ರಾಜ್ಯದ ಏಳು ಕೇಂದ್ರಗಳಲ್ಲಿಂದು ಮರು ಮತದಾನ


Team Udayavani, May 19, 2019, 6:10 AM IST

kerala

ಕುಂಬಳೆ/ಕಾಸರಗೋಡು: ಬೋಗಸ್‌ ಮತದಾನದ ಹಿನ್ನೆಲೆಯಲ್ಲಿ ಕಾಸರಗೋಡು ಮತ್ತು ಕಣ್ಣೂರು ಲೋಕಸಭೆಯ ಏಳು ಬೂತ್‌ಗಳಲ್ಲಿ ಮೇ 19 ರಂದು ಮರು ಮತದಾನ ನಡೆಯಲಿದೆ. ಕಾಸರಗೋಡು ಲೋಕಸಭಾ ಕ್ಷೇತ್ರದ ನಾಲ್ಕು ಮತ್ತು ಕಣ್ಣೂರು ಲೋಕಸಭಾ ಕ್ಷೇತ್ರದ ಮೂರು ಬೂತ್‌ಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ರ ವರೆಗೆ ಮತದಾನ ನಡೆಯುವುದು.

ಕಾಸರಗೋಡು ಲೋಕಸಭಾ ಕ್ಷೇತ್ರಕ್ಕೊಳಪಟ್ಟ ತೃಕ್ಕರಿಪುರ ವಿಧಾನಸಭಾ ಕ್ಷೇತ್ರದ ಚೀಮೇನಿ ಕುಳಮಾಡು ಜಿಎಚ್‌ಎಸ್‌ನ 48 ನೇ ನಂಬ್ರದ ಮತಗಟ್ಟೆ, ಕಲ್ಯಾಶೆÏàರಿ ವಿಧಾನಸಭೆಯ ಪಿಲಾತ್ತರ ಯು.ಪಿ. ಶಾಲೆ 19 ನೇ ನಂಬ್ರದ ಮತಗಟ್ಟೆ, ಪುದಿಯಂಙಾಡಿ ಜಮಾಯತ್‌ ಹೈಯರ್‌ ಸೆಕೆಂಡರಿ ಉತ್ತರ ಭಾಗದ ಬೂತ್‌ ನಂಬ್ರ 69, ಪುದಿಯಂಙಾಡಿ ಜಮಾಯತ್‌ ಹೈಯರ್‌ ಸೆಕೆಂಡರಿ ತೆಂಕು ಭಾಗದ 70 ನೇ ನಂಬ್ರದ ಮತಗಟ್ಟೆಗಳಲ್ಲಿ ಮತದಾನ ನಡೆಯುವುದು.

ಕಣ್ಣೂರು ಲೋಕಸಭಾ ಕ್ಷೇತ್ರದ ತಳಿಪರಂಬ ವಿಧಾನಸಭಾ ಕ್ಷೇತ್ರದ ಪಾಂಬುರುತ್ತಿ ಮಾಪಿಳ್ಳ ಎಯುಪಿ ಶಾಲೆಯ ಬೂತ್‌ ನಂಬ್ರ 166, ಧರ್ಮಡಂ ವಿಧಾನಸಭಾ ಕ್ಷೇತ್ರದ ಕುನ್ನೇರಿಕ ಯು.ಪಿ.ಶಾಲೆ ಎಡಕುಂಭಾಗದ ಬೂತ್‌ ನಂಬ್ರ 52 ಮತ್ತು ಕುನ್ನರಿಕ ಯು.ಪಿ. ಶಾಲೆಯ ತೆಂಕು ಭಾಗದ 53 ನೇ ನಂಬ್ರದ ಮತಗಟ್ಟೆಗಳಲ್ಲಿ ಮರುಮತದಾನ ನಡೆಯಲಿದೆ.

ಬೋಗಸ್‌ ಮತದಾನ ನಡೆದ ನಾಲ್ಕು ಮತಗಟ್ಟೆಗಳಿಗೆ ಮಾತ್ರವೇ ಮರುಮತದಾನ ನಡೆಸಲು ಚುನಾವಣಾ ಆಯೋಗ ಮೇ 16 ರಂದು ತೀರ್ಮಾನಿಸಿತ್ತು. ಆ ಬಳಿಕ ಮೇ 17 ರಂದು ಇನ್ನೂ ಮೂರು ಬೂತ್‌ಗಳಲ್ಲಿ ಮರುಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಏಳು ಮತಗಟ್ಟೆಯಲ್ಲಿ ಮರುಮತದಾನಕ್ಕೆ ಪೂರ್ಣ ಸಜ್ಜುಗೊಳಿಸಲಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭಗೊಂಡು ಸಂಜೆ 6 ರ ವರೆಗೆ ಮತ ಚಲಾಯಿಸಬಹುದು.

