ಕಪ್ಪತ್ತಗುಡ್ಡ ಪರಿಸರವಾದಿಗಳಿಗೆ ಸಿಕ್ತು ಜಯ

•ಸರಕಾರದಿಂದ ವನ್ಯಜೀವಿಧಾಮವಾಗಿ ಘೋಷಣೆ •ಸ್ಥಳೀಯರ ಹಲವು ದಶಕಗಳ ಹೋರಾಟ ಫಲ

Team Udayavani, May 18, 2019, 12:35 PM IST

gadaga-tdy-1..

ಮುಂಡರಗಿ: ಉತ್ತರ ರ್ಕಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡ.

ಮುಂಡರಗಿ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಖ್ಯಾತವಾಗಿರುವ ಕಪ್ಪತ್ತಗುಡ್ಡವನ್ನು ರಾಜ್ಯ ಸರಕಾರದ ಅರಣ್ಯ, ಜೀವವೈವಿಧ್ಯತೆ, ಪರಿಸರ ಇಲಾಖೆಯಿಂದ ವನ್ಯಜೀವಿಧಾಮವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇದರಿಂದ ಕಪ್ಪತ್ತಗುಡ್ಡ ಉಳುವಿಗಾಗಿ ನಡೆದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ಇದು ಪರಿಸರ ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಸೃಷ್ಟಿಸಿದೆ.

ಹಲವು ದಶಕಗಳಿಂದ ಕಪ್ಪತ್ತಗುಡ್ಡದ ಜೌಷಧೀಯ ಸಸ್ಯ, ಜೀವವೈಧ್ಯತೆ, ಪರಿಸರ ಉಳಿಸಲು ಲಿಂಗೈಕ್ಯ ಡಾ| ತೋಂಟದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಕಪ್ಪತ್ತಗುಡ್ಡದ ಹೋರಾಟಗಳು ನಡೆದಿತ್ತು. ಗದಗ ಭಾಗ ಸೇರಿದಂತೆ ರಾಜ್ಯದ ಹಲವಾರು ಪರಿಸರವಾದಿಗಳು ಭಾಗವಹಿಸಿದ್ದರು. ಇವರೆಲ್ಲರ ಪರಿಸರ ಹೋರಾಟ ತಾತ್ವೀಕ ಸುಖಾಂತ್ಯ ಕಂಡಂತಾಗಿದೆ.

ಕರ್ನಾಟಕ ಸರಕಾರದ ಅರಣ್ಯ, ಜೀವವೈವಿಧ್ಯತೆ, ಪರಿಸರ ಇಲಾಖೆ ಅಧಿಧೀನ ಕಾರ್ಯದರ್ಶಿ ಕೆ.ಆರ್‌. ರಮೇಶ ಅವರು ರಾಜ್ಯಪಾಲರ ಆದೇಶದ ಮೇರೆಗೆ ಕಪ್ಪತ್ತಗುಡ್ಡವನ್ನು ವನ್ಯಜೀವಿಧಾಮವಾಗಿ ಘೋಷಣೆ ಮಾಡಿ ಮೇ 16ರಂದು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಕಪ್ಪತ್ತಗುಡ್ಡ ವನ್ಯಜೀವಿಧಾಮವು ರಾಜ್ಯದ ಸೆಕ್ಷನ್‌-26-ಎ(1)(ಬಿ)ಯ ವನ್ಯಜೀವಿ (ರಕ್ಷಣೆ) ಕಾಯ್ದೆ-1972ರನ್ವಯ ತಿದ್ದುಪಡಿ (2006). ಕೇಂದ್ರ ಕಾಯ್ದೆ-53ರ -1972ರನ್ವಯವಾಗಿ ಸೇಡ್ಯೂಲ್-1ರ ಪ್ರಕಾರ ಕಪ್ಪತ್ತಗುಡ್ಡ ವನ್ಯಜೀವಿಧಾಮವಾಗಿ ಘೋಷಣೆ ಮಾಡಲಾಗಿದೆ.

ಕಪ್ಪತ್ತಗುಡ್ಡ ವನ್ಯಜೀವಿಧಾಮದ ಪರಿಕಲ್ಪನೆ: ಜ. 9ರಂದು ರಾಜ್ಯ ವನ್ಯಜೀವಿ ಮಂಡಳಿಯ 11ನೇ ಸಭೆಯು ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದಾಗ ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಮುಂದುವರೆದಂತೆ ಕಪ್ಪತ್ತಗುಡ್ಡ ವನ್ಯಜೀವಿಧಾಮವಾಗಿ ಘೋಷಿಸಲ್ಪಟ್ಟಿತ್ತು. ಕಪ್ಪತ್ತಗುಡ್ಡವು ಜೀವವೈವಿಧ್ಯತೆ, ಅಪರೂಪದ ಸಸ್ಯಗಳು ಹಾಗೂ ಜೌಷಧೀಯ ಸಸ್ಯಗಳು ರಕ್ಷಿಸಬೇಕು. ಕಪ್ಪತ್ತಗುಡ್ಡದ ವನ್ಯಜೀವಿಧಾಮವು ಪರಿಸರದ ಜೀವಿವೈವಿಧ್ಯತೆ ಸೂಕ್ಷ ್ಮ ಪ್ರದೇಶವಾಗಿದೆ. ಜೀವವೈವಿಧ್ಯತೆಯ ಸಸ್ಯ ಸಂಪತ್ತು, ಅಮೂಲ್ಯ ಹಾಗೂ ವಿಶಿಷ್ಟತೆಯಿಂದ ಕೂಡಿದೆ. ಈ ವಿಶಿಷ್ಟವಾದ ಪರಿಸರ ವೈವಿಧ್ಯತೆಯನ್ನು ಮಾನವ ಸಮಾಜದ ಮುಂದಿನ ಪೀಳಿಗೆಗಾಗಿ ಕಾಯ್ದಿಡಲು ಸಂರಕ್ಷಣೆ ಮಾಡಬೇಕಿದೆ. ಜೀವವೈವಿಧ್ಯತೆ, ಸಸ್ಯವೈವಿಧ್ಯತೆ ಸಂಪತ್ತು ನಾಶವಾಗದಂತೆ ಕಾಪಾಡಬೇಕೆಂದು ಕಪ್ಪತ್ತಗುಡ್ಡ ವನ್ಯಜೀವಿಧಾಮ ಘೋಷಣೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಕಂದಾಯ ಗ್ರಾಮಗಳು ವ್ಯಾಪ್ತಿಯಲ್ಲಿಲ್ಲ: ಕಪ್ಪತ್ತಗುಡ್ಡದ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಗದಗ, ಶಿರಹಟ್ಟಿ, ಮುಂಡರಗಿ ಭಾಗದ ಯಾವುದೇ ಕಂದಾಯ ಗ್ರಾಮಗಳು, ಪಟ್ಟಾ ಜಮೀನುಗಳು, ಕಂದಾಯ ಜಮೀನುಗಳು ಒಳಪಡುವುದಿಲ್ಲವೆಂದು ಸ್ಪಷ್ಟವಾಗಿ ಹೇಳಲಾಗಿದೆ.

ಜೊತೆಗೆ ಕಪ್ಪತ್ತಗುಡ್ಡದ ವನ್ಯಜೀವಿಧಾಮದ ವ್ಯಾಪ್ತಿಯು ಗದಗ, ಶಿರಹಟ್ಟಿ, ಮುಂಡರಗಿ ಸೇರಿದಂತೆ 24415.73 ಹೆಕ್ಟೇರ್‌ ಅಥವಾ 244.15 ಕಿಮೀ ಒಳಗೊಂಡಿದೆ. ಇದರಿಂದ ಈ ಭಾಗದ ಕಪ್ಪತ್ತಗುಡ್ಡದ ಪ್ರದೇಶದ ಸಂರಕ್ಷಣೆಯಲ್ಲಿ ಒಂದು ದೊಡ್ಡಮಟ್ಟದ ಬದಲಾವಣೆಯನ್ನು ಭವಿಷ್ಯದ ದಿನಗಳಲ್ಲಿ ಕಾಣಬಹುದಾಗಿದೆ. ಜೊತೆಗೆ ಕಪ್ಪತ್ತಗುಡ್ಡದ ಅಪರೂಪದ ಸಸ್ಯಗಳು, ಚಿರತೆ, ಕತ್ತೆ ಕಿರುಬ, ಜಿಂಕೆ,ನವಿಲುಗಳು, ಕಾಡು ಹಂದಿಗಳು ಸೇರಿದಂತೆ ಈ ಪರಿಸರದಲ್ಲಿರುವ ಪ್ರತಿಜೀವಿಗಳಿಗೆ ಬದುಕಲು ಮುಕ್ತವಾದ ವಾತಾವರಣವು ಪ್ರಾಪ್ತಿಯಾಗಲಿದೆ.

.ಹು.ಬಾ. ವಡ್ಡಟ್ಟಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.