ತುಮಕೂರಲ್ಲಿ ಯುಎಲ್ಬಿ ಮೂಲಕ ತೆರಿಗೆ ಸಂಗ್ರಹ

ತೆರಿಗೆ ಸಂಗ್ರಹಣೆಗೆ ಹ್ಯಾಂಡ್‌ ಹೆಲ್ಡ್ಯಂತ್ರ ಬಳಕೆ • ರಾಜ್ಯದಲ್ಲೇ ಮೊದಲ ಬಾರಿಗೆ ಈ ಯಂತ್ರ ಉಪಯೋಗ

Team Udayavani, May 18, 2019, 5:01 PM IST

tumkur-tdy-tdy-3..

ತುಮಕೂರು ಮಹಾನಗರ ಪಾಲಿಕೆಯಲ್ಲಿ ಯುಎಲ್ಬಿ ಮೂಲಕ ವಿವಿಧ ತೆರಿಗೆಗಳನ್ನು ಸಂಗ್ರಹಿಸುತ್ತಿರುವುದು.

ತುಮಕೂರು: ಕಾಗದ ರಹಿತ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಬಾರಿ ಪೇಪರ್‌ ಲೆಸ್‌, ಬಜೆಟ್ ಮಂಡಿಸಿದ್ದ ಮೊದಲ ಮಹಾನಗರ ಪಾಲಿಕೆ ಎನ್ನುವ ಕೀರ್ತಿಗೆ ಪಾತ್ರವಾಗಿದ್ದ ತುಮಕೂರು ಮಹಾನಗರ ಪಾಲಿಕೆ, ಈಗ ಪಾಲಿಕೆ ವ್ಯಾಪ್ತಿಯ ವಿವಿಧ ತೆರಿಗೆಯನ್ನು ಯುಎಲ್ಬಿ ಬಿಲ್ ಮೂಲಕ ಸಂಗ್ರಹಿಸುವ ಮೊದಲ ಪ್ರಯತ್ನವನ್ನು ರಾಜ್ಯದಲ್ಲಿ ತುಮಕೂರು ಮಹಾನಗರ ಪಾಲಿಕೆ ಮುಂದಾಗಿದೆ.

ತುಮಕೂರು ಮಹಾನಗರ ಪಾಲಿಕೆಯು ಸಾರ್ವಜನಿಕರಿಂದ ಸುಗಮ ಹಾಗೂ ಚುರುಕು ತೆರಿಗೆ ಸಂಗ್ರಹಣೆಗೆ ಹ್ಯಾಂಡ್‌ ಹೆಲ್ಡ್ಯಂತ್ರ ಬಳಕೆಗೆ ಮುಂದಾಗಿದೆ. ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಈ ಯಂತ್ರವನ್ನು ಉಪಯೋಗಿಸುತ್ತಿರುವ ಏಕೈಕ ನಗರ ಸ್ಥಳೀಯ ಸಂಸ್ಥೆಯಾಗಿದೆ. ನಗರದ ವಿವಿಧ ಕಡೆಗಳಲ್ಲಿ ಪಾಲಿಕೆಯ ಅಧಿಕಾರಿಗಳು ವಿವಿಧ ತೆರಿಗೆಗಳನ್ನು ಸಂಗ್ರಹಿಸಲು ವಿವಿಧ ಬಡಾವಣೆಗಳಲ್ಲಿ ಮನೆ ಬಾಗಿಲಿಗೆ ಹೋಗಿ ತೆರಿಗೆ ಸಂಗ್ರಹಿಸಲು ಮುಂದಾಗಿರುವುದು ತುಮಕೂರು ಮಹಾನಗರ ಪಾಲಿಕೆ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮನೆ ಬಾಗಿಲಲ್ಲಿ ತೆರಿಗೆ ಸಂಗ್ರಹ: ಆಸ್ತಿ ತೆರಿಗೆ, ನೀರಿನ ತೆರಿಗೆ, ಒಳಚರಂಡಿ ತೆರಿಗೆ ಸೇರಿದಂತೆ ಪಾಲಿಕೆಗೆ ಸಂದಾಯ ಮಾಡಬೇಕಿದ್ದ ವಿವಿಧ ತೆರಿಗೆಗಳನ್ನು ಟಿಸಿಸಿ ಕಂದಾಯ ವಸೂಲಿಗಾರರು ಮನೆ ಬಾಗಿಲುಗಳಿಗೆ ಹೋಗಿ ಸಂಗ್ರಹಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪಾಲಿಕೆಯು ತನ್ನ ವ್ಯಾಪ್ತಿಯ ನಾಗರಿಕರಿಂದ ಆಸ್ತಿ ತೆರಿಗೆ, ನೀರಿನ ಶುಲ್ಕ, ಯುಜಿಡಿ ಶುಲ್ಕ, ಉದ್ದಿಮೆ ಶುಲ್ಕಗಳನ್ನು ನಗದು, ಕ್ರೆಡಿಟ್, ಡೆಬಿಟ್ ಕಾರ್ಡ್‌, ಚೆಕ್‌ ಅಥವಾ ಡಿಡಿ ಮೂಲಕ ಸಂಗ್ರಹಿಸಲು ಈ ಹ್ಯಾಂಡ್‌ ಹೆಲ್ಡ್ ಯಂತ್ರವನ್ನು ಬಳಕೆ ಮಾಡುತ್ತಿದ್ದಾರೆ.

