ರಾಘವೇಂದ್ರಗೆ ಭರ್ಜರಿ ಗೆಲುವು


Team Udayavani, May 24, 2019, 1:03 PM IST

24-May-19

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಕುಟುಂಬದವರು ಸಿಹಿ ತಿನ್ನಿಸಿದರು.

ಶಿವಮೊಗ್ಗ: ಮೋದಿ ಅಲೆ, ಸಂಘಟನೆ ಶಕ್ತಿಯಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಜಯ ಗಳಿಸಿದ್ದಾರೆ. ಒಂದೂವರೆ ಲಕ್ಷದ ಮತಗಳ ಅಂತರದಿಂದ ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿಗೆ ನಿರೀಕ್ಷೆಗೂ ಮೀರಿ ಮತಗಳು ಬಂದಿವೆ.

ಉಪ ಚುನಾವಣೆಯಲ್ಲಿ ಮೋದಿ ಅಲೆ, ಹಿಂದುತ್ವದ ಯಾವುದೇ ವಿಷಯಗಳು ಇಲ್ಲದ ವೇಳೆಯೂ 52 ಸಾವಿರ ಮತಗಳ ಅಂತರದ ಗೆಲುವು ಸಿಕ್ಕಿತ್ತು. ಇದನ್ನೇ ಕಡಿಮೆ ಮತ ಬಂದ ಬೂತ್‌ಗಳ ಮೇಲೆ ಹೆಚ್ಚು ನಿಗಾ ವಹಿಸಿದ ಪರಿಣಾಮ ಬಿಜೆಪಿ ಮತ್ತೂಂದು ದಾಖಲೆಯ ಗೆಲುವು ಸಾಧಿಸಿದೆ. ಉಪ ಚುನಾವಣೆಯಲ್ಲಿ ಸೋಲಿನ ಅಂತರವನ್ನು ತಗ್ಗಿಸಿಕೊಂಡು ಗೆಲುವಿನ ಕನಸು ಕಾಣುತ್ತಿದ್ದ ಜೆಡಿಎಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಆಘಾತಕಾರಿ ಸೋಲು ಅನುಭವಿಸಿದ್ದಾರೆ.

ಸಹ್ಯಾದ್ರಿ ಕಲಾ ಕಾಲೇಜು ಕಟ್ಟಡದಲ್ಲಿ ಗುರುವಾರ ನಡೆದ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಗಳಿಸಿದ ರಾಘವೇಂದ್ರ ಅವರು ಅಂತಿಮವಾಗಿ 2,23,360 ಮತಗಳಿಂದ ಜಯಭೇರಿ ಭಾರಿಸಿದರು. ಉಪ ಚುನಾವಣೆಯಲ್ಲಿ 52 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ರಾಘವೇಂದ್ರ ಅವರು 7,29,872 ಲಕ್ಷ ಮತ ಗಳಿಸಿದರೆ, ಮಧು ಬಂಗಾರಪ್ಪ ಅವರು 5,06,512 ಲಕ್ಷ ಮತಗಳನ್ನು ಪಡೆದರು. 50ರಿಂದ 1 ಲಕ್ಷ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂದು ಹೇಳುತ್ತಿದ್ದರಾದರೂ ಆಂತರಿಕವಾಗಿ ಅಂತರ ಬಹಳ ಕಡಿಮೆಯಾಗಲಿದೆ ಎಂದು ಮಾತನಾಡಿಕೊಂಡಿದ್ದರು. ಆರಂಭದಲ್ಲಿ ಒಂದೂವರೆ ಲಕ್ಷ ಅಂತರ ಎಂದು ಹೇಳುತ್ತಿದ್ದ ಬಿಜೆಪಿ ಮುಖಂಡರ ಮತಗಟ್ಟೆ ಸಮೀಕ್ಷೆ ಆಧಾರದ ಮೇಲೆ 70 ಸಾವಿರ ಅಂತರಕ್ಕೆ ಬಂದಿದ್ದರು. ಆದರೆ ಮತದಾರ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ಲಿಸಿ ಹೊಸ ಸಂದೇಶ ನೀಡಿದ್ದಾನೆ.

ಎರಡನೇ ದೊಡ್ಡ ಗೆಲುವು: ಈವರೆಗೆ ಶಿವಮೊಗ್ಗ ಲೋಕಸಭೆ ಚುನಾವಣೆ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವುದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ. ಈ ಹಿಂದೆ 2014ರ ಚುನಾವಣೆಯಲ್ಲಿ ಯಡಿಯೂರಪ್ಪ ಅವರು 3.62 ಲಕ್ಷ ಮತಗಳ ಅಂತರದಿಂದ ವಿಜಯ ಗಳಿಸಿದ್ದು ಸಾರ್ವಕಾಲಿಕ ದಾಖಲೆಯಾಗಿತ್ತು. ಈಗ ಎರಡನೇ ದೊಡ್ಡ ಗೆಲುವು ರಾಘವೇಂದ್ರ ಅವರ ಪಾಲಾಗಿದೆ. ರಾಘವೇಂದ್ರ ಅವರು ಗಳಿಸಿದ 7 ಲಕ್ಷ ಮತಗಳು ಸಹ ಹೊಸ ದಾಖಲೆ ನಿರ್ಮಿಸಿದೆ. 2014ರ ಚುನಾವಣೆಯಲ್ಲಿ ಅವರ ತಂದೆ ಯಡಿಯೂರಪ್ಪ ಅವರು 6.06 ಲಕ್ಷ ಮತ ಗಳಿಸಿದ್ದು ದಾಖಲೆಯಾಗಿತ್ತು. ಅವರಿಗಿಂತ 1.23 ಲಕ್ಷ ಮತಗಳನ್ನು ಪಡೆಯುವ ಮೂಲಕ ಅತಿ ಹೆಚ್ಚು ಮತಗಳನ್ನು ಗಳಿಸಿದ ಸಂಸದ ಎಂಬ ಕೀರ್ತಿಗೆ ರಾಘವೇಂದ್ರ ಪಾತ್ರರಾಗಿದ್ದಾರೆ.

ಪರಾಜಿತ ಅಭ್ಯರ್ಥಿಗಳು ಗಳಿಸಿದ ಮತಗಳಲ್ಲೂ ಮಧು ಬಂಗಾರಪ್ಪ ಗಳಸಿದ ಮತಗಳು ಹೊಸ ದಾಖಲೆಯಾಗಿದೆ. ಈ ಹಿಂದೆ 2009ರ ಚುನಾವಣೆಯಲ್ಲಿ ಮಾಜಿ ಸಿಎಂ ಎಸ್‌. ಬಂಗಾರಪ್ಪ ಅವರು ರಾಘವೇಂದ್ರ ಅವರ ಎದುರು 4.29ಲಕ್ಷ ಮತಗಳನ್ನು ಗಳಿಸಿದ್ದರು. ಮಧು ಅವರು ತಮ್ಮ ತಂದೆಯವರಿಗಿಂತ 80 ಸಾವಿರ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.