ಪುರಸಭೆಗೆ ಸೇರಿದರೂ ಮುಕ್ತಿ ಕಾಣದ ಹೊಸಹೊಳಲು

ಕಳಪೆ ಕಾಮಗಾರಿಗಳ ಕಿರಿಕಿರಿ, ಕಸದಿಂದ ತುಂಬಿರುವ ಚರಂಡಿಗಳು, ಉರಿಯದ ಬೀದಿ ದೀಪಗಳು, ಬಯಲೇ ಶೌಚಾಲಯ

Team Udayavani, May 18, 2019, 4:14 PM IST

mandya-tdy-1..

ಹೊಸಹೊಳಲು ಕಾಲೋನಿಯಲ್ಲಿ ಸಂಗ್ರಹವಾಗಿರುವ ಕೊಳಚೆ ನೀರು.

ಕೆ.ಆರ್‌.ಪೇಟೆ: ಸರ್ಕಾರ ದಲಿತರು ಮತ್ತು ಹಿಂದುಳಿದವರು ವಾಸಿಸುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು ವಾರ್ಷಿಕ ಕೋಟ್ಯಂತರ ರೂ. ಬಿಡುಗಡೆ ಮಾಡುತ್ರಿದೆ. ಜೊತೆಗೆ ಬಹುತೇಕ ಅನುದಾನದಲ್ಲಿ ಶೇ.22ರಷ್ಟು ಹಣ ಹಿಂದುಳಿದವರ ಅಭಿವೃದ್ಧಿಗಾಗಿ ಮೀಸಲಿಡುತ್ತದೆ. ಆದರೆ ಹೊಸಹೊಳಲು ಗ್ರಾಮದಲ್ಲಿ ದಲಿತರು ವಾಸಿಸುವ ಕಾಲೋನಿ ಮಾತ್ರ ಅಭಿವೃದ್ಧಿಯಾಗದೆ ಅಲ್ಲಿನ ನಿವಾಸಿಗಳು ಇಂದಿಗೂ ಕತ್ತಲು, ಕೊಳಚೆ ಮತ್ತು ದುರ್ವಾಸನೆಯಲ್ಲೇ ಬದುಕುತ್ತಿರುವುದು ವಿಪರ್ಯಾಸವೇ ಸರಿ.

ಕೆ.ಆರ್‌.ಪೇಟೆ ಪುರಸಭಾ ವ್ಯಾಪ್ತಿಗೆ ಸೇರುವ ಈ ಕಾಲೋನಿಯಲ್ಲಿ ಸುಮಾರು ಒಂದು ಸಾವಿರ ದಲಿತರ ಜನಸಂಖ್ಯೆ ಇದೆ. ಕಾಲೋನಿಗೆ ಕನಿಷ್ಠ ಮೂಲ ಸೌಲಭ್ಯ ಒದಗಿಸಿಕೊಡುವಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ವಿಫ‌ಲರಾಗಿದ್ದಾರೆ. ಶೇ.20ರಷ್ಟು ಮನೆಗಳಲ್ಲಿ ಶೌಚಾಲಯಗಳಿಲ್ಲದೆ ಬಹುತೇಕ ಮಹಿಳೆಯರು ಇಂದಿಗೂ ಬಯಲು ಶೌಚಾಲಯವೇ ಆಶ್ರಯಿಸಿದ್ದಾರೆ.

