ಯಕ್ಷಗಾನದಿಂದ ಮಕ್ಕಳಿಗೆ ಸಂಸ್ಕಾರದ ಶಿಕ್ಷಣ

ಮೂಡುಬಿದಿರೆ ಮಾಧವ ಶೆಟ್ಟಿ ಸಂಸ್ಮರಣೆ; ಪ್ರಶಸ್ತಿ ಪ್ರದಾನ

Team Udayavani, May 23, 2019, 6:10 AM IST

2205MOOD2

ಮೂಡುಬಿದಿರೆ: ಯಕ್ಷ ಗಾನ ಜನರಲ್ಲಿ ಜೀವನ ಮೌಲ್ಯಗಳ ಅರಿವಿನೊಂದಿಗೆ ಸಂಸ್ಕಾರ ಮೂಡಿಸುತ್ತ ಬಂದಿದೆ. ಅದರಲ್ಲೂ ಮಕ್ಕಳಿಗೆ ಯಕ್ಷ ಗಾನದ ಬಗ್ಗೆ ಆಸಕ್ತಿ ಮೂಡಿಸಿದಲ್ಲಿ ಅವರು ಸಂಸ್ಕಾ ರವಂತರಾಗಿ ಬೆಳೆಯಲು ಸಾಧ್ಯ ಎಂದು ಕ.ಸಾ.ಪ. ಮಾಜಿ ರಾಜ್ಯಾಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು ಅಭಿಪ್ರಾಯಪಟ್ಟರು.

ಯಕ್ಷಗಾನ ಕಲಾವಿದ ಮೂಡುಬಿದಿರೆ ಮಾಧವ ಶೆಟ್ಟಿ ಅವರ ಸಂಸ್ಮರಣೆ,ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾಧವ ಶೆಟ್ಟಿ ಅವರಂತಹ ಹಿರಿಯ ಕಲಾವಿದರ ಕಲಾ ಸಾಧನೆ ಇಂದಿನ ಕಲಾವಿದರಿಗೆ ಮಾದರಿ ಎಂದರು.

ಯಕ್ಷ ಸಂಗಮದ ಸಂಚಾಲಕ ಎಂ.ಶಾಂತರಾಮ ಕುಡ್ವ ಅವರು ಮಾಧವ ಶೆಟ್ಟಿ ಅವರ ಸಂಸ್ಮರಣೆಗೈದರು. ಮಾಧವ ಶೆಟ್ಟಿ ಅವರು ಪುಂಡು ವೇಷ, ರಾಜ ವೇಷಗಳಿಂದ ತೊಡಗಿ ಎಲ್ಲ ಬಗೆಯ ವೇಷಧಾರಿಯಾಗಿ, ಸಮರ್ಥ ಅರ್ಥ ಧಾರಿ ಯಾಗಿ ಪ್ರಸಿದ್ಧರಾದವರು. ತುಳು ಪ್ರಸಂಗಗಳ ಪಾತ್ರಚಿತ್ರಣದಲ್ಲೂ ಮಿಂಚಿ ದವರು ಎಂದು ಅವರು ಬಣ್ಣಿಸಿದರು.

ಅನುಭವಿ ಕಲಾವಿದ
ಇರುವೈಲು ಮೇಳದ ಮಾಜಿ ಸಂಚಾಲಕ, ನಿವೃತ್ತ ಬ್ಯಾಂಕ್‌ ಅಧಿಕಾರಿ ಐ. ಕುಮಾರ ಶೆಟ್ಟಿ ಅವರು ತಮ್ಮ ಅಭಿನಂದನ ಭಾಷಣದಲ್ಲಿ “ರಂಗಸ್ಥಳದ ಗುರಿಕಾರ, ಅಭಿನವ ಕೋಟಿ ಬಿರುದಾಂಕಿತ ದಾಸಪ್ಪ ರೈ ಅವರು ವಹಿಸಿದ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡುವ ಅಪರೂಪದ ಕಲಾವಿದರಲ್ಲಿ ಓರ್ವರು; ಯಕ್ಷಗಾನ ಕಲಾವಿದ, ಮೇಳಗಳ ಯಜಮಾನರಾಗಿ ಅನುಭವಿ’ ಎಂದು ಕೊಂಡಾಡಿದರು.

