ಎಂಆರ್‌ಪಿಎಲ್‌ ತೈಲ ಸಂಸ್ಕರಣೆಗೆ ಕಾವೂರು ಒಳಚರಂಡಿ ನೀರು

44.4 ಎಂಎಲ್‌ಡಿ ಸಾಮರ್ಥ್ಯದ ಕಾವೂರು ಎಸ್‌ಟಿಪಿ

Team Udayavani, May 20, 2019, 6:00 AM IST

b-8

ಕಾವೂರು ಒಳಚರಂಡಿ ಸಂಸ್ಕರಣಾ ಘಟಕ

ಮಹಾನಗರ: ನೀರಿನ ಕೊರತೆ ಇದೀಗ ಕರಾವಳಿಯ ಪ್ರತಿಷ್ಠಿತ ಉದ್ಯಮ ಎಂಆರ್‌ಪಿಎಲ್‌ಗ‌ೂ (ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌) ಬಹುವಾಗಿ ಕಾಡುತ್ತಿದೆ. ಇಲ್ಲಿನ ಮೂರು ಘಟಕಗಳಲ್ಲಿ ಸದ್ಯ ಎರಡನೇ ಘಟಕವು, 44.4 ಎಂಎಲ್‌ಡಿ ಸಾಮರ್ಥ್ಯದ ಕಾವೂರು ಒಳಚರಂಡಿ ಸಂಸ್ಕರಣಾ ಘಟಕದ (ಎಸ್‌ಟಿಪಿ) ಕೊಳಚೆ ನೀರಿನ ಮೂಲಕ ಕಾರ್ಯನಿರ್ವಹಿಸುತ್ತಿದೆ!

ಎಂಆರ್‌ಪಿಎಲ್‌ನಲ್ಲಿ ಮೂರು ಘಟಕಗಳಲ್ಲಿ ತೈಲ ಸಂಸ್ಕರಣೆ ನಡೆಸಲಾಗುತ್ತದೆ. ಇದರಲ್ಲಿ, ವಾರ್ಷಿಕ ನಿರ್ವಹಣೆ ನಿಟ್ಟಿನಲ್ಲಿ ಎಂಆರ್‌ಪಿಎಲ್‌ನ ಮೂರನೇ ಘಟಕದ ಕಾರ್ಯನಿರ್ವಹಣೆಯನ್ನು ಎಪ್ರಿಲ್‌ ಅಂತ್ಯದಲ್ಲಿ ಸ್ಥಗಿತಗೊಳಿಸಲಾಗಿತ್ತು. ನೀರಿಲ್ಲದ ಹಿನ್ನೆಲೆಯಲ್ಲಿ ಇಲ್ಲಿನ ಮೊದಲ ಘಟಕ ಮೇ 9ರಂದು ಸ್ಥಗಿತಗೊಂಡಿತ್ತು.

ಕುದ್ರೋಳಿಯಿಂದ ಕಾವೂರು ಎಸ್‌ಟಿಪಿಗೆ
ಕಾವೂರು ಸಂಸ್ಕರಣಾ ಘಟಕಕ್ಕೆ ಕೊಳಚೆ ನೀರು ಕುದ್ರೋಳಿ ವೆಟ್‌ವೆಲ್‌ನಿಂದ ಬರುತ್ತಿದೆ. ಕುದ್ರೋಳಿ ವೆಟ್‌ವೆಲ್‌ನಿಂದ ಕಾವೂರು ಮುಲ್ಲಕಾಡ್‌ವರೆಗೆ ಪ್ರಸ್ತುತ 750 ಎಂಎಂ ಸಿಐ ಪೈಪ್‌ಗ್ಳ ಮೂಲಕ (ಹಳೆಯ ಕಾಲದ ಪೈಪ್‌ಗ್ಳು) ಒಳಚರಂಡಿ ನೀರು ಸಾಗಿಸಲಾಗುತ್ತಿದೆ. ಕುದ್ರೋಳಿ ವೆಟ್‌ವೆಲ್‌ನಿಂದ ಜಾಮಿಯಾ ಮಸೀದಿ, ಉರ್ವಸ್ಟೋರ್‌, ದಡ್ಡಲ್‌ಕಾಡ್‌ ಮಾರ್ಗವಾಗಿ, ಕುಂಟಿಕಾನ ಫ್ಲೈಓವರ್‌ ಆಗಿ, ಎಸ್‌ಟಿಪಿ ಮುಲ್ಲಕಾಡ್‌ ಸಂಪರ್ಕಿಸುತ್ತಿದೆ. ಎಸ್‌ಟಿಪಿಗೆ ಬಂದ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಎಸ್‌ಇಝಡ್‌-ಎಂಆರ್‌ಪಿಎಲ್‌ ಪಡೆದುಕೊಳ್ಳುತ್ತಿದೆ.

ಹೊಸ ಪೈಪ್‌ಲೈನ್‌ ಕಾಮಗಾರಿ
ಕಾವೂರು ಎಸ್‌ಟಿಪಿಗೆ ಸಂಪರ್ಕ ಕಲ್ಪಿಸುವ ತ್ಯಾಜ್ಯ ನೀರಿನ ಪೈಪ್‌ಲೈನ್‌ ಹಳೆಯದ್ದಾಗಿರುವುದರಿಂದ ಇದೀಗ ಪಾಲಿಕೆ ವತಿಯಿಂದ ಹೊಸದಾಗಿ ಕುದ್ರೋಳಿ ವೆಟ್‌ವೆಲ್‌ನಿಂದ ಕಾವೂರು ಮುಲ್ಲಕಾಡುವರೆಗೆ 7.65 ಕಿ.ಮೀ ಉದ್ದದಲ್ಲಿ 1100ಎಂಎಂ ಡಿಐ ಪೈಪ್‌ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ನೇತ್ರಾವತಿ-ಕಾವೂರು ಎಸ್‌ಟಿಪಿಯೇ ಆಧಾರ! ಎಂಆರ್‌ಪಿಎಲ್‌ ರಿಫೈನರಿಯನ್ನು ಚಲಾಯಿಸುವುದಕ್ಕೆ ಪ್ರತಿದಿನ 6 ಎಂಜಿಡಿ ಯಷ್ಟು ನೀರು ಬೇಕಾಗುತ್ತದೆ.

ಇದರಲ್ಲಿರುವ ಕ್ಯಾಪ್ಟಿವ್‌ ಪವರ್‌ ಪ್ಲಾಂಟ್‌ ಮೂಲಕ ವಿದ್ಯುತ್‌ ಉತ್ಪಾದಿಸಲು ನೀರು ಬೇಕು. ಅತ್ಯಧಿಕ 300, 400 ಡಿಗ್ರಿ ಸೆಲ್ಸಿ ಯಸ್‌ ಉಷ್ಣತೆಯಲ್ಲಿ ಕಚ್ಚಾ ತೈಲ ವನ್ನು ಸಂಸ್ಕರಿಸಲಾಗುತ್ತಿದ್ದು, ಅದನ್ನು ತಣಿ ಸುವುದಕ್ಕೆ ಮತ್ತೆ ಭಾರೀ ಪ್ರಮಾ ಣದ ನೀರಿನ ಅಗತ್ಯವಿದೆ. ಇದಕ್ಕಾಗಿ ನೇತ್ರಾವತಿ ನದಿ, ಕಾವೂರು ಒಳಚರಂಡಿ ಸಂಸ್ಕರಣಾ ಘಟಕದಿಂದ ನೀರು ಪಡೆಯಲಾಗುತ್ತಿತ್ತು. ನೇತ್ರಾವತಿಯ ನೀರು ಸದ್ಯ ಸ್ಥಗಿತವಾದ ಕಾರಣ ಎರಡನೇ ಮೂಲವನ್ನು ಆಶ್ರಯಿಸಲಾಗಿದೆ.

ತಣ್ಣೀ ರು ಬಾವಿಯಲ್ಲಿ ರಾಜ್ಯದ ಮೊದಲ ಸಮುದ್ರ ನೀರು ಸಂಸ್ಕ ರಣಾ ಘಟಕ (ಡಿಸಲೈನೇಶನ್‌ ಪ್ಲಾಂಟ್‌) ನಿರ್ಮಾಣ ಕಾಮಗಾರಿ ಈಗಾ  ಗಲೇ ಆರಂಭಿಸಲಾಗಿದೆ. ಸಮು   ದ್ರದ ಉಪ್ಪು ನೀರನ್ನು ಸಂಸ್ಕರಿ ಸುವ ಈ ಯೋಜನೆ ಯಿಂದ ಪ್ರತಿ ದಿನ 5 ಮಿ.ಗ್ಯಾಲನ್‌ ನೀರು ಉತ್ಪಾದಿ ಸಬಹುದು.

