![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 23, 2019, 8:06 AM IST
ಬೆಳಗಾವಿ: ಗಾಂಧಿ ನಗರದ ರೈಲ್ವೆ ಹಳಿ ಮೇಲೆ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಬೆಳಗಾವಿ: ಪತಿಯೊಂದಿಗೆ ಜಗಳವಾಡಿದ ಮಹಿಳೆಯೊಬ್ಬಳು ಮಗನೊಂದಿಗೆ ಇಲ್ಲಿಯ ಗಾಂಧಿ ನಗರದ ಮಾರುತಿ ನಗರ ಬಳಿ ರೈಲು ಹಳಿ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗಳು ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾಳೆ.
ಮೂಲತಃ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದ, ಸದ್ಯ ಮಾರುತಿ ನಗರ ನಿವಾಸಿಯಾದ ರೇಣುಕಾ ಯಲ್ಲಪ್ಪ ಗುಟಗುದ್ದಿ(35) ಹಾಗೂ ಮಗ ಲಕ್ಷ್ಮಣ(7) ಮೃತಪಟ್ಟಿದ್ದಾರೆ. ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಘಟನೆ ಸಂಭವಿಸಿದೆ.
ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ರೈಲು ಹಳಿ ಮೇಲೆ ಬಿದ್ದ ಮೃತದೇಹಗಳನ್ನು ಸ್ಥಳೀಯರು ನೋಡಿದ ಮೇಲೆಯೇ ಘಟನೆ ಬೆಳಕಿಗೆ ಬಂದಿದೆ. ಸವಿತಾ ಎಂಬ 12 ವರ್ಷದ ಮಗಳು ತಾಯಿ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾಳೆ. ಕೆಲ ತಿಂಗಳುಗಳ ಹಿಂದೆಯಷ್ಟೇ ಇನ್ನೊಬ್ಬ ಮಗಳು ಹಾವು ಕಚ್ಚಿ ಮೃತಪಟ್ಟಿದ್ದಳು.
ತರಕಾರಿ ಮಾರಾಟ ಮಾಡಿಕೊಂಡಿದ್ದ ಈ ಕುಟುಂಬ ಕೆಲ ವರ್ಷಗಳಿಂದ ಬೆಳಗಾವಿ ಮಾರುತಿ ನಗರದ ಶೆಡ್ನಲ್ಲಿ ನೆಲೆಸಿತ್ತು. ಪತಿ-ಪತ್ನಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಅದರಂತೆ ಮಂಗಳವಾರ ರಾತ್ರಿಯೂ ಇಬ್ಬರೂ ಜಗಳವಾಡಿದ್ದಾರೆ. ಆಗ ಪತ್ನಿ ರೇಣುಕಾ ಸಿಟ್ಟಿನ ಭರದಲ್ಲಿ ಮಗಳು ಸವಿತಾ ಹಾಗೂ ಮಗ ಲಕ್ಷ್ಮಣನ ಕೈ ಹಿಡಿದು ಮನೆಯಿಂದ ಹೊರಬಿದ್ದಿದ್ದಾಳೆ. ಇವರು ನೆಲೆಸಿದ್ದ ಶೆಡ್ದಿಂದ ಕೇವಲ 100 ಮೀಟರ್ ಅಂತರದಲ್ಲಿರುವ ರೈಲ್ವೆ ಹಳಿಯತ್ತ ತಾಯಿ ಧಾವಿಸುತ್ತಿರುವುದನ್ನು ಕಂಡ ಮಗಳು ತಾಯಿಯ ಕೈ ಬಿಡಿಸಿಕೊಂಡು ಓಡಿ ಹೋಗಿದ್ದಾಳೆ.
ರೈಲು ಹಾಯ್ದು ರೇಣುಕಾಳ ಕಾಲು ಕತ್ತರಿಸಿ ಹೋಗಿದೆ. ಆದರೆ ಸ್ಥಳದಲ್ಲಿ ಕತ್ತರಿಸಿದ ಕಾಲು ಪತ್ತೆಯಾಗಿಲ್ಲ. ಬೀದಿ ನಾಯಿಗಳು ಎಳೆದುಕೊಂಡು ಹೋಗಿರಬಹುದು ಎಂದು ಶಂಕಿಸಲಾಗಿದೆ. ಮಗನ ದೇಹದಿಂದ ರುಂಡ ಬೇರ್ಪಟ್ಟಿದ್ದು, ಹಳಿಯ ಪಕ್ಕದಲ್ಲೇ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ ಐದು ಗಂಟೆ ಸುಮಾರಿಗೆ ಪತಿ ಯಲ್ಲಪ್ಪ ಗುಟಗುದ್ದಿ ತನ್ನ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ತಿಳಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಈತನೇ ಪತ್ನಿ ಹಾಗೂ ಮಗನನ್ನು ಹತ್ಯೆ ಮಾಡಿರುವ ಬಗ್ಗೆ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದು, ಇದೊಂದು ಸಂಶಯಾಸ್ಪದ ಸಾವು ಎಂದು ದೂರಿದ್ದಾರೆ.
ಸ್ಥಳಕ್ಕೆ ಮಾಳಮಾರುತಿ ಇನ್ಸಪೆಕ್ಟರ್ ಜಗದೀಶ ಹಂಚಿನಾಳ, ರೈಲ್ವೆ ಪಿಎಸ್ಐ ಬಿ.ಟಿ. ವಾಲೀಕರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಬಗ್ಗೆ ತನಿಖೆ ನಡೆಸಿದ್ದು, ಪತಿ ಯಲ್ಲಪ್ಪ ಗುಟಗುದ್ದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಕುರಿತು ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.