![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-415x252.jpg)
ದೀದಿ ಕೋಟೆಯಲ್ಲಿ ಮೋದಿ ಅಲೆ?
Team Udayavani, May 20, 2019, 7:06 AM IST
![Modi](https://www.udayavani.com/wp-content/uploads/2019/05/Modi-7-620x349.jpg)
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಹಿಂಸಾಚಾರ, ಘರ್ಷಣೆ, ವಾಕ್ಸಮರಗಳನ್ನು ಕಂಡ ಪಶ್ಚಿಮ ಬಂಗಾಳದಲ್ಲಿ ದೀದಿಯ ಭದ್ರಕೋಟೆಯನ್ನು ಒಡೆಯುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಯಶಸ್ವಿಯಾಗಲಿದೆಯೇ ಎಂಬ ಪ್ರಶ್ನೆ ಕುತೂಹಲಕ್ಕೆ ಕಾರಣವಾಗಿದೆ.
ಬಂಗಾಳದಲ್ಲಿ ದೀದಿ ಪ್ರಭಾವ ಮುಂದುವರಿಯಲಿದೆ ಎಂದು ಕೆಲವು ಸಮೀಕ್ಷೆಗಳು ಹೇಳಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ಇಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆ ಎಂದು ಅಂದಾಜಿಸಿವೆ. ಬಂಗಾಳದಲ್ಲಿ ಟಿಎಂಸಿ ತನ್ನ ಪ್ರಾಬಲ್ಯವನ್ನು ಮುಂದುವರಿಸಲಿದೆ ಮಾತ್ರವಲ್ಲ ಈಗಿರುವುದಕ್ಕಿಂತಲೂ ಹೆಚ್ಚಿನ ಸ್ಥಾನ ಗಿಟ್ಟಿಸಿಕೊಳ್ಳಲಿದೆ ಎಂದು ನ್ಯೂಸ್ 18ನ ಐಪಿಎಸ್ಒಎಸ್ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ನುಡಿದಿದೆ. ಅದರ ಪ್ರಕಾರ, ಈಗ ಟಿಎಂಸಿ 34 ಸ್ಥಾನಗಳನ್ನು ಹೊಂದಿದ್ದು, ಈ ಸಂಖ್ಯೆ 36ರಿಂದ 38ಕ್ಕೇರಲಿದೆ ಎನ್ನಲಾಗಿದೆ. ಆದರೆ, ಇದಕ್ಕೆ ತದ್ವಿರುದ್ಧ ಎಂಬಂತೆ ಇಂಡಿಯಾ ಟುಡೇ- ಮೈ ಇಂಡಿಯಾ ಎಕ್ಸಿಟ್ ಪೋಲ್, ಬಿಜೆಪಿ ಉತ್ತಮ ಸಾಧನೆ ಮಾಡುವುದಾಗಿ ತಿಳಿಸಿದೆ. ಬಂಗಾಳದಲ್ಲಿ ಟಿಎಂಸಿ-ಬಿಜೆಪಿ ನಡುವೆ ಹೆಗಲೆಣೆಯ ಪೈಪೋಟಿ ನಡೆದಿದ್ದು, ಬಿಜೆಪಿ 19ರಿಂದ 22 ಸ್ಥಾನಗಳನ್ನು ಗೆದ್ದರೆ, ಟಿಎಂಸಿ 19ರಿಂದ 23 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದೆ.
ಟೈಮ್ಸ್ ನೌ-ವಿಎಂಆರ್ ಸಮೀ ಕ್ಷೆಯು ಬಿಜೆಪಿ ಈ ಬಾರಿ 11 ಸೀಟು ಗಳಲ್ಲಿ ಗೆಲ್ಲಲಿದ್ದು, ಟಿಎಂಸಿ 28ರಲ್ಲಿ ಜಯ ಸಾಧಿಸಲಿದೆ ಎಂದಿದೆ. ಕಾಂಗ್ರೆಸ್ ಕೇವಲ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳ ಲಿದೆ ಎಂದೂ ಹೇಳಿದೆ. ಎಬಿಪಿ ಸಮೀಕ್ಷೆ ಪ್ರಕಾರ ಬಂಗಾಳದಲ್ಲಿ ಬಿಜೆಪಿ 16, ಟಿಎಂಸಿ 24 ಮತ್ತು ಕಾಂಗ್ರೆಸ್ 2ರಲ್ಲಿ ಗೆಲ್ಲಲಿದೆ. ಅಚ್ಚರಿ ಯೆಂದರೆ, ಎಲ್ಲ ಸಮೀಕ್ಷೆಗಳು ಕೂಡ ಎಡಪಕ್ಷಗಳು ಶೂನ್ಯ ಸಾಧನೆ ಮಾಡಲಿವೆ ಎಂದು ಹೇಳಿವೆ.
ಮತಗಟ್ಟೆ ಸಮೀಕ್ಷೆಗಳ ಈ ಫಲಿತಾಂಶವು ಮಮತಾ ಬ್ಯಾನರ್ಜಿ ಅವರನ್ನು ಕೆರಳಿಸಿದೆ. ಸಮೀಕ್ಷೆಗಳ ಭವಿಷ್ಯವನ್ನು ಅಲ್ಲಗಳೆದಿರುವ ಅವರು, ಇದನ್ನು ಯಾರೂ ನಂಬಬೇಡಿ. ಈ ರೀತಿಯ ಗಾಸಿಪ್ ಮೂಲಕ ಸಾವಿರಾರು ಇವಿಎಂಗಳನ್ನು ಬದಲಿಸಲು ಗೇಮ್ ಪ್ಲಾನ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-150x90.jpg)
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.