4 ತ್ಯಾಜ್ಯ ಸಂಸ್ಕರಣಾ ಘಟಕ
ಕುದ್ರೋಳಿ, ಪಾಂಡೇಶ್ವರ, ಪಡೀಲ್‌, ಎಕ್ಕೂರು, ಕೊಟ್ಟಾರಚೌಕಿ ಸಹಿತ ನಗರದ ಒಟ್ಟು 22 ಕಡೆಗಳಲ್ಲಿ ಪಾಲಿಕೆಯು ವೆಟ್‌ವೆಲ್‌ ನಿರ್ಮಿಸಲಾಗಿದೆ. ಅಂದರೆ, ಶೌಚಾಲಯ, ಪಾತ್ರೆ ತೊಳೆಯುವ ನೀರು ಒಳಚರಂಡಿಯ ಮೂಲಕ ಮ್ಯಾನ್‌ಹೋಲ್‌ (ಒಟ್ಟು 24,365) ದಾಟಿ, ವೆಟ್‌ವೆಲ್‌ಗೆ ಹರಿಯುತ್ತದೆ. ಅಲ್ಲಿಂದ ನಗರದ ನಾಲ್ಕು ಕಡೆಗಳಲ್ಲಿ ಪಾಲಿಕೆ ವತಿಯಿಂದ ನಿರ್ಮಿಸಿರುವ ಎಸ್‌ಟಿಪಿಗೆ (ಸಂಸ್ಕರಣಾ ಘಟಕ) ಬರುತ್ತದೆ. 16 ಎಂಎಲ್‌ಡಿ ಸಾಮರ್ಥ್ಯದ ಸುರತ್ಕಲ್‌ ಎಸ್‌ಟಿಪಿ, 20 ಎಂಎಲ್‌ಡಿಯ ಜಪ್ಪಿನಮೊಗರು ಎಸ್‌ಟಿಪಿ, 44.4 ಎಂಎಲ್‌ಡಿಯ ಕಾವೂರು ಎಸ್‌ಟಿಪಿ, 8.7 ಎಂಎಲ್‌ಡಿ ಸಾಮರ್ಥ್ಯದ ಪಚ್ಚನಾಡಿ ಎಸ್‌ಟಿಪಿಯಲ್ಲಿ ತ್ಯಾಜ್ಯ ನೀರು ಸಂಸ್ಕರಣೆಯಾಗುತ್ತದೆ. ಇದರಲ್ಲಿ ಕಾವೂರು ಎಸ್‌ಟಿಪಿಯ ನೀರು ಮಾತ್ರ ಸದ್ಯ ಎಂಆರ್‌ಪಿಎಲ್‌ ಪಡೆದುಕೊಳ್ಳುತ್ತಿದೆ.

ಒಳಚರಂಡಿ ನೀರೇ ಆಧಾರ
ನೀರಿನ ಕೊರತೆ ಎದುರಾದ ಹಿನ್ನೆಲೆಯಲ್ಲಿ ಎಂಆರ್‌ಪಿಎಲ್‌ನ ಎರಡನೇ ಘಟಕ ಮಾತ್ರ ಸದ್ಯ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಕಾವೂರಿನ ಒಳಚರಂಡಿ ಸಂಸ್ಕರಿತ ನೀರನ್ನು ಬಳಸಲಾಗುತ್ತಿದೆ. ಸದ್ಯಕ್ಕೆ ಈ ನೀರು ಆಧಾರವಾಗಿದೆ.
– ಎಂ. ವೆಂಕಟೇಶ್‌, ವ್ಯವಸ್ಥಾಪಕ ನಿರ್ದೇಶಕರು, ಎಂಆರ್‌ಪಿಎಲ್‌

-  ದಿನೇಶ್‌ ಇರಾ

ಟಾಪ್ ನ್ಯೂಸ್

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.