ಬಿಸಿಲಲ್ಲೇ ನೀರಿಗಾಗಿ ನೀರೆಯರ ಪರದಾಟ


Team Udayavani, May 25, 2019, 10:04 AM IST

25-May-2

ಅಫಜಲಪುರ: ಗೊಬ್ಬೂರ (ಬಿ) ಗ್ರಾಮದ ಶಿವಾಜಿ ನಗರದಲ್ಲಿ ಮಹಿಳೆಯರು ಕೊಡಗಳನ್ನಿಟ್ಟು ನೀರಿಗಾಗಿ ಕಾಯುತ್ತ ಕುಳಿತಿರುವುದು.

ಅಫಜಲಪುರ: ತಾಲೂಕಿನ ಗೊಬ್ಬೂರ (ಬಿ) ಗ್ರಾಮದಲ್ಲಿ ಉರಿ ಬಿಸಿಲಲ್ಲಿ ಅಲೆದಾಡಿ ಬಳಕೆಗೆ ಮತ್ತು ಕುಡಿಯಲು ನೀರು ತರುವಲ್ಲಿ ನೀರೆಯರು ಪರದಾಡುತ್ತಿದ್ದಾರೆ.

ಗ್ರಾಮದಲ್ಲಿ ಪುರಾತನ ಕಾಲದ 11 ತೆರೆದ ಬಾವಿಗಳಿವೆ. ಇಷ್ಟು ವರ್ಷ ಈ ಬಾವಿಗಳಿಂದ ಗ್ರಾಮಸ್ಥರು ನೀರು ಪಡೆಯುತ್ತಿದ್ದರು. ಈಗ ಅವೆಲ್ಲ ಬತ್ತಿ ಹೋಗಿವೆ. ಗ್ರಾಪಂ ವ್ಯಾಪ್ತಿಯ ವಾಡಿ ತಾಂಡಾ, ಗೊಬ್ಬೂರ ವಾಡಿ ಹಾಗೂ ಗೊಬ್ಬೂರ (ಬಿ) ಸೇರಿದಂತೆ ಒಟ್ಟು 30 ಕೊಳವೆ ಬಾವಿಗಳಿವೆ. ಇವುಗಳಲ್ಲಿ ಕೇವಲ 10 ರಲ್ಲಿ ಮಾತ್ರ ಅಲ್ಪಸ್ವಲ್ಪ ನೀರು ಬರುತ್ತಿದೆ. ಅದು ಒಂದು ಕೊಳವೆ ಬಾವಿಗೆ 10 ಕೊಡಗಳಷ್ಟು ಮಾತ್ರ ನೀರು ಬರುತ್ತಿದೆ. ಈ ಕೊಳವೆ ಬಾವಿಗಳ ಎದುರು ನಸುಕಿನ ಜಾವದಿಂದ ರಾತ್ರಿ ವರೆಗೆ ಗ್ರಾಮಸ್ಥರು ಕಾಯ್ದು ನೀರು ತೆಗೆದುಕೊಂಡು ಹೋಗುವ ಪರಿಸ್ಥಿತಿಯಿದೆ.

ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ಧು ಶಿರಸಗಿ ಅವರು ಗ್ರಾಮದ ಅಂಬೇಡ್ಕರ್‌ ಭವನದ ಎದುರು ಕೊರೆಸಿದ ಕೊಳವೆ ಬಾವಿಯಲ್ಲಿ ಸ್ವಲ್ಪ ನೀರಿನಮಟ್ಟ ಹೆಚ್ಚಿದೆ. ಗ್ರಾಮದ ಬಹುತೇಕರು ಈಗ ಅದನ್ನೇ ನೆಚ್ಚಿಕೊಂಡಿದ್ದಾರೆ. ಅದರ ಮೇಲೂ ಹೆಚ್ಚಿನ ಒತ್ತಡ ಇರುವುದರಿಂದ ನೀರು ಸಮರ್ಪಕವಾಗಿ ಸಾಕಾಗುತ್ತಿಲ್ಲ. ಹೀಗಾಗಿ ಗ್ರಾಮದ ಯುವಕರು ಕಿಲೋ ಮೀಟರ್‌ಗಟ್ಟಲೇ ದೂರ ಹೋಗಿ ದ್ವಿಚಕ್ರ, ತ್ರಿಚಕ್ರ, ತಳ್ಳು ಬಂಡಿಗಳು ಹಾಗೂ ಎತ್ತಿನ ಬಂಡಿಗಳಲ್ಲಿ ನೀರು ತರುತ್ತಿದ್ದಾರೆ. ಗೊಬ್ಬೂರ (ಬಿ) ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 8250 ಜನಸಂಖ್ಯೆ ಇದೆ. ಇಷ್ಟು ಪ್ರಮಾಣದ ಜನಸಂಖ್ಯೆಗೆ ನೀರು ಸಾಕಾಗುತ್ತಿಲ್ಲ. ಹೀಗಾಗಿ ಎಲ್ಲರೂ ನಿತ್ಯ ನೀರಿಗಾಗಿ ಊಟ, ಕೆಲಸ ಬಿಟ್ಟು ನೀರು ತರಲು ಸುಡು ಬಿಸಿಲಲ್ಲೇ ಅಲೆದಾಡಬೇಕಾದ ಅನಿವಾರ್ಯತೆ ಬಂದಿದೆ.

ಇನ್ನೂ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಒಂದು ವರ್ಷದಿಂದ ಸ್ಥಗಿತವಾಗಿದೆ. ಇದರಿಂದ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಶುದ್ಧೀಕರಣ ಘಟಕ ಸ್ಥಗಿತದ ಬಗ್ಗೆ ವಿಚಾರಿಸಿದಾಗ ನೀರಿನ ಮೂಲವೇ ನಿಂತು ಹೋಗಿದೆ. ಹೀಗಾಗಿ ಶುದ್ಧೀಕರಣ ಘಟಕ ಸ್ಥಗಿತಗೊಳಿಸಲಾಗಿದೆ ಎಂದು ಸಂಬಂಧಿಸಿದವರು ಉತ್ತರಿಸುತ್ತಾರೆ. ಗೊಬ್ಬೂರವಾಡಿ, ವಾಡಿ ತಾಂಡಾ ಹಾಗೂ ಗೊಬ್ಬೂರ (ಬಿ) ಗ್ರಾಮದಲ್ಲಿ ತಲಾ ಒಂದು ಕೊಳವೆ ಬಾವಿ ಖರೀದಿಸಲಾಗಿದೆ. ಇದರಿಂದ ಮಿನಿ ಟ್ಯಾಂಕ್‌ಗಳಿಗೆ ನೀರು ತುಂಬಿ ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಪಂ ಅಧ್ಯಕ್ಷ ಶಿವಾನಂದ ಅಲ್ದೆ ತಿಳಿಸಿದ್ದಾರೆ. ಜಿಪಂನ ಎನ್‌ಆರ್‌ಡಬ್ಲ್ಯುಪಿ ಅಡಿ ಒಂದು ಕೋಟಿ ರೂ. ಅನುದಾನ ತಂದು ತೆರೆದ ಕೊಳವೆ ಬಾವಿ ಕೊರೆಸಲಾಗಿದೆ. ಆದಷ್ಟು ಬೇಗ ಗೊಬ್ಬೂರ (ಬಿ) ಗ್ರಾಪಂ ವ್ಯಾಪ್ತಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ಧು ಶಿರಸಗಿ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.