ಕಲಾ ಜೀವನದಲ್ಲಿ ಸಂತೃಪ್ತಿ
ಸಮ್ಮಾನಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ದಾಸಪ್ಪ ರೈ ಅವರು, ಯಕ್ಷರಂಗದಲ್ಲಿ ಸಲ್ಲಿಸಿದ ಸೇವೆಗಾಗಿ ತಮಗೆ ಯಕ್ಷಗಾನ ಬಯಲಾಟ ಅಕಾಡೆಮಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳೊಂದಿಗೆ ಪ್ರತಿಷ್ಠಿತ ಬೋಳಾರ ನಾರಾಯಣ ಶೆಟ್ಟಿ , ಅಳಿಕೆ ರಾಮಯ್ಯ ರೈ, ಪುಳಿಂಚ ರಾಮಯ್ಯ ರೈ, ಕರ್ನೂರು ಕೊರಗಪ್ಪ ರೈ ಇವರ ಹೆಸರಿನ ಪ್ರಶಸ್ತಿಗಳು ಲಭಿಸಿದ್ದು ಈಗ ತಮ್ಮ ಒಡನಾಡಿ ಹಿರಿಯ ಕಲಾವಿದ ಮಾಧವ ಶೆಟ್ಟಿ ಸಂಸ್ಮರಣ ಪ್ರಶಸ್ತಿ ಒಲಿದು ಬಂದಿರುವುದು ತಮ್ಮ ಕಲಾಜೀವನದ ಸಂತೃಪ್ತಿಯ ಸಂಗತಿ ಎಂದು ಉದ್ಗರಿಸಿದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ದಿವಾಕರ ಶೆಟ್ಟಿ ಭಾಗವಹಿಸಿದ್ದರು.
ಮಾಧವ ಶೆಟ್ಟಿ ಅವರ ಪತ್ನಿ ಗುಲಾಬಿ ಶೆಟ್ಟಿ, ಮಕ್ಕಳಾದ ಜಯರಾಮ ಶೆಟ್ಟಿ,ಶಾರದಾ ಶೆಟ್ಟಿ, ವೇದಾವತಿ ಶೆಟ್ಟಿ, ಅಳಿಯ ನೀಲೇಶ್‌ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.

ಮಾಧವ ಶೆಟ್ಟಿ ಅವರ ಮೊಮ್ಮಗ ವೇಣುಗೋಪಾಲ ಶೆಟ್ಟಿ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿ, ಸಮ್ಮಾನ ಪತ್ರ ವಾಚಿಸಿ ದರು. ಪ್ರೊ| ಸದಾಶಿವ ಶೆಟ್ಟಿಗಾರ್‌ ಕಾರ್ಯ  ಕ್ರಮ ನಿರೂಪಿಸಿ ದರು. ವಿನೋದ್‌ಕುಮಾರ್‌ ಶೆಟ್ಟಿ ವಂದಿಸಿದರು.ಬಳಿಕ, ಬೆಳ್ಮಣ್ಣು ಬಲ್ಲಿರೇನಯ್ಯ ಮಿತ್ರ ಮೇಳದಿಂದ
“ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನವಿತ್ತು.

ಪ್ರಶಸ್ತಿ ಪ್ರದಾನ
ಮೂಡುಬಿದಿರೆ ಮಾಧವ ಶೆಟ್ಟಿ ಸಂಸ್ಮರಣೆ ವೇದಿಕೆ, ಶಿಮಂತೂರು ಸಂಘಟ ನೆಯು ಯಕ್ಷ ಸಂಗಮದ ಆಶ್ರಯದಲ್ಲಿ, ಕಲಾವಿದ, “ಬಲ್ಲಿರೇನಯ್ಯ’ ಯಕ್ಷ ಮಾಸಿಕ ಸಂಪಾದಕ ತಾರಾನಾಥ ವರ್ಕಾಡಿ ಅವರ ವಿಶೇಷ ಸಹಕಾರದೊಂದಿಗೆ ಉದ್ಯಮಿ ಕೆ. ಶ್ರೀಪತಿ ಭಟ್‌ ಅವರ ಅಧ್ಯ ಕ್ಷತೆಯಲ್ಲಿ ಸಮಾಜ ಮಂದಿರದಲ್ಲಿ ಮಂಗಳವಾರ ಸಂಜೆ ಏರ್ಪಡಿಸಲಾದ ಈ ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕೆ. ಎಚ್‌. ದಾಸಪ್ಪ ರೈ ಅವರಿಗೆ “ಮಾಧವ ಶೆಟ್ಟಿ ಪ್ರಶಸ್ತಿ’ ನೀಡಿ ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.