ಬಹಿರಂಗ ಪ್ರಚಾರಕ್ಕೆ ಮೇ 17 ರ ಸಂಜೆ ತನಕ ಅವಕಾಶ ನೀಡಲಾಗಿತ್ತು. ಕಾಸರಗೋಡು ಲೋಕಸಭಾ ಕ್ಷೇತ್ರದ ಪಿಲಾತ್ತರದಲ್ಲಿ ಯುಡಿಎಫ್‌ ಅಭ್ಯರ್ಥಿ ರಾಜ್‌ಮೋಹನ್‌ ಉಣ್ಣಿತ್ತಾನ್‌ ನಡೆಸಿದ ಪ್ರಚಾರ ಸಭೆಗೆ ಎಡರಂಗ ಕಾರ್ಯಕರ್ತರು ಆಕ್ರಮಣ ನಡೆಸಿದ್ದಾಗಿ ಆರೋಪಿಸಲಾಗಿತ್ತು.

ರಾಜ್‌ಮೋಹನ್‌ ಉಣ್ಣಿತ್ತಾನ್‌ ಅವರಿಗೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯನ್ನು ಚಿತ್ರೀಕರಿಸುತ್ತಿದ್ದ ಟಿ.ವಿ. ಚಾನೆಲ್‌ ಪ್ರತಿನಿಧಿಗೂ ಹಲ್ಲೆ ಮಾಡಲಾಗಿತ್ತು. ಯುಡಿಎಫ್‌ನ ಪ್ರಚಾರ ವಾಹನವನ್ನು ಹಾನಿಗೊಳಿಸಲಾಗಿತ್ತು.

ಬಿಗು ಬಂದೋಬಸ್ತು
ಮರು ಮತದಾನ ನಡೆಯುವ ಏಳು ಬೂತ್‌ಗಳಲ್ಲಿ ಮತ್ತು ಪರಿಸರ ಪ್ರದೇಶದಲ್ಲಿ ಬಿಗು ಪೊಲೀಸ್‌ ಬಂದೋಬಸ್ತು ಏರ್ಪಡಿಸಲಾಗಿದೆ. ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ. ಮರುಮತದಾನ ನಡೆಯುವ ಕೇಂದ್ರಗಳಲ್ಲಿ ವೆಬ್‌ಕಾಸ್ಟ್‌ ವೀಡಿಯೋ ಕ್ಯಾಮರಾಗಳನ್ನು ಏರ್ಪಡಿಲಾಗಿದೆ.

ವರದಿ ಆಧಾರ
ಮತದಾನ ಕೇಂದ್ರಗಳಲ್ಲಿ ಅಳವಡಿಸಿದ ಲೈವ್‌ವೆಬ್‌ ಕೆಮರಾ ಗಳ ಆಧಾರದಲ್ಲಿ ಚುನಾವಣಾ ಅಧಿಕಾರಿಗಳು ಎಡರಂಗ ಮತ್ತು ಐಕ್ಯರಂಗದ ಮತದಾರದು ನಕಲಿ ಮತದಾನ ಚಲಾಯಿಸಿರುವುದನ್ನು ಕಂಡು ಹಿಡಿದು ಉನ್ನತ ಅಧಿಕಾರಿಗಳಿಗೆ ವರದಿ ಸಲ್ಲಿಸಿದ ಆಧಾರದಲ್ಲಿ ಮರುಮತದಾನಕ್ಕೆ ಆದೇಶ ನೀಡಲಾಗಿದೆ.ಅದರಂತೆ ರಾಜ್ಯ ಮುಖ್ಯ ಚುನಾವಾಣಾಧಿಕಾರಿ ಟಿಕಾರಾಂ ಮೀಣ ಅವರು ತಮ್ಮ ಪಕ್ಷದ ವತಿಯಿಂದ ನಕಲಿ ಮತ ದಾನವಾಗಿಲ್ಲವೆಂಬ ರಾಜಕೀಯ ನಾಯಕರ ಸಮರ್ಥ ನೆಗಳಿಗೆ ಸವಾಲೊಡ್ಡಿರುವರು.

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.