ಸಾಮರ್ಥ್ಯ ಸೌಧಕ್ಕೆ ತಾಲೂಕು ಪಂಚಾಯತ್‌ ಕಚೇರಿ ಸ್ಥಳಾಂತರ


Team Udayavani, May 19, 2019, 10:44 AM IST

19-May-5

ಸಾಮರ್ಥ್ಯ ಸೌಧಕ್ಕೆ ಸ್ಥಳಾಂತರಗೊಂಡ ತಾ.ಪಂ. ಕಟ್ಟಡ.

ಬೆಳ್ತಂಗಡಿ: ಶಿಥಿಲಾವಸ್ಥೆಗೆ ತಲುಪಿದ್ದ ಬೆಳ್ತಂಗಡಿ ತಾ.ಪಂ. ಕಟ್ಟಡ ನಿರ್ಮಾಣಕ್ಕೆ ಕೊನೆಗೂ 3.50 ಕೋ. ರೂ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ನೀತಿಸಂಹಿತೆ ಬಳಿಕ ಮಾಸಾಂತ್ಯದೊಳಗೆ ಹಳೆ ಕಟ್ಟಡ ಕೆಡವಿ ಅದೇ ಸ್ಥಳದಲ್ಲಿ ನೂತನ ಎರಡು ಅಂತಸ್ತಿನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಲಿದೆ.

ಈಗಾಗಲೇ ಹಾಲಿ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಸ್ಥಳಾವಕಾಶ ಕೊರತೆಯಿಂದ ನೂತನ ಕಟ್ಟಡ ನಿರ್ಮಿಸಬೇಕೆಂಬ ಕೂಗು ಹಲವು ವರ್ಷಗಳಿಂದ ಕೇಳಿ ಬಂದಿತ್ತು. ಜನವರಿಯಲ್ಲೇ ಆರಂಭವಾಗಬೇಕಿದ್ದ ಕಾಮಗಾರಿ ಪ್ರಕ್ರಿಯೆ ತಾಂತ್ರಿಕ ಮಂಜೂ ರಾತಿ ಹಾಗೂ ಚುನಾವಣೆಗೆ ದಿನ ನಿಗದಿ ಯಾಗಿದ್ದರಿಂದ ತಡವಾಗಿತ್ತು. ಇದೀಗ ಎಲ್ಲವು ಸುಸೂತ್ರವಾಗಿ ನಡೆದಿದೆ.

ಈ ನಿಟ್ಟಿನಲ್ಲಿ ಶುಕ್ರವಾರದಿಂದಲೇ ಆಡಳಿತ ಶಾಖೆಯನ್ನು ತಾ.ಪಂ. ಹಿಂಭಾಗದ ಸಾಮರ್ಥ್ಯ ಸೌಧಕ್ಕೆ ಸ್ಥಳಾಂತರ ಗೊಳಿಸಲಾಗುತ್ತಿದೆ. ಈಗಾಗಲೇ ಸ್ಥಳಾಂತರ ಕೆಲಸ ಶೇ. 90 ಪೂರ್ಣ ಗೊಂಡಿದ್ದು, ವಿದ್ಯುತ್‌ ಸಂಪರ್ಕ ನೀಡಲಾಗು ತ್ತಿದೆ. ಸೋಮವಾರ ದೊಳಗೆ ಸ್ಥಳಾಂತರ ಕೆಲಸ ಪೂರ್ಣಗೊಳ್ಳಲಿದೆ. ಆಡಳಿತ ಶಾಖೆ ಜತೆ ಉದ್ಯೋಗ ಖಾತ್ರಿ (ನರೇಗಾ) ಕಚೇರಿಯನ್ನೂ ಸ್ಥಳಾಂತರಿಸ ಲಾಗಿದೆ. ಉಳಿದಂತೆ ಗೃಹರಕ್ಷಕ ದಳದ ಕಚೇರಿ ತಾ.ಪಂ. ಮುಂಭಾಗದ ಅಂಗಡಿ ಕೇಂದ್ರದಲ್ಲಿ ಕಾರ್ಯಾಚರಿಸಲಿದೆ.

ಸೋಲಾರ್‌ ಪ್ಯಾನಲ್ ಅಳವಡಿಕೆ
ಸಾಮರ್ಥ್ಯ ಸೌಧದ ತಾರಸಿಯಲ್ಲಿ ಸೋಲಾರ್‌ ಪ್ಯಾನಲ್ ಅಳವಡಿಸಿದ್ದು, ಅಗತ್ಯಕ್ಕೆ ಬೇಕಾದಷ್ಟು ವಿದ್ಯುತ್‌ ಬಳಕೆ ಮಾಡ ಲಾಗುತ್ತಿದೆ. ಹೆಚ್ಚುವರಿ ವಿದ್ಯುತ್‌ ಇತರ ಸರಕಾರಿ ಕಚೇರಿಗಳಿಗೆ ನೀಡುವ ವ್ಯವಸ್ಥೆ ಮೆಸ್ಕಾಂ ಮಾಡಿದ್ದು, ಪರ್ಯಾಯ ವಿದ್ಯುತ್‌ಗೆ ಆದ್ಯತೆ ನೀಡಲಾಗಿರುವುದು ಗಮನಾರ್ಹ.

