ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!


Team Udayavani, May 23, 2019, 6:00 AM IST

s-28
ಲೋಕಸಭಾ ಚುನಾವಣೆಯ ಮತ ಎಣಿಕೆಗೂ ಮುನ್ನವೇ ಅನುಮಾನಾಸ್ಪದವಾಗಿ ಇವಿಎಂಗಳನ್ನು ಸಾಗಾಟ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಕಾಂಗ್ರೆಸ್‌, ಎಸ್‌ಪಿ-ಬಿಎಸ್‌ಪಿ ಕಾರ್ಯಕರ್ತರು ರಾತ್ರೋರಾತ್ರಿ ‘ಚೌಕಿದಾರ’ರಾಗಿ ಬದಲಾಗಿದ್ದಾರೆ!

ಉತ್ತರಪ್ರದೇಶ, ಪಂಜಾಬ್‌, ಹರ್ಯಾಣ, ಬಿಹಾರಗಳಲ್ಲಿ ಇವಿಎಂಗಳ ಸಾಗಾಟದ ವರದಿ ಪ್ರತಿಪಕ್ಷಗಳಲ್ಲಿ ಆತಂಕ ಮೂಡಿಸಿದ್ದು, ಅನೇಕ ಕಾರ್ಯಕರ್ತರು ಇವಿಎಂಗಳನ್ನು ಇಟ್ಟಿರುವ ಸ್ಟ್ರಾಂಗ್‌ ರೂಂಗಳ ಹೊರಗೆ ಕಾವಲು ಕಾಯಲಾರಂಭಿಸಿದ್ದಾರೆ. ಮಂಗಳವಾರ ಹಾಗೂ ಬುಧವಾರ ರಾತ್ರಿಯಿಡೀ ಎಸ್‌ಪಿ -ಬಿಎಸ್‌ಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸ್ಟ್ರಾಂಗ್‌ ರೂಂ ಹೊರಗೆಯೇ ಠಿಕಾಣಿ ಹೂಡಿದ್ದಾರೆ. ಉತ್ತರಪ್ರದೇಶದ ಮೀರತ್‌ ಮತ್ತು ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರಾತ್ರಿಯಿಡೀ ಸ್ಟ್ರಾಂಗ್‌ ರೂಂ ಹೊರಗೇ ಕಳೆದಿದ್ದಾರೆ. ಚಂಡೀಗಡದಲ್ಲೂ ಕಾಂಗ್ರೆಸ್‌ ಕಾರ್ಯಕರ್ತರು ಇದೇ ಕೆಲಸದಲ್ಲಿ ನಿರತರಾಗಿದ್ದು, ಇವಿಎಂಗಳು ಸ್ಟ್ರಾಂಗ್‌ರೂಂನಿಂದ ಎಲ್ಲೂ ಹೋಗದಂತೆ ನೋಡಿಕೊಂಡಿದ್ದಾರೆ. ಮಧ್ಯಪ್ರದೇಶದಲ್ಲಿ ಭೋಪಾಲ್ ಕ್ಷೇತ್ರದ ಅಭ್ಯರ್ಥಿ ದಿಗ್ವಿಜಯ್‌ ಸಿಂಗ್‌, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ನಾಯಕ ಸಂಜಯ್‌ ನಿರುಪಮ್‌, ಕೇರಳದಲ್ಲಿ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಸೇರಿದಂತೆ ಪ್ರಮುಖ ಅಭ್ಯರ್ಥಿಗಳು ಸ್ಟ್ರಾಂಗ್‌ ರೂಂಗೆ ಭೇಟಿ ನೀಡಿದ್ದಾರೆ.

ವಿಪಕ್ಷಗಳ ವಿರುದ್ಧ ಶಾ ಕಿಡಿ
ಮತಯಂತ್ರಗಳ (ಇವಿಎಂ) ವಿಶ್ವಾಸ ನೀಯತೆಯ ಬಗ್ಗೆ ಪ್ರಶ್ನಿಸಲಾರಂಭಿಸಿರುವ ವಿರೋಧ ಪಕ್ಷಗಳು ದೇಶದ ಜನತೆ ನೀಡಿರುವ ತೀರ್ಪಿಗೆ ಅಪಮಾನ ಎಸಗುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಟೀಕಿಸಿದ್ದಾರೆ. ಟ್ವಿಟರ್‌ನಲ್ಲಿ ಈ ಕುರಿತಾಗಿ ಹೇಳಿರುವ ಅವರು, ಪ್ರತಿಪಕ್ಷಗಳ ಈ ಕೂಗು ಚುನಾವಣೆಯಲ್ಲಿ ಸೋಲುವ ಹತಾಶೆಯಿಂದ ಹೊರಬಿದ್ದಿದ್ದು, ದೇಶದ ಪ್ರಜಾಪ್ರಭುತ್ವವನ್ನು ಹಂತ ಹಂತವಾಗಿ ಕ್ಷೀಣಿಸುವಂತೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. 6ನೇ ಸುತ್ತಿನ ಮತದಾನ ಮುಕ್ತಾಯವಾದ ನಂತರ ಇವಿಎಂಗಳ ಬಗ್ಗೆ ದೂರ ಲಾರಂಭಿಸಿದ ವಿಪಕ್ಷಗಳು, ಇತ್ತೀಚೆಗೆ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ ನಂತರ ತಮ್ಮ ಅಸಮಾಧಾನವನ್ನು ದೊಡ್ಡ ಮಟ್ಟದಲ್ಲಿ ವ್ಯಕ್ತಪಡಿಸಲಾರಂಭಿಸಿವೆ. ಚುನಾವಣೋತ್ತರ ಸಮೀಕ್ಷೆಗಳನ್ನೇ ಆಧಾರವಾಗಿಟ್ಟು ಕೊಂಡು ಇವಿಎಂಗಳನ್ನು ದೂರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

Modi

ದೀದಿ ಕೋಟೆಯಲ್ಲಿ ಮೋದಿ ಅಲೆ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.