![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 22, 2019, 11:00 AM IST
ಅಂಕೋಲಾ: ತಾಲೂಕಿನ ಜನತೆಗೆ ನೀರುಣಿಸುವ ಗಂಗಾವಳಿ ನದಿ ನೀರು ಸಂಪೂರ್ಣ ಬತ್ತಿದ್ದು ಪುರಸಭಾ ವ್ಯಾಪ್ತಿಯ ಜನತೆಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ನೀರಿಲ್ಲದೆ ಹಿಂದೆಂದು ಕಂಡರಿಯದ ಭೀಕರ ಬರ ಎದುರಿಸುತ್ತಿರುವ ತಾಲೂಕಿನಲ್ಲೀಗ ನೀರು ಸ್ಥಗಿತ ಮಾಡಿರುವುದರಿಂದ ಜನತೆ ಕಂಗಾಲಾಗಿದ್ದಾರೆ.
ಈಗಾಗಲೇ ನಲ್ಲಿ ನೀರಿನ ಸರಬರಾಜು ಸ್ಥಗಿತ ಮಾಡಿರುವುದನ್ನು ಪುರಸಭೆಯ 23 ವಾರ್ಡ್ಗಳಲ್ಲಿ ಧ್ವನಿ ವರ್ಧಕದ ಮೂಲಕ ಹೇಳಲಾಗುತ್ತಿದೆ. ಈ ವಾರ್ಡ್ಗಳಿಗೆ ಇಂದಿನಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್ನಿಂದ ಸರಬರಾಜು ಮಾಡುವ ನೀರು ಜನರಿಗೆ ಅಗತ್ಯಕ್ಕೆ ತಕ್ಕಷ್ಟು ಪೂರೈಸಲು ಸಾಧ್ಯವಾಗುತ್ತಿಲ್ಲ. ಗಂಗಾವಳಿ ನದಿಯಿಂದ ಪ್ರತಿನಿತ್ಯ ಪುರಸಭೆ ವ್ಯಾಪ್ತಿಯ 23 ವಾರ್ಡ್ಗಳಿಗೆ 20 ಲಕ್ಷಕ್ಕೂ ಅಧಿಕ ನೀರು ಬೇಕಿತ್ತು. ಆದರೆ ಗಂಗಾವಳಿ ನದಿಯಲ್ಲಿ ನೀರು ಬತ್ತಿರುವುದರಿಂದ ಮುಂದಿನ ದಿನದಲ್ಲಿ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ.
ಇನ್ನೂ 20 ದಿನಗಳ ನಂತರ ಮಳೆ ಆರಂಭವಾಗಲಿದ್ದು ನೀರಿಗಾಗಿ ಜನ ಪರದಾಡಬೇಕಾಗಿದೆ. ತಾಲೂಕು ಆಡಳಿತ ಮತ್ತು ಪುರಸಭೆ ಜನರಿಗೆ ಸಮರ್ಪಕವಾಗಿ ಟ್ಯಾಂಕರ್ ಮೂಲಕ ನೀರನ್ನು ನೀಡಲು ಈಗಾಗಲೇ ಆರಂಭಿಸಿದ್ದಾರೆ. ಆದರೂ ಜನರಿಗೆ ನೀರಿನ ಅಭಾವ ಕಾಡ ತೊಡಗಿದೆ.
ಪ್ರಥಮಬಾರಿಗೆ ಅಲಗೇರಿ ಗ್ರಾಮಕ್ಕೆ ನೀರಿನ ಬಿಸಿ ತಟ್ಟಿದ್ದು ದೊಡ್ಡ ಅಲಗೇರಿ, ಸಣ್ಣ ಅಲಗೇರಿ ಭಾಗದ ಬಾವಿಗಳು ಹಿಂದೆಂದು ಬತ್ತಿರಲಿಲ್ಲ. ಗ್ರಾಮದ ಹಿರಿಯರು ಹೇಳುವ ಪ್ರಕಾರ ಯಾವ ಕಾಲದಲ್ಲಿಯೂ ಇಲ್ಲಿ ಬಾವಿ ಬತ್ತಿರುವುದನ್ನು ನೋಡಿಲ್ಲ. ಈಗ ಇಲ್ಲಿಯ ಬಾವಿಗಳು ಬತ್ತಿರುವುದು ನೀರಿನ ಬರ ತಟ್ಟಿದೆ. ಈ ಗ್ರಾ.ಪಂ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ.
ತಾಲೂಕಿನಲ್ಲೀಗ ಖಾಸಗಿ ನೀರಿನ ಟ್ಯಾಂಕರ್ಗಳು ಹೆಚ್ಚಾಗಿ ಕಂಡುಬರುತ್ತಿದೆ. ಪಟ್ಟಣದ ಹೋಟೆಲ್ ಮತ್ತು ತಂಪುಪಾನೀಯ ಮಳಿಗೆಗಳಿಗೆ ಮನೆಮನೆಗಳಿಗೆ ಈ ಖಾಸಗಿ ನೀರಿನ ಮಾಲಕರು ನೀರನ್ನು ಸರಬರಾಜು ಮಾಡುತ್ತಾರೆ. ನೀರನ್ನು ದುಬಾರಿ ವೆಚ್ಚದಲ್ಲಿ ನೀಡದೆ ಜನರಿಗೆ ಇವರು ಸಹಕರಿಸುತ್ತಿದ್ದಾರೆ. ಇದರ ಜೊತೆಯಲ್ಲಿ ಖಾಸಗಿ ಸಂಘ ಸಂಸ್ಥೆ ದಾನಿಗಳು ನೀರನ್ನು ಉಚಿತವಾಗಿ ನೀಡುತ್ತಿದ್ದಾರೆ.
ಮುಂದಿನ ದಿನದಲ್ಲಿ ನೀರಿನ ಬೇಡಿಕೆ ದುಪ್ಪಟ್ಟು ಆಗುವ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಸರಕಾರ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.
•ಅರುಣ ಶೆಟ್ಟಿ
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.