬಿಬಿಜಾನ್‌ ವಾಲಿಕಾರ್‌, ರೇಣುಖಾ ಬದಗಿ, ಸರೋಜಾ ಮೇಟಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

9-gangavathi

Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.