ಆ. 15ರಂದು ಪ್ಲಾಸ್ಟಿಕ್‌ ಮುಕ್ತ ಪಟ್ಟಣ ಘೋಷಣೆ

ಜೂ. 1ರಿಂದ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸಲು ಉಪವಿಭಾಗಾಧಿಕಾರಿ ನಾಗರಾಜು ಸೂಚನೆ

Team Udayavani, May 18, 2019, 3:16 PM IST

hasan-tdy-2..

ಹೊಳೆನರಸೀಪುರ ಪುರಸಭೆ ಸಭಾಂಗಣದಲ್ಲಿ ನಡೆದ ಪ್ಲಾಸ್ಟಿಕ್‌ ನಿಷೇಧ ಕುರಿತ ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ್‌ ಶ್ರೀನಿವಾಸ್‌ ಮಾತನಾಡಿದರು. ಉಪ ವಿಭಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೇರಿದಂತೆ ಸಾರ್ವಜನಿಕರಿದ್ದರು.

ಹೊಳೆನರಸೀಪುರ: ಪಟ್ಟಣವನ್ನು ಆಗಸ್ಟ್‌ 15 ರಂದು ಪ್ಲಾಸ್ಟಿಕ್‌ ಮುಕ್ತ ಪಟ್ಟಣದ ಎಂದು ಘೋಷಣೆ ಮಾಡಲಾಗುತ್ತಿದ್ದು, ಅದಕ್ಕಾಗಿ ಜೂನ್‌ ಒಂದರಿಂದ ಪಟ್ಟಣದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಿಸುವ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ಪಟ್ಟಣದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಪರಿಸರಕ್ಕೆ ತೀವ್ರ ದಕ್ಕೆ ಉಂಟಾಗಿದೆ. ಆದ್ದರಿಂದ ಶನಿವಾರದಿಂದಲೇ ಪ್ಲಾಸ್ಟಿಕ್‌ ನಿಷೇಧಕ್ಕೆ ಚಾಲನೆ ನೀಡಲು ಬಂದಿರುವುದಾಗಿ ತಿಳಿಸಿದರು.

ಪ್ಲಾಸ್ಟಿಕ್‌ ಬಳಕೆಯಿಂದ ಸಮಾಜದ ಮೇಲೆ ತೀವ್ರವಾದ ಪರಿಣಾಮ ಬೀರಿದ್ದು ಪ್ಲಾಸ್ಟಿಕ್‌ ತಡೆಗಟ್ಟಲು ಕಾನೂನಿನ ಕ್ರಮದ ಜೊತೆಗೆ ಸಮಾಜದ ಪ್ರತಿಯೊಬ್ಬರು ಸಹ ಕಟಿಬದ್ಧರಾಗಿ ನಿಷೇಧ ಜಾರಿಗೆ ತರುವಲ್ಲಿ ಕೈಜೋಡಿಸುವಂತೆ ಕೋರಿದರು.

ಜೂನ್‌ ಒಂದರಿಂದ ಪಟ್ಟಣದಲ್ಲಿ ಶಾಶ್ವತವಾಗಿ ಪ್ಲಾಸ್ಟಿಕ್‌ ಮುಕ್ತಗೊಳಿಸಲು ತಾಲೂಕು ಆಡಳಿತ ಹತ್ತು ತಂಡಗಳನ್ನು ರಚಿಸಿ ನಿತ್ಯವೂ ಪಟ್ಟಣದಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವ ಮತ್ತು ಅದನ್ನು ಉಪಯೋಗಿಸುವ ವರ್ತಕರ ಅಂಗಡಿಗಳ ಮೇಲೆ ದಾಳಿ ನಡೆಸಲಾಗುವುದು ಅದಕ್ಕಾಗಿ ಈಗಾಗಲೇ ತಂಡಗಳನ್ನು ರಚಿ ಸಿದ್ದು, ಪ್ರತಿ ತಂಡದಲ್ಲಿ ಸರ್ಕಾರಿ ಇಲಾಖೆಯ ಒರ್ವ ಅಧಿಕಾರಿ , ಪುರಸಭೆ ಅಧಿಕಾರಿ ಮತ್ತಿತರರು ಇರಲಿದ್ದಾರೆ ಎಂದರು.

