ಉಡುಪಿ ಸ್ನೇಹ ಟ್ಯುಟೋರಿಯಲ್‌ ಕಾಲೇಜು: ದಾಖಲಾತಿ ಆರಂಭ


Team Udayavani, May 20, 2019, 6:00 AM IST

09241905UDSG1

ಉಡುಪಿ: ಜಿಲ್ಲೆಯಲ್ಲಿರುವ ಸರಕಾರಿ, ಅನುದಾನಿತ, ಅನುದಾನರಹಿತ ಕಾಲೇಜುಗಳು ಕಲಿಕೆಯಲ್ಲಿ ಮುಂದುವರಿದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತವೆ. ಆದರೆ ಇದಕ್ಕೆ ಸಮಾನಾಂತರವಾಗಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅವಕಾಶ ಮಾಡಿಕೊಟ್ಟಿರುವ ವಿದ್ಯಾ ಸಂಸ್ಥೆಯೇ ಕಲ್ಸಂಕದಲ್ಲಿರುವ “ಸ್ನೇಹ ಟ್ಯುಟೋರಿಯಲ್‌ ಕಾಲೇಜು’.

ವಿದ್ಯಾರ್ಥಿಗಳು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯುವಾಗ ತಪ್ಪಾದ ಸಂಯೋಜನೆ ಆಯ್ದುಕೊಂಡು ಎಡವುದು ಇದೆ. ಇಂತಹ ಸಂದರ್ಭ ಸಂಯೋಜನೆ ಬದಲಾಯಿಸಬೇಕಾದರೆ ಪುನಃ ಪ್ರಥಮ ಪಿಯುಸಿಗೆ ಪ್ರವೇಶಾತಿ ಪಡೆಯಬೇಕು. ಅದಕ್ಕಾಗಿ ರಾಜ್ಯ ಪ.ಪೂ.ಶಿಕ್ಷಣ ಇಲಾಖೆ ಸಂಯೋಜನೆ ಬದಲಾವಣೆಯೊಂದಿಗೆ ನೇರವಾಗಿ ದ್ವಿ.ಪಿಯು ಪರೀಕ್ಷೆ ಬರೆಯಲು ಅವಕಾಶ ನೀಡಿದೆ.

ಆದರೆ ಕೆಲವರು ಸಂಯೋಜನೆ ಬದಲಾಯಿಸಲು ಅಪೇಕ್ಷೆ ಪಡುವು ದಿಲ್ಲವಾದ್ದರಿಂದ ಅಂಥವರಿಗೆ ಪ್ರಥಮ ಪಿಯುಸಿಯಲ್ಲಿ ಕಲಿತ ಸಂಯೋಜನೆಯಲ್ಲಿಯೇ ಶಿಕ್ಷಣ ಮುಂದುವರಿಸುವ ಅವಕಾಶವಿದೆ. ಈ ವ್ಯವಸ್ಥೆ ಬಳಸಿಕೊಂಡಿರುವ ಸಂಸ್ಥೆ ವಿದ್ಯಾರ್ಜನೆಯಲ್ಲಿ ಎಡವಿದ ವಿದ್ಯಾರ್ಥಿಗಳಿಗೆ ಕಲಿಕೆಯ ಹೊಸ ದಾರಿ ತೋರಿಸಿದೆ. ಕಾಲೇಜಿನ ಶೈಕ್ಷಣಿಕ ವ್ಯವಸ್ಥೆ ಪ್ರತಿಷ್ಠಿತ ಶಾಲೆ/ಕಾಲೇಜಿನ ಮಾದರಿಯಲ್ಲಿಯೇ ನಡೆಯುತ್ತಿದ್ದು, ಪ್ರತೀ ತರಗತಿಯಲ್ಲಿ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ಬೆಳಗ್ಗೆ ಏಕಕಾಲದಲ್ಲಿ 4 ತರಗತಿಗಳು, ಪಿಯುಸಿಗೆ 2 ತರಗತಿಗಳು, ಕಲಿಕೆಯಲ್ಲಿ ಹಿಂದುಳಿದ/8, 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮೊಟಕುಗೊಳಿಸಿದ ವಿದ್ಯಾರ್ಥಿಗಳಿಗೆ ನೇರವಾಗಿ 10ನೇ ತರಗತಿ ವಿದ್ಯಾರ್ಜನೆಗೆ ಕನ್ನಡ/ಇಂಗ್ಲಿಷ್‌ ಮಾಧ್ಯಮದ 2 ತರಗತಿಗಳು ನಡೆಯುತ್ತವೆ.

ಮಧ್ಯಾಹ್ನದ ಅನಂತರ 2 ಪಿಯುಸಿ ತರಗತಿಗಳು, 10ನೇ ತರಗತಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ. 3 ಸಾವಿರ ಚ.ಅಡಿ ಸ್ಥಳಾವಕಾಶವಿರುವ ಇಲ್ಲಿ 13 ಉಪನ್ಯಾಸಕರಿದ್ದಾರೆ. ದ್ವಿ.ಪಿಯು ವಿಜ್ಞಾನ ವಿಭಾಗದಲ್ಲಿ ಕಲಿಯ ಬಯಸುವವರಿಗೆ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಓಪನ್‌ ಸ್ಕೂಲಿಂಗ್‌ ಮೂಲಕ ಪರೀಕ್ಷೆ ಬರೆಸಲಾಗುತ್ತದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ವಿಶೇಷ ಸಾಧನೆ
ಕೂಲಿ ಕಾರ್ಮಿಕ ಹಿರಿಯಡಕದ ಶೇಖರ ನಾಯ್ಕ, ರೇವತಿ ದಂಪತಿ ಪುತ್ರಿ ಶ್ರನ್ಯ ದ್ವಿ.ಪಿಯುಸಿಯಲ್ಲಿ 520 (ಶೇ. 86) ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಗೊಂಡು ಕಾಲೇಜಿಗೆ ಕೀರ್ತಿ ತಂದಿದ್ದಾಳೆ. ವೈದ್ಯೆ/ಎಂಜಿನಿಯರ್‌ ಆಗಬೇಕೆಂಬ ಮಹದಾಸೆ ಹೊತ್ತು ಎಂಜಿಎಂ ಕಾಲೇಜಿನಲ್ಲಿ ಪ್ರಥಮ ಪಿಯುಗೆ ಸೇರಿದ ಈಕೆ ವಿಜ್ಞಾನ (ಪಿಸಿಎಂಎಸ್‌) ವಿಭಾಗ ಪಡೆದು ಫೇಲಾಗಿದ್ದಾಳೆ. ಮುಂದೇನು? ಮಾಡಲೆಂದು ಪರಿತಪಿಸಿದ ಈಕೆ ಸ್ನೇಹ ಟ್ಯುಟೋರಿಯಲ್‌ ಕಾಲೇಜಿಗೆ ಸೇರಿ ತರಬೇತಿ ಪಡೆದು ವಿಶೇಷ ಸಾಧನೆಗೈದಿದ್ದಾಳೆ. ಈಕೆಯ ಪಾಲಿಗೆ ಈ ಕಾಲೇಜು ಬೆಳಕಾಗಿದ್ದು, ಪದವಿ ವಿದ್ಯಾಭ್ಯಾಸಕ್ಕಾಗಿ ಪಿಪಿಸಿ ಸೇರಲಿದ್ದಾಳೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.