ಬೌದ್ಧ ಧರ್ಮ ಜಗತ್ತಿನ ವೈಜ್ಞಾನಿಕ ಧರ್ಮ


Team Udayavani, May 19, 2019, 3:00 AM IST

bowdhdha

ತಿ.ನರಸೀಪುರ: ಜಾತಿ ಪ್ರಬಲವಾಗಿ ಬೇರುಬಿಟ್ಟಿದ್ದು, ಜಾತಿ ರಹಿತ ಸಮಾಜ ನಿರ್ಮಾಣ ಹಾಗೂ ಜಾತೀಯತೆ ನಿರ್ಮೂಲನೆಗೆ ಬೌದ್ಧ ಧಮ್ಮ ಮದ್ದು ಆಗಿದೆ. ಸಂಪತ½ರಿತ ಅಭಿವೃದ್ಧಿ ಶೀಲ ರಾಷ್ಟ್ರಗಳಲ್ಲಿ ಬೌದ್ಧ ಧಮ್ಮ ವೈಜ್ಞಾನಿಕ ಧರ್ಮ ಎನಿಸಿಕೊಂಡಿದೆ ಎಂದು ಸಂಸದ ಆರ್‌.ಧ್ರುವನಾರಾಯಣ ಹೇಳಿದರು.

ಪಟ್ಟಣದ ತ್ರಿವೇಣಿ ನಗರದ ನಳಂದ ಬುದ್ಧವಿಹಾರದಲ್ಲಿ ಗೌತಮಬುದ್ಧ ಎಜುಕೇಷನಲ್‌ ಆ್ಯಂಡ್‌ ಕಲ್ಚರಲ್‌ ಟ್ರಸ್ಟ್‌ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ 2563ನೇ ಬುದ್ಧ ಪೂರ್ಣಿಮೆ ಮಹೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತದಲ್ಲಿ ಹುಟ್ಟಿದ ಬೌದ್ಧ ಧರ್ಮ ಚೀನಾ, ಜಪಾನ್‌ ಮತ್ತಿತರ ದೇಶಗಳನ್ನು ವ್ಯಾಪಿಸಿ, ಅಲ್ಲಿನ ಜನರು ಶಾಂತಿ, ನೆಮ್ಮದಿಯಿಂದ ಅಭಿವೃದ್ಧಿ ಜೀವನ ನಡೆಸುತ್ತಿದ್ದಾರೆ. ಈ ಮಾರ್ಗದಲ್ಲಿ ನಾವೂ ಮುನ್ನಡೆಯೋಣ ಎಂದರು.

ಮಹಾನ್‌ ಚೇತನರು: ರಾಜನಾಗಿದ್ದ ಗೌತಮ ಬುದ್ಧ ಹಾಗೂ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದ ಅಂಬೇಡ್ಕರ್‌ ಸುಖೀ ಜೀವನ ನಡೆಸಬಹುದಿತ್ತು. ಆದರೆ, ಈ ಮಹಾನ್‌ ಚೇತನರೂ ಸಮಾಜಕ್ಕಾಗಿ ಬದುಕನ್ನು ಮುಡಿಪಾಗಿಟ್ಟರು.

ಅಶೋಕ ಸಾಮ್ರಾಟರು ಬೌದ್ಧ ಧಮ್ಮದ ಅಭಿವೃದ್ಧಿಗೆ ಶ್ರಮಿಸಿದ ನಂತರ ದೇಶದಲ್ಲಿ ಅಂಬೇಡ್ಕರ್‌ ಬುದ್ಧ ಧಮ್ಮವನ್ನು ಅನುಸರಿಸಿದರು. ತದ ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡ ಧಮ್ಮ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ನೀಡಿದವು. ನಾವು ನೀವೆಲ್ಲರೂ ಬುದ್ಧ ಹಾಗೂ ಅಂಬೇಡ್ಕರ್‌ ತೋರಿದ ಮಾರ್ಗದಲ್ಲಿ ನಡೆಯೋಣ ಎಂದು ಸಲಹೆ ನೀಡಿದರು.

ಜಗತ್ತಿಗೆ ಬೆಳಕು: ವರುಣಾ ಶಾಸಕ ಡಾ.ಎಸ್‌.ಯತೀಂದ್ರ ಮಾತನಾಡಿ, ದೇಶದಲ್ಲಿ ಜಾತೀಯತೆ, ಸಾಮಾಜಿಕ ಅಸಮಾನತೆ ವ್ಯಾಪಕವಾಗಿದ್ದ ಸಂದರ್ಭದಲ್ಲಿ ಬೌದ್ಧ ಧರ್ಮ ಜಗತ್ತಿಗೆ ಬೆಳಕಾಗಿ ಪ್ರಜ್ವಲಿಸಿತು.

