ರಕ್ಷಣಾ ಸಚಿವರಿಗೆ ಮಳೆ ದುರಂತ ವಿವರಿಸಿದ್ದ ಬಾಲಕ ದಾರುಣ ಸಾವು
Team Udayavani, May 19, 2019, 3:00 AM IST
ಮಡಿಕೇರಿ: ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಕುತ್ತಿಗೆಗೆ ವೇಲ್ ಸುತ್ತಿಕೊಂಡ ಪರಿಣಾಮ 8 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಡಿಕೇರಿ ಹೊರವಲಯದ ಗ್ರಾಮದಲ್ಲಿ ನಡೆದಿದೆ. ಪ್ರಕೃತಿ ವಿಕೋಪ ಸಂದರ್ಭ ಮನೆಯನ್ನು ಕಳೆದುಕೊಂಡಿದ್ದ ಬಾಲಕ, ಸಂತ್ರಸ್ತನಾಗಿ ಕುಟುಂಬದೊಂದಿಗೆ ಮಡಿಕೇರಿಯ ಪೊಲೀಸ್ ಸಮುದಾಯ ಭವನದಲ್ಲಿ ಆಶ್ರಯ ಪಡೆದಿದ್ದ.
ಈ ಸಂದರ್ಭ ಮೈತ್ರಿ ಸಮುದಾಯ ಭವನಕ್ಕೆ ಆಗಮಿಸಿದ್ದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ತನ್ನ ಗ್ರಾಮದಲ್ಲಿ ಸಂಭವಿಸಿದ್ದ ಪ್ರಕೃತಿ ವಿಕೋಪದ ನೈಜ್ಯ ಘಟನೆಗಳನ್ನು ಚಿತ್ರ ರೂಪದಲ್ಲಿ ಬಿಡಿಸಿ, ಅದನ್ನು ಸಚಿವರಿಗೆ ವಿವರಿಸುವ ಮೂಲಕ ಪ್ರಕೃತಿ ವಿಕೋಪದ ಕರಾಳತೆಯನ್ನು ಮನವರಿಕೆ ಮಾಡುವಲ್ಲಿ ಸಫಲನಾಗಿದ್ದ.
ಮಡಿಕೇರಿ ಹೊರವಲಯದ ಗ್ರಾಮದಲ್ಲಿದ್ದ 8 ವರ್ಷದ ಬಾಲಕ ಮನೆಯಲ್ಲಿ ಒಬ್ಬೊಂಟಿಯಾಗಿ ಮನೆಯ ಮೇಲ್ಚಾವಣಿಗೆ ವೇಲ್ ಕಟ್ಟಿಕೊಂಡು ಆಟವಾಡುತ್ತಿದ್ದ. ಈ ಸಂದರ್ಭ ವೇಲ್ ಬಾಲಕನ ಕುತ್ತಿಗೆಗೆ ಬಿಗಿದುಕೊಂಡಿದ್ದು, ಅದನ್ನು ಬಿಡಿಸಿಕೊಳ್ಳಲಾಗದೆ ಬಾಲಕ ಸ್ಥಳದಲ್ಲೇ ಒದ್ದಾಡಿದ್ದಾನೆ.
ಮಧ್ಯಾಹ್ನ ವೇಳೆಗೆ ಬಾಲಕನ ತಂದೆ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಮಗನನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ಹೊತ್ತಿಗಾಗಲೇ ಬಾಲಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್ ವೆಲೋಡ್ರೋಮ್
Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ
Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ
Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು
Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.