ಲಾಂಗ್‌ ಡ್ರೈವ್‌ ಹೆಸರಲ್ಲಿ ಕಾರು ಅಪಹರಿಸಿದ್ದವರ ಸೆರೆ

ಕಾರು ಮಾಲೀಕ ಬಹಿರ್ದೆಸೆಗೆ ಹೋದಾಗ ಕಾರು ಕದ್ದು ಪರಾರಿ

Team Udayavani, May 23, 2019, 4:00 PM IST

rn-tdy-02..

ಕನಕಪುರ ತಾಲೂಕಿನ ಸಾತನೂರು ಪೊಲೀಸರು ಕಾರು ಮತ್ತು ದ್ವಿಚಕ್ರವಾಹನ ಕಳ್ಳರನ್ನು ಬಂದಿಸಿದ್ದು, ಕಳ್ಳರಿಂದ ವಶಕ್ಕೆ ಪಡೆದ ವಾಹನಗಳ ಸಮೇತ ಬಂಧಿಸಿರುವುದು.

ಕನಕಪುರ: ಬೆಂಗಳೂರು ನಗರದಿಂದ ಲಾಂಗ್‌ಡ್ರೈವ್‌ಗೆ ಕರೆತಂದು ಸ್ನೇಹಿತನ ಕಾರನ್ನೇ ಅಪರಿಸಿದ್ದ ಕಾರು ಮತ್ತು ದ್ವಿಚಕ್ರವಾಹನ ಕಳ್ಳರನ್ನು ಸಾತನೂರು ಪೋಲಿಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಬಂದಿತ ಇಬ್ಬರು ಆರೋಪಿಗಳು ಪ್ರವಾಸಕ್ಕೆಂದು ಕರೆ ತಂದು ಕಾರು ಮಾಲೀಕ ಪ್ರವೀಣ್‌ ಬಹಿರ್ದೆಸೆಗೆ ಹೋದಾಗ ಕಾರನ್ನು ಕಳ್ಳತನ ಮಾಡಿ ಪರಾರಿಯಾಗಿದ್ದವರ ವಿರುದ್ಧ ಸಾತನೂರು ಠಾಣೆಯಲ್ಲಿ ನೀಡಲಾಗಿತ್ತು. ಪ್ರಕರಣದ ಬೆನ್ನುಬಿದ್ದ ಪೋಲಿಸರು ಆರೋಪಿಗಳನ್ನು ಬಂದಿಸಿದ್ದು, ಆರೋಪಿಗಳಿಂದ ಮತ್ತಷ್ಟು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆನೇಕಲ್ ತಾಲೂಕಿನ ಸರ್ಜಾಪುರದ ಪೆನಾಜುಲ್ ಪಿರ್ನಾಕುಲ್ ಅಪಾರ್ಟ್‌ಮೆಂಟ್‌ನ ವಾಸಿಯಾಗಿರುವ ಶರತ್‌ ಅಲಿಯಾಸ್‌ ಆದಿತ್ಯ (25), ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮಡಿಕೆಸೂರು ಗ್ರಾಮದ ಶಿವಣ್ಣನ ಮಗ ರಾಮು ಅಲಿಯಾಸ್‌ ರಮೇಶ್‌(23) ಬಂಧಿತರು.

ದೂರಿನನ್ವಯ ತನಿಖೆ ಆರಂಬಿಸಿ ಪೊಲೀಸರು ವೃತ್ತ ನಿರೀಕ್ಷಕ ಮಲ್ಲೇಶ್‌ ಅವರನ್ನೊಳಗೊಂಡ ತಂಡದಲ್ಲಿ ಪಿಎಸ್‌ಐ ಮುರುಳಿ, ಪೃಥ್ವಿ, ಸಿಬ್ಬಂದಿಗಳಾದ ಸುಭಾಷ್‌, ದುರ್ಗೇಗೌಡ, ಕಾರ್ಯಚರಣೆಗಿಳಿದು ಬೆಂಗಳೂರಿನ ಹಲಸೂರು ಕೆರೆ ಬಳಿಯಲ್ಲಿ ಆರೋಪಿಗಳನ್ನು ದಸ್ತುಗಿರಿ ಮಾಡಿದ್ದು, ಅಲ್ಲಿಂದ ಕರೆತಂದ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬೆಂಗಳೂರಿನ ಬಸವೇಶ್ವರನಗರ, ಸುಬ್ರಹ್ಮಣ್ಯನಗರ, ವಿಜಯನಗರ ಯಶವಂತಪುರ, ಕಾಮಾಕ್ಷಿಪಾಳ್ಯ, ಮಹಾಲಕ್ಷ್ಮೀ ಲೇಔಟ್, ಕಳ್ಳತನ ಮಾಡಿ 11 ವಾಹನಗಳನ್ನು ಕದ್ದು 8 ತಿಂಗಳು ಜೈಲಿನಲ್ಲಿ ಇದ್ದು, ಜಾಮೀನಿನ ಮೇಲೆ ಹೊರಬಂದಿದ್ದು ಮತ್ತೇ ಅದೇ ಕೆಲಸಕ್ಕೆ ಕೈಹಾಕಿ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಜಾಮೀನಿನ ಮೇಲೆ ಹೊರಬಂದ ಆರೋಪಿಗಳು ಬೆಂಗಳೂರಿನ ಮಹಾಲಕ್ಷ್ಮೀಪುರಂ ಠಾಣಾ ವ್ಯಾಪ್ತಿಯಲ್ಲಿ ಎರಡು ರಾಯಲ್ಎನ್‌ಪೀಲ್ಡ್ ದ್ವಿಚಕ್ರವಾಹನಗಳೂ, ಮಲ್ಲೇಶ್ವರಂ, ಕೆಂಗೇರಿ, ಅಮೃತಹಳ್ಳಿ, ಅನ್ನಪೂರ್ಣೇಶ್ವರಿನಗರ, ಚಂದ್ರಲೇಔಟ್‌ಗಳ ಠಾಣಾ ವ್ಯಾಪ್ತಿಯಲ್ಲಿ ಒಂದೊಂದು ರಾಯಲ್ಎನ್‌ಪೀಲ್ಡ್ ದ್ವಿಚಕ್ರವಾಹನಗಳೂ, ಮುರುಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಒಂದು ರಾಯಲ್ಎನ್‌ಪೀಲ್ಡ್ ದ್ವಿಚಕ್ರವಾಹನ ಸೇರಿ 8 ವಾಹನಗಳು ಸಾತನೂರು ಠಾಣಾ ವ್ಯಾಪ್ತಿಯಲ್ಲಿ ಎರಡು ಕಾರುಗಳನ್ನು ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದು ಎಲ್ಲಾ ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.