ಕಳಪೆ ಕಾಮಗಾರಿ ಕಿರಿಕಿರಿ: ಕಾಲೋನಿಯ ರಸ್ತೆಯಲ್ಲಿ 20 ವರ್ಷಗಳ ಹಿಂದೆ ಅಭಿವೃದ್ಧಿ ಪಡಿಸಿ ಚಪ್ಪಡಿ ಬಳಸಿ ಚರಂಡಿ ನಿರ್ಮಾಣ ಮಾಡಿದ್ದರು. ಆ ಸಮಯದಲ್ಲಿ ನೀರು ಸರಾಗವಾಗಿ ಹರಿದು ಹೋರ ಹೋಗುತ್ತಿತ್ತು. ಆದರೆ ಕಳೆದ ಐದು ವರ್ಷಗಳ ಹಿಂದೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿ ನೂತನ ಚರಂಡಿ ನಿರ್ಮಾಣ ಮಾಡಲಾಗಿತ್ತು. ಆದರೆ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದ್ದರಿಂದ ರಸ್ತೆ ಗುಂಡಿ ಬಿದ್ದಿದೆ. ಜನರು ಬರಿಕಾಲಿನಲ್ಲಿ ಓಡಾಡದಂತಾಗಿದೆ. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯಲಾಗಿದೆ ನಿಂತು ಕೊಳೆಯುತ್ತಿದೆ. ಮತ್ತೆ ಕೆಲ ರಸ್ತೆಗೆ ಅಡ್ಡಲಾಗಿ ಚರಂಡಿ ನಿರ್ಮಾಣ ಮಾಡಿದ್ದಾರೆ. ಆದರೆ ಅದಕ್ಕೆ ಕಿರು ಸೇತುವೆ ನಿರ್ಮಾಣ ಮಾಡಿಲ್ಲ. ಆ ರಸ್ತೆಗಳಲ್ಲಿ ವಾಹನಗಳು ಓಡಾಡಲಾಗದೆ ಪಕ್ಕದ ರಸ್ತೆಯನ್ನು ಬಳಸಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಸ ಎತ್ತಲ್ಲ, ಬೀದಿ ದೀಪ ಉರಿಯಲ್ಲ: ದಲಿತಕೇರಿ ಎಂದೆ ಕರೆಯುವ ಹೊಸಹೊಳಲು ಕಾಲೋನಿಯನ್ನು ಪೌರಕಾರ್ಮಿಕರು ಸ್ವಚ್ಛ ಮಾಡುವುದಿಲ್ಲ. ಬದಲಿಗೆ ಅಲ್ಲಿನ ನಿವಾಸಿಗಳೇ ರಸ್ತೆಯನ್ನು ಸ್ವಚ್ಛ ಮಾಡಿ ಕೊಡಬೇಕು. ತಿಂಗಳಿಗೆ ಒಮ್ಮೆ ಅಥವಾ ಎರಡು ಬಾರಿ ಪೌರಕಾರ್ಮಿಕರು ಬಂದು ಕಸವನ್ನು ವಾಹನದಲ್ಲಿ ತುಂಬಿಕೊಂಡು ಹೋಗುತ್ತಾರೆ. ಆದರೆ ಕಸ ಗುಡಿಸಿ ಸ್ವಚ್ಛತೆ ಮಾಡುವುದಿಲ್ಲ ಎಂಬುದು ಸ್ಥಳೀಯ ನಿವಾಸಿಗಳು ಆರೋಪವಾಗಿದೆ. ಇದರ ಜೊತೆಗೆ ಬೀದಿ ದೀಪಗಳ ಬೆಳಕು ಕಂಡು ಆರು ತಿಂಗಳು ಕಳೆದಿದ್ದರೂ ಅಧಿಕಾರಿಗಳು ಇತ್ತ ಮುಖ ಹಾಕಿಲ್ಲ ದುರಸ್ತಿಯೂ ಮಾಡಿಸಿಲ್ಲ. ಮತ್ತೆ ಕೆಲ ದೀಪಗಳು ಗಾಳಿಯಿಂದಾಗಿ ಮೇಲೆಕ್ಕೆ ತಿರುಗಿ ಆಕಾಶಕ್ಕೆ ಬೆಳಕನ್ನು ನೀಡುತ್ತಿವೆ.

ಬಯಲೇ ಶೌಚಾಲಯ: ಕಾಲೋನಿಯಲ್ಲಿ ಬಹುತೇಕ ಬಡ ಕುಟುಂಬಗಳೆ ವಾಸ ಮಾಡುತ್ತಿವೆ. ಕೆಲ ಮನೆಗಳಲ್ಲಿ ಇಂದಿಗೂ ಶೌಚಾಲಯ ನಿರ್ಮಾಣ ಮಾಡಿಕೊಂಡಿಲ್ಲ. ಕೇಂದ್ರ ಸರ್ಕಾರ ಸ್ವಚ್ಛ ಭಾರತ್‌ ಯೋಜನೆಯಡಿ ಉಚಿತ ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದರೂ ಮಾಹಿತಿ ಕೊರತೆ ಅಥವಾ ಅಸಹಾಯಕತೆಯಿಂದಾಗಿ ಶೌಚಾಲಯ ಸೌಲಭ್ಯ ಸರ್ಕಾರದಿಂದ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಈಗ ಮಹಿಳೆಯರು ಮಕ್ಕಳು ಬಯಲು ಶೌಚಾಲಯವನ್ನೇ ಆಶ್ರಯಿಸಿದ್ದಾರೆ. ಕೆಲವರು ಮನೆಯ ಮುಂಭಾಗದಲ್ಲಿಯೇ ತೆಂಗಿನ ಗರಿಗಳಿಂದ ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡಿಕೊಂಡು ಬಳಸುತ್ತಿದ್ದಾರೆ ಎಂದರೆ ಇಲ್ಲಿನ ನಿವಾಸಿಗಳ ಸಮಸ್ಯೆ ಬಿಡಿಸಿ ಹೇಳಬೇಕಾಗಿಲ್ಲ.

● ಎಚ್.ಬಿ.ಮಂಜುನಾಥ್‌

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.