ವಸತಿ ಯೋಜನೆಗೆ ಗ್ರಹಣ: ಕೈ ಸಾಲದಲ್ಲಿ ಬಡವರು

Eclipse for the Housing Scheme: Poor in hand loan

Team Udayavani, May 18, 2019, 3:08 PM IST

hasan-tdy-1..

ಚನ್ನರಾಯಪಟ್ಟಣ ಎಡಿ ಕಾಲೋನಿಯಲ್ಲಿ ಎಸ್‌ಸಿ ಜನಾಂಗದ ಆಶ್ರಯ ಮನೆ ಫ‌ಲಾನುಭವಿಗೆ ಕಳೆದ ಆರು ತಿಂಗಳಿನಿಂದ ಸಹಾಯ ಧನ ಬರದ ಹಿನ್ನೆಲೆಯಲ್ಲಿ ಮನೆ ನಿರ್ಮಾಣ ಸ್ಥಗಿತ ಗೊಳಿಸಲಾಗಿದೆ

ಚನ್ನರಾಯಪಟ್ಟಣ: ಸರ್ಕಾರದ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಫ‌ಲಾನುಭವಿಗಳಿಗೆ ಸಕಾಲಕ್ಕೆ ಸರ್ಕಾರ ಸಹಾಯ ಧನ ಬಿಡುಗಡೆ ಮಾಡದೆ ಇರುವುದರಿಂದ ಸಾವಿರಾರು ಕುಟುಂಬಗಳು ಸಾಲದ ಸುಳಿಯಲ್ಲಿ ಸಿಲುಕಿವೆ.

ತಾಲೂಕಿನ ಆರು ಹೋಬಳಿಯ 41 ಗ್ರಾಪಂನಿಂದ ಬಸವ ವಸತಿ ಯೋಜನೆ, ಇಂದಿರಾ ಅವಾಸ್‌, ರಾಜೀವ್‌ ಗಾಂಧಿ ವಸತಿ ಯೋಜನೆ, ವಿಶೇಷ ಅಭಿವೃದ್ಧಿ ಯೋಜನೆ, ಅಂಬೇಡ್ಕರ್‌ ವಸತಿ ಯೋಜನೆ, ಪ್ರಧಾನ ಮಂತ್ರಿ ಆವಾಸ್‌ ಯೋಜನೆ, ಬಸವರ ಹೆಚ್ಚವರಿ ಯೋಜನೆ ಹೀಗೆ ಅನೇಕ ಯೋಜನೆಯಲ್ಲಿ ಸೂರಿಲ್ಲದವರು ಮನೆ ನಿರ್ಮಾಣಕ್ಕೆ ಸರ್ಕಾರವನ್ನು ನಂಬಿಕೊಂಡು ಈಗ ತ್ರಿಶಂಕು ಸ್ಥಿತಿಗೆ ತಲುಪಿದ್ದಾರೆ.

ಎರಡು ಹಂತ ಮುಗಿದರು ಸಹಾಯಧನವಿಲ್ಲ: ಬಡತನ ರೇಖೆಗಿಂತ ಕೆಳಗಿರುವ ಫ‌ಲಾನುಭವಿಗಳಿಗೆ ವಿವಿಧ ವಸತಿ ಯೋಜನೆಯಡಿ 1.20 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಫ‌ಲಾನುಭವಿ ಮನೆ ನಿರ್ಮಾಣಕ್ಕೆ ತಳಪಾಯ ಹಾಕಿದಾಗ 30 ಸಾವಿರ, ಮನೆ ಗೋಡೆ ಪೂರ್ಣಗೊಂಡಾಗ 30 ಸಾವಿರ, ಮನೆಯ ಚಾವಣಿ ಹಾಕಿದಾಗ 30 ಸಾವಿರ, ಗೋಡೆಯ ಗಿಲೋ ಮಾಡಿ ಪೂರ್ಣ ಕಾಮಗಾರಿ ಮುಗಿಸಿದಾಗ 30 ಸಾವಿರ ಸಹಾಯಧನ ಬಿಡುಗಡೆ ಮಾಡುವ ಮೂಲಕ ನಾಲ್ಕು ಹಂತದಲ್ಲಿ ಫ‌ಲಾನುಭವಿ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ ಆದರೆ ಎರಡು ಹಂತದ ಕಾಮಗಾರಿ ಮುಕ್ತಾಯವಾದರೂ ಬಿಡಿಗಾಸು ಖಾತೆಗೆ ಜಮೆಯಾಗದ ಹಿನ್ನೆಲೆಯಲ್ಲಿ ಮನೆ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