ಸಭೆಯಲ್ಲಿ ಹಾಜರಿದ್ದ ತಾಲೂಕು ವರ್ತಕರ ಸಂಘದ ಕಾರ್ಯದರ್ಶಿ ಮಾತನಾಡಿ, ಈ ಹಿಂದೆ ಪುರಸಭೆ ಮುಖ್ಯಾಧಿ ಕಾರಿ ಗಳು ಮತ್ತಿತರರು ಕರೆದಿದ್ದ ಸಭೆಯಲ್ಲಿ ವರ್ತಕ ಸವ ುುದಾಯದ ಮುಖಂಡುರಿದ್ದು, ಆ ಸಭೆಯಲ್ಲಿ ಪ್ಲಾಸ್ಟಿಕ್‌ ನಿಷೇಧ ಕುರಿತ ಚರ್ಚೆಯಲ್ಲಿ ಏಕಾಏಕಿ ಪ್ಲಾಸ್ಟಿಕ್‌ ನಿಷೇಧ ಮಾಡುವುದು ಬೇಡ ಜೂನ್‌ ಒಂದರವರೆಗೆ ವರ್ತಕರಿಗೆ ತಿಳಿ ಹೇಳಿ ಪ್ಲಾಸ್ಟಿಕ್‌ ಬಳಕೆ ಮತ್ತು ವ್ಯಾಪಾರ ಮಾಡುವುದು ಬೇಡೆವೆಂದು ಅರಿವು ಮೂಡಿಸುತ್ತೇವೆ ಎಂದರು.

ಅದಕ್ಕೆ ಸಹಮತ ವ್ಯಕ್ತ ಪಡಿಸಿದ ಉಪವಿಭಾಗಾಧಿಕಾರಿ ಡಾ. ಎಚ್.ಎಲ್.ನಾಗರಾಜು ಇದಕ್ಕೆ ಬೇಕಾದ ಕಾರ್ಯಕ್ರಮಗ ಳನ್ನು ಹಮ್ಮಿಕೊಂಡು ಸಾರ್ವಜನಿಕರು ಮತ್ತು ವರ್ತಕರುಗಳಿಗೆ ಅರಿವು ಮೂಡಿಸಲು ವರ್ತಕರ ಸಂಘ ಸಹಕರಿಸುವಂತೆ ತಿಳಿಸಿದರು.

ಈ ಸಭೆಗೆ ಕೇವಲ ಒಂದೇ ಒಂದು ವರ್ತಕ ಸಂಘದ ಹಾಜ ರಾತಿ ಇದೆ, ಆದರೆ ಪಟ್ಟಣದ ಇನ್ನು ಮೂರು-ನಾಲ್ಕು ಸಂಘ ಗಳಿದ್ದು, ಅವುಗಳನ್ನು ಈ ನಿಷೇಧ ಕಾರ್ಯಕ್ರಮಕ್ಕೆ ಸೇರ್ಪಡೆ ಮಾಡಿಕೊಳ್ಳುವುದರಿಂದ ಪ್ಲಾಸ್ಟಿಕ್‌ ನಿಷೇಧದ ಕಾರ್ಯಕ್ರಮ ಸಫಲತೆ ಕಾಣಲು ಸಾಧ್ಯವಿದೆ ಎಂದು ಸಭೆ ನಿರ್ಧರಿಸಿತು.

ಸಾರ್ವಜನಿಕರುಗಳು ತಮ್ಮಲ್ಲಿನ ಅನಿಸಿಕೆಗಳನ್ನು ವ್ಯಕ್ತ ಪಡಿಸಿ ಪ್ಲಾಸ್ಟಿಕ್‌ ನಿಷೇಧಕ್ಕೆ ಮೊದಲು ಅದಕ್ಕೆ ಪರ್ಯಾಯ ವ್ಯವಸ್ಥೆ ಬಗ್ಗೆ ತೀವ್ರವಾಗಿ ಚರ್ಚೆ ನಡೆಯಿತು. ಉಪವಿಭಾಧಿಕಾರಿ ಎಚ್.ಎಲ್.ನಾಗರಾಜು ಅವರೊಂದಿಗೆ ಆಗಮಿಸಿದ್ದ ಅಧಿಕಾರಿಗಳು ಪ್ಲಾಸ್ಟಿಕ್‌ಗೆ ಪರ್ಯಾಯÊಾಗಿ ಬೇಕಾದ ಸಲಕರಣೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಾಲೂಕು ವರ್ತಕರ ಸಂಘದ ಅಧ್ಯಕ್ಷ ಕೆ. ಶ್ರೀಧರ್‌, ತಾಲೂಕು ಸ್ವಾಮಿ ವಿವೇಕಾನಂದ ಯುವ ವೇದಿಕೆ ಅಧ್ಯಕ್ಷ ಎಂ.ಎಂ.ಎ.ರಹೆಮಾನ್‌ ಸೇರಿದಂತೆ ಪಟ್ಟಣದ ಬೆರ ಳೆಣಿಕೆಯಷ್ಟು ಮಂದಿ ವರ್ತಕರು ಮತ್ತು ವಿವಿಧ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ತಾಲೂಕು ವೈದ್ಯಾಧಿಕಾರಿ ಎಚ್.ಎನ್‌.ರಾಜೇಶ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.