‘ಜೀವನ-ದೇವರ ಸಂಬಂಧ ಭಕ್ತಿಭಾವದಲ್ಲಿ ಅಡಗಿದೆ’


Team Udayavani, May 20, 2019, 6:00 AM IST

19-KBL-2

ಕುಂಬಳೆ: ಜೀವನ ಮತ್ತು ದೇವರ ಸಂಬಂಧ ಭಕ್ತಿಭಾವದಲ್ಲಿ ಅಡಗಿದೆ, ಭಾವ ಶುದ್ಧಿಯ ಮೂಲಕ ಆತ್ಮ ಸಾಕ್ಷಾತ್ಕಾರ ಸಾಧ್ಯವಿದ್ದು, ಭಜನೆಯ ಮೂಲಕವೇ ಭಾವ ಶುದ್ಧಿಯ ಕಾರ್ಯ ನಡೆಯಬೇಕಿದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.

ಸಜಂಕಿಲ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಉದ್ಘಾಟನಾ ಕಾರ್ಯಕ್ರಮ ಮತ್ತು ವಾರ್ಷಿಕೋತ್ಸವದ ಅಂಗವಾಗಿ ಜರಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ತೆಂಗಿನ ಹಿಂಗಾರವನ್ನು ಅರಳಿಸಿ ಧಾರ್ಮಿಕ ಸಭೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಸಮಾಜದ ಪರಿವರ್ತನೆಗೆ ಕಾರಣೀಭೂತರಾಗುವವರು ಒಂದು ಯುವ ಸಮುದಾಯ ಮತ್ತು ಮಹಿಳಾ ಸಮುದಾಯ, ಮಹಿಳೆಯರು ಮನೆ-ಮನವನ್ನು ಬೆಳಗಿದರೆ, ಯುವ ಸಮುದಾಯವು ತನ್ನ ಅಂತಶಕ್ತಿಯ ಮೂಲಕ ಸಮಾಜವನ್ನು ಬೆಳಗುವಲ್ಲಿ ಪ್ರೇರಕ ಶಕ್ತಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ನವೀಕರಣ ಸಮಿತಿ ಅಧ್ಯಕ್ಷ ರಮೇಶ ಎಂ. ಬಾಯಾರು ವಹಿಸಿ ಮಾತನಾಡಿ ಭಜನಾ ಮಂದಿರಗಳು ಭಕ್ತಿಯ ಪ್ರತೀಕವಾಗಿದ್ದು, ಭಕ್ತಿ ಮಾರ್ಗವು ಸಮಾಜವನ್ನು ಧರ್ಮ ಮಾರ್ಗದಲ್ಲಿ ಮುನ್ನಡೆಯುವಂತೆ ಮಾಡುವಲ್ಲಿ ಸಫಲವಾಗಿದೆ ಎಂದರು.

ಪ್ರಮುಖರಾದ ಗಣೇಶ್‌ ಎನ್‌. ಭಟ್, ಆಟಿಕುಕ್ಕೆ ಸುಬ್ರಹ್ಮಣ್ಯ ಭಟ್, ಗಣಪತಿ ಭಟ್ ಆವಳಮಠ,ಯಂ.ವಿಶ್ವನಾಥ ಭಟ್ ಮೇಲಿನ ಪಂಜ ಶುಭಾಶಂಸನೆಗೈದರು. ಸಮಾರಂಭದಲ್ಲಿ ಮಂದಿರ ನಿರ್ಮಾಣ ಕಾರ್ಯದಲ್ಲಿ ಸಹಕರಿಸಿದ ಕುಶಲಕರ್ಮಿಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಹಲವು ವರ್ಷಗಳಿಂದ ಭಜನಾ ಮಂಡಳಿಯ ಅಧ್ಯಕ್ಷರಾಗಿರುವ ಕೆ.ವಾಸುದೇವ ಭಟ್ರವರನ್ನು ಸನ್ಮಾನಿಸಲಾಯಿತು.

ಎಸೆಸೆಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಎ ಪ್ಲಸ್‌ ಸಾಧನೆಗೈದ ಜಯಶ್ರೀ ಡಿ. ಅವರನ್ನು ಸ್ವಾಮೀಜಿಯವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಹರಸಿದರು. ಸದಾನಂದ.ಎಂ ಸ್ವಾಗತಿಸಿದರು.ಶ್ರೀಕಾಂತ್‌ ಮಾಸ್ತರ್‌ ವಾಟೆತ್ತಿಲ ವಂದಿಸಿದರು. ಶ್ರೀರಾಮ ಮಾಸ್ತರ್‌ ಆವಳ ಕೆದುಕೋಡಿ ನಿರೂಪಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.