ಆಸ್ತಿ ಛಾಯಾಚಿತ್ರ ಸೆರೆ ಹಿಡಿಯಬಹುದು: ಈ ಯಂತ್ರದ ಸಹಾಯದಿಂದ ವಿವಿಧ ತೆರಿಗೆ ಶುಲ್ಕಕ್ಕೆ ಸಂಬಂಧಿಸಿದ ಡಿಮ್ಯಾಂಡ್‌ ನೋಟ್ ಪ್ರಿಂಟ್ ಅನ್ನು ಸ್ಥಳದಲ್ಲಿಯೇ ಸಾರ್ವಜನಿಕರಿಗೆ ವಿತರಿಸುತ್ತಿದ್ದಾರೆ. ಸಾರ್ವಜನಿಕರು ಸದರಿ ಡಿಮ್ಯಾಂಡ್‌ ನೋಟ್ ಅನ್ನು ತುಲನೆ ಮಾಡಿ, ತಮ್ಮ ತೆರಿಗೆ ಶುಲ್ಕವನ್ನು ಪಾಲಿಕೆಯ ಕರವಸೂಲಿಗಾರರು, ಆರೋಗ್ಯ ನಿರೀಕ್ಷಕರ ಮೂಲಕ ಪಾವತಿಸಿ ರಸೀದಿ ಪಡೆಯುತ್ತಿದ್ದಾರೆ. ಅಲ್ಲದೆ, ಈ ಯಂತ್ರದ ಮೂಲಕ ಆಸ್ತಿಯ ಛಾಯಾಚಿತ್ರವನ್ನು ಸೆರೆ ಹಿಡಿಯಬಹುದಾಗಿದೆ ಹಾಗೂ ದುರ್ಬಳಕೆ ತಡೆಗಾಗಿ ಜಿಪಿಎಸ್‌ ಅಳವಡಿಲಾಗಿದೆ.

ಸ್ಥಳದಲ್ಲಿಯೇ ದಂಡ ವಿಧಿಸಬಹುದು: ಯಂತ್ರದ ಮೂಲಕ ತೆರಿಗೆ ಸಂಗ್ರಹಿಸಬಹುದಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಚೆಲ್ಲುವ, ಹಾಕುವ ಹಾಗೂ ನಗರದ ಸೌಂದರ್ಯವನ್ನು ವಿರೂಪಗೊಳಿಸುವವರಿಗೆ ಸ್ಥಳ ದಲ್ಲಿಯೇ ದಂಡ ವಿಧಿಸುತ್ತಿದ್ದಾರೆ. ಆಸ್ತಿಯ ಉಪ ಯೋಗ ಮತ್ತು ನಲ್ಲಿ ಸಂಪರ್ಕದ ಬಳಕೆಯನ್ನು ವಸತಿ ಅಥವಾ ವಾಣಿಜ್ಯ ಬಳಕೆಯಾಗಿ ಸ್ಥಳದಲ್ಲಿಯೇ ಮಾರ್ಪಡಿಸಲು ಅವಕಾಶವಿದೆ.

ಇಂತಂಹ ಸಮಗ್ರ ಯಂತ್ರಗಳೊಂದಿಗೆ ತೆರಿಗೆ ಸಂಗ್ರಹ ಮಾಡುವ ಸಾಧನ ಭಾರತದಲ್ಲಿ ಇರಬಹುದು. ಆದರೆ, ಕರ್ನಾಟಕದಲ್ಲಿ ಈ ರೀತಿಯ ಸಾಧನವನ್ನು ಬಳಸಿ ಸ್ಥಳದಲ್ಲಿಯೇ ತೆರಿಗೆ ಸಂಗ್ರಹಿಸಿ, ಸಂಗ್ರಹಿಸಿದ ತೆರಿಗೆ ರಶೀದಿಯನ್ನು ನೀಡುವ ಸಾಧನ ವನ್ನು ತುಮಕೂರು ಮಹಾನಗರ ಪಾಲಿಕೆ ಬಳಕೆ ಮಾಡುತ್ತಿರುವುದು ಹೆಗ್ಗಳಿಕೆಗೆ ಗುರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆ ಯಾಗುತ್ತಿಲ್ಲ. ಸಾರ್ವಜನಿಕರಿಗೂ ಸಹ ಹೆಚ್ಚು ಸಹಕಾರಿಯಾಗುತ್ತಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.