ಕೊಠಡಿ ವಿಶೇಷ
ಕೊಠಡಿ ನಿರ್ಮಾಣಕ್ಕೆ ಎಂಜಿನಿಯರಿಂಗ್‌ ವಿಭಾಗದಿಂದ ಈಗಾಗಲೇ ನೀಲ ನಕಾಶೆ ಸಿದ್ಧಗೊಂಡಿದ್ದು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗೆ ಪ್ರತ್ಯೇಕ ಕೊಠಡಿ ಇರಲಿದೆ. ಇನ್ನುಳಿದಂತೆ ವೀಡಿಯೋ ಕಾನ್ಫರೆನ್ಸ್‌, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸ್ಥಾಯೀ ಸಮಿತಿ ಅಧ್ಯಕ್ಷರಿಗೆ ಪ್ರತ್ಯೇಕ ಕೊಠಡಿಗಳು ನಿರ್ಮಾಣವಾಗಲಿವೆ ಎಂದು ಸಹಾಯಕ ಲೆಕ್ಕಾಧಿಕಾರಿ ಗಣೇಶ್‌ ಪೂಜಾರಿ ತಿಳಿಸಿದ್ದಾರೆ.

ರೂ. 3.50 ಕೋಟಿಯ ಜಿ ಪ್ಲಸ್‌ 2 ಕಟ್ಟಡ
ಒಟ್ಟು 3.50 ಕೋಟಿ ರೂ.ನಲ್ಲಿ ಪೀಠೊಪಕರಣ, ವಿದ್ಯುತ್‌ ಸಂಪರ್ಕ ಅಳವಡಿಕೆ ಸಹಿತ ಕಟ್ಟಡ ಸಂಪೂರ್ಣ ಕಾಮಗಾರಿ ಒಳಗೊಳ್ಳಲಿದೆ. ಶರೀಫ್‌ ಕನ್‌ಸ್ಟ್ರಕ್ಟರ್ ಕಟ್ಟಡ ನಿರ್ಮಾಣ ಜವಾಬ್ದಾರಿ ಪಡೆದಿದ್ದು, ಸುಮಾರು 19 ಸಾವಿರ ಚದರಡಿ ವಿಸ್ತೀರ್ಣದ ಎರಡು ಅಂತಸ್ತಿನ ಸುಂದರ ಕಟ್ಟಡವಿರಲಿದೆ. ನೆಲ ಅಂತಸ್ತು, ಮೊದಲ ಮಹಡಿ, ಎರಡನೇ ಅಂತಸ್ತು ತಲಾ 6,500 ಚದರಡಿ ಹೊಂದಿರಲಿದೆ.

ಅನುದಾನ
ನೂತನ ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ಕಟ್ಟಡ ಕಾಮಗಾರಿಗೆ ಸಿದ್ಧತೆ ಕೈಗೊಳ್ಳಲಾಗಿದ್ದು, ಅಗತ್ಯ ಕೆಲಸಕ್ಕಾಗಿ ಸಾಮರ್ಥ್ಯ ಸೌಧದಲ್ಲಿರುವ ಕಚೇರಿಗೆ ಭೇಟಿ ನೀಡಿ ಸಹಕರಿಸಬೇಕಿದೆ.
ಕೆ.ಇ. ಜಯರಾಂ
ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ

2 ವರ್ಷಗಳೊಳಗೆ ನೂತನ ಕಟ್ಟಡ
ಎರಡು ವರ್ಷಗಳೊಳಗೆ ನೂತನ ಕಟ್ಟಡ ನಿರ್ಮಾಣ ಗುರಿ ಹೊಂದಲಾಗಿದೆ. 2018-19ರಲ್ಲಿ 1 ಕೋಟಿ ರೂ. ಬಿಡುಗಡೆಗೊಂಡಿದ್ದು, 2019-20ರಲ್ಲಿ 2.50 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ. ಕಚೇರಿ ಸ್ಥಳಾಂತರಗೊಂಡ ತತ್‌ಕ್ಷಣವೇ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. – ಚೆನ್ನಪ್ಪ ಮೊಲಿ ಎಇಇ,
ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗ, ಬೆಳ್ತಂಗಡಿ

ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.