ಸರ್ಕಾರ ನಂಬಿ ಸಾಲಗಾರರಾದರು: ಸರ್ಕಾರವೇ ಅರ್ಥಿಕವಾಗಿ ಹಿಂದುಳಿದವರು ಎಂದು ಸೂಚಿಸಿದ ಫ‌ಲಾನುಭವಿಗಳು ಸೂರು ನಿರ್ಮಿಸಿಕೊಳ್ಳಲು ಇನ್ನೊಬ್ಬರ ಬಳಿ ಕೈಚಾಚಿ ಸಾಲಮಾಡಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದು ಸಾವಿರಾರು ಬಡಕುಟುಂಬ ಬೀದಿಗೆ ಬರುವಂತಾಗಿವೆ. ಅದು ಸರ್ಕಾರವನ್ನು ನಂಬಿ ಸಾಲಗಾರರಾಗಿರುವುದು ವಿಪರ್ಯಾಸದ ಸಂಗತಿ.

ಬಡ್ಡಿ ಸಾಲಕ್ಕೆ ಮೊರೆ: ಸರ್ಕಾರದಿಂದ ಬಿಡುಗಡೆ ಆಗಬೇಕಿದ್ದ ಸಹಾಯಧನ ಸಕಾಲಕ್ಕೆ ಬಿಡುಗಡೆ ಆಗದೆ ಇರುವುದರಿಂದ ಕೈ ಸಾಲಮಾಡಿದ ಹಣಕ್ಕೆ ಹಲವು ಮಂದಿ ಫ‌ಲಾನುಭವಿಗಳು ಬಡ್ಡಿತೆತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಬ್ಬಿಣ, ಮರಳು, ಇಟ್ಟಿಗೆ, ಸಿಮೆಂಟ್, ಜಲ್ಲಿ ಹೀಗೆ ಸಾಮಗ್ರಿಯನ್ನು ಸಾಲದಲ್ಲಿ ತಂದು ಮನೆ ನಿರ್ಮಿಸಿಕೊಳ್ಳಲು ಕಡುಬಡವರು ಮುಂದಾದರು. ಈಗ ಸಾಲ ನೀಡಿದವರು ಮನೆ ಬಾಗಿಲಿಗೆ ಬರುತ್ತಿರುವುದರಿಂದ ಮಾನ ಉಳಿಸಿಕೊಳ್ಳಲು ವಿಧಿ ಇಲ್ಲದೆ ಬಡ್ಡಿ ಸಾಲದ ಮೊರೆ ಹೋಗುತ್ತಿದ್ದಾರೆ.

ಪುರಸಭೆವ್ಯಾಪ್ತಿಗೂ ಅನುದಾನವಿಲ್ಲ: ಪುರಸಭೆ ವ್ಯಾಪ್ತಿಯ 27 ವಾರ್ಡ್‌ಗಳಿಂದ ಕಳೆದ ಸಾಲಿನಲ್ಲಿ ಸುಮಾರು 70 ಫ‌ಲಾನುಭವಿಗಳ ಪೈಕಿ 50 ಮಂದಿಗೆ ಅನುದಾನ ಬಿಡುಗಡೆಯಾಗಿದ್ದು ಉಳಿದ 20 ಮಂದಿಗೆ ಅನುದಾನ ನೀಡಿಲ್ಲ, ಪ್ರಸಕ್ತ ಸಾಲಿನಲ್ಲಿ ಸುಮಾರು 277 ಮಂದಿ ಮನೆ ನಿರ್ಮಾಣ ಮಾಡಿಕೊಳ್ಳುವುದಾಗಿ ಅರ್ಜಿ ನೀಡಿದ್ದು ಪುರಸಭೆ ಅಧಿಕಾರಿಗಳು ಪರಿಶೀಲಿಸಿ ಜಿಲ್ಲಾಧಿಕಾರಿ ಕಚೇರಿಗೆ ರವಾನೆ ಮಾಡಿದ್ದಾರೆ.

ಜಿಲ್ಲಾಡಳಿತ ಚುನಾವಣೆ ಬ್ಯುಸಿ: ಸೂರಿಲ್ಲದವರು ಮಳೆಗಾಲದ ಒಳಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಜಿ ನೀಡಿದ್ದು ಇದುವರೆಗೆ ಜಿಲ್ಲಾಡಳಿತದಿಂದ ನಿರ್ಮಾಣ ಮಾಡಿಕೊಳ್ಳಲು ಆದೇಶ ನೀಡಿಲ್ಲ, ಈಗ್ಗೆ ಎರಡು ವರ್ಷದ ಹಿಂದೆ 43 ಮಂದಿ ಫ‌ಲಾನುಭವಿಗಳಲ್ಲಿ 25 ಮಂದಿ ಮಾತ್ರ ಮನೆ ನಿರ್ಮಿಸಿದ್ದಾರೆ. ಉಳಿದ 18 ಮಂದಿಗೆ ಈ ವರ್ಷವೂ ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದೆ. ಆದರೆ, ಸಕಾಲಕ್ಕೆ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ರಾಷ್ಟ್ರದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ ಈ ವೇಳೆಯಲ್ಲಿ ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಇರುವುದರಿಂದ ವಸತಿ ಯೋಜನೆಯ ಫ‌ಲಾನುಭವಿಗಳಿಗೆ ಸಹಾಯ ಧನ ಬಿಡುಗಡೆಯಾಗಿಲ್ಲ ಎಂದು ಅಧಿಕಾರಿಗಳು ಕುಂಟು ನೆಪ ಹೇಳುತ್ತಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಅನುದಾನದ ಕೊರತೆ:

ಪುರಸಭೆ ವ್ಯಾಪ್ತಿಯಲ್ಲಿ ಎಸ್‌ಸಿ ಎಸ್‌ಟಿ ಜನಾಂಗದ ವಸತಿ ಫ‌ಲಾನುಭವಿಗಳು ಈಗಾಗಲೆ ಶೇ.80 ಮನೆ ಕಾಮಗಾರಿ ಮುಗಿಸಿದ್ದರೂ, ಸರ್ಕಾರದಿಂದ ಬಿಡಿಗಾಸು ಬಂದಿಲ್ಲ, ರಾಜ್ಯ ಸರ್ಕಾರ 1.80 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರ 1.50 ಲಕ್ಷ ರೂ. ಅನುದಾನ ನೀಡಬೇಕಿದೆ. ರಾಜಿವಗಾಂಧಿ ಗ್ರಾಮೀಣ ವಸತಿ ಯೋಜನಾ ನಿಗಮಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ನೀಡಿದ ಮೇಲೆ ಎಸ್‌ಸಿ ಎಸ್‌ಟಿ ಫ‌ಲಾನುಭವಿಗಳ ಖಾತೆಗೆ ನೇರವಾಗಿ ಸಹಾಯ ಧನ ಜಮೆಯಾಗಲಿದೆ ಆದರೆ ಕಳೆದ ಎರಡು ವರ್ಷದಿಂದ ಸಮಾಜ ಕಲ್ಯಾಣ ಇಲಾಖೆ ಸಹಾಯ ಧನ ಬಿಡುಗಡೆ ಮಾಡದೆ ಅನುದಾನದ ಕೊರತೆಯ ಕುಂಟು ನೆಪ ಹೇಳುತ್ತಿದೆ.
● ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.