ನಳಂದ ಬುದ್ಧ ವಿಹಾರದ ಧಮ್ಮ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ 5 ಎಕರೆ ಜಮೀನನ್ನು ಮಂಜೂರು ಮಾಡಲಾಗಿದೆ. ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಹಾರದ ಕಟ್ಟಡಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು. ಸಾಮಾಜಿಕ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ನಳಂದ ಬುದ್ಧ ವಿಹಾರದ ಬೋದಿರತ್ನ ಭಂತೇಜಿ, ಗೌತಮ ಬುದ್ಧನ ಹಿನ್ನೆಲೆ ಮತ್ತು ಧಮ್ಮದ ಬಗ್ಗೆ ಮಾಹಿತಿ ನೀಡಿದರು. ವಿದ್ಯೋದಯ ಬಾಲಿಕ ಪದಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಬಿ.ಸಿ.ಇಂದಿರಮ್ಮ, ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಸ್‌.ಎನ್‌.ಸಿದ್ಧಾರ್ಥ, ಮಾಜಿ ಸದಸ್ಯ ಕೆ.ಮಹದೇವ, ತಾಪಂ ಸದಸ್ಯ ಎಂ.ರಮೇಶ್‌, ಪುರಸಭಾ ಸದಸ್ಯರಾದ ಸಿ.ಪ್ರಕಾಶ್‌, ಎಲ್‌.ಮಂಜುನಾಥ್‌, ಬಿ.ಬೇಬಿ ಹೇಮಂತ್‌ಕುಮಾರ್‌, ಸಮಾಜ ಕಲ್ಯಾಣಾಧಿಕಾರಿ ಸುಧಾಮಣಿ, ಬಿಳಿಗಿರಿ ರಂಗಸ್ವಾಮಿ ಬೆಟ್ಟದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಆಲ್ದೂರು ಸಿ.ರಾಜಶೇಖರ್‌, ಎಪಿಎಂಸಿ ಸದಸ್ಯರಾದ ಕೆ.ಬಿ.ಪ್ರಭಾಕರ,

ಡಣಾಯಕನಪುರ ಸ್ವಾಮಿ, ವರುಣಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಮುದ್ದೇಗೌಡ, ಟ್ರಸ್ಟಿಗಳಾದ ಎನ್‌.ಲಿಂಗಪ್ಪಾಜಿ, ಬಿ.ಆರ್‌.ಪುಟ್ಟಸ್ವಾಮಿ, ಸೀನಪ್ಪ, ವಕೀಲ ಮೂರ್ತಿ, ಮರಿಮಹದೇವಯ್ಯ, ಶಿವಣ್ಣ, ಪುಟ್ಟರಾಜು, ಸಂಕೇತ್‌, ಮಹೇಶ್‌, ಎಚ್‌.ಡಿ.ಮಾದಪ್ಪ, ಡಿಜೆಎಸ್‌ ಜಿಲ್ಲಾಧ್ಯಕ್ಷ ತುಂಬಲ ಮಂಜುನಾಥ್‌, ದಸಂಸ ಸಂಚಾಲಕ ಕುಕ್ಕೂರು ರಾಜು, ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ, ಕ್ಷೇತ್ರ ಉಸ್ತವಾರಿ ಬಿ.ಮಹದೇವಸ್ವಾಮಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA CASE: ಇಂದು ಮತ್ತೆ 4 ಮಂದಿ ವಿಚಾರಣೆ

MUDA CASE: ಇಂದು ಮತ್ತೆ 4 ಮಂದಿ ವಿಚಾರಣೆ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

 MUDA CASE: 8 ಮಂದಿಗೆ ಇ.ಡಿ. ನೋಟಿಸ್‌ ಜಾರಿ

 MUDA CASE: 8 ಮಂದಿಗೆ ಇ.ಡಿ. ನೋಟಿಸ್‌ ಜಾರಿ

6

Arrested: ಗ್ರಾಪಂ ಅಧ್ಯಕ್ಷ ಸ್ಥಾನಕ್ಕಾಗಿ ಉಪಾಧ್ಯಕ್ಷೆ ಪತಿಯ ಹತ್ಯೆ: ನಾಲ್ವರ ಬಂಧನ 

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.