ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ

ಒಂದು ಕಟ್ಟು ನೀರಿಗಾಗಿ ರೈತರ ಬೇಡಿಕೆ • ಮಳೆಯೂ ಇಲ್ಲ; ಕೆರೆ, ಕೊಳವೆ ಬಾವಿಗಳಲ್ಲೂ ನೀರಿಲ್ಲ

Team Udayavani, May 26, 2019, 2:17 PM IST

mandya-tdy-3..

ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನ ಬೆಳೆಗಳು ನೀರಿಲ್ಲದೆ ಒಣಗಲಾರಂಭಿಸಿವೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ಒಂದು ಕಟ್ಟು ನೀರನ್ನು ಕೊಟ್ಟು ಬೇಸಿಗೆ ಬೆಳೆ ಸಂರಕ್ಷಣೆ ಮಾಡಿಕೊಡುವಂತೆ ರೈತರು ರಾಜ್ಯ ಸರ್ಕಾರದ ಎದುರು ಬೇಡಿಕೆ ಇಟ್ಟಿದ್ದಾರೆ.

ಮುಂಗಾರು ಪೂರ್ವ ಮಳೆ ಕೈಕೊಟ್ಟಿದೆ. ಕೆರೆಗಳಲ್ಲಿ ನೀರಿಲ್ಲ, ಕೊಳವೆ ಬಾವಿಗಳು ಬತ್ತಿಹೋಗಿವೆ. ಅಂತರ್ಜಲ ಪಾತಾಳ ಸೇರಿಕೊಂಡಿದೆ. ಇಂತಹ ಸಮಯದಲ್ಲಿ ಬೆಳೆಗಳಿಗೆ ನೀರು ಸಿಗಬೇಕಾದರೆ ಕೃಷ್ಣರಾಜಸಾಗರ ಜಲಾಶಯದಿಂದ ಮಾತ್ರ ಸಾಧ್ಯ ಎನ್ನುವುದು ರೈತರು ಹೇಳುವ ಮಾತು.

11.432 ಟಿಎಂಸಿ: ಕೃಷ್ಣರಾಜಸಾಗರ ಜಲಾಶಯದಲ್ಲಿ 74 ಅಡಿವರೆಗೂ ಬೆಳೆಗಳಿಗೆ ನೀರು ಕೊಟ್ಟಿರುವ ಉದಾಹರಣೆಗಳಿವೆ. ಈಗ ಹಾಲಿ ಅಣೆಕಟ್ಟೆಯೊಳಗೆ 81.44 ಅಡಿ ನೀರಿದೆ. ಜಲಾಶಯಕ್ಕೆ 139 ಕ್ಯುಸೆಕ್‌ ಒಳಹರಿವಿದ್ದು, 348 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯೊಳಗೆ 11.432 ಟಿಎಂಸಿ ಅಡಿ ನೀರಿದೆ.

ಹಾಲಿ ಬೇಸಿಗೆ ಹಂಗಾಮಿನ ಬೆಳೆಗೆ ಒಂದು ಕಟ್ಟು ನೀರು ಕೊಟ್ಟರೂ ಭತ್ತ ಸೇರಿದಂತೆ ಇನ್ನಿತರ ಬೆಳೆಗಳೆಲ್ಲವೂ ರೈತರ ಕೈಸೇರಲಿವೆ. ಹೀಗಾಗಿ ಬೆಳೆಗಳಿಗೆ ಶೀಘ್ರವೇ ನೀರು ಹರಿಸುವಂತೆ ರಾಜ್ಯಸರ್ಕಾರ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ರೈತರ ಪರದಾಟ: ಈ ಬಾರಿ ಮುಂಗಾರು ಪೂರ್ವ ಮಳೆ ಸಮರ್ಪಕವಾಗಿ ಬಿದ್ದಿಲ್ಲ. ಪೂರ್ವ ಮುಂಗಾರು ಉತ್ತಮವಾಗಿದ್ದರೆ ಬೆಳೆಗಳಿಗೆ ನೀರಿನ ಅವಶ್ಯಕತೆ ಕಂಡುಬರುತ್ತಿರಲಿಲ್ಲ. ಕಳೆದ ವರ್ಷ ಮಾರ್ಚ್‌, ಏಪ್ರಿಲ್, ಮೇ ತಿಂಗಳವರೆಗೆ ಮುಂಗಾರು ಪೂರ್ವ ಮಳೆ ಆಶಾದಾಯಕವಾಗಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ವಾಡಿಕೆ ಮಳೆ 8.8 ಮಿ.ಮೀ. ಇದ್ದರೂ 27.3 ಮಿ.ಮೀ. ಮಳೆಯಾಗಿತ್ತು. ಏಪ್ರಿಲ್ನಲ್ಲಿ ವಾಡಿಕೆ ಮಳೆ 49.5 ಮಿ.ಮೀ.ಗೆ 40.1 ಮಿ.ಮೀ. ಮಳೆಯಾಗಿದ್ದರೆ, ಮೇ ತಿಂಗಳಲ್ಲಿ ವಾಡಿಕೆ ಮಳೆ 118.7 ಮಿ.ಮೀ.ಗೆ 223.3 ಮಿ.ಮಿ. ಮಳೆಯಾಗಿತ್ತು. ಈ ಬಾರಿ ಮಳೆಯೇ ಇಲ್ಲದೆ ರೈತರು ಬೆಳೆ ರಕ್ಷಿಸಿಕೊಳ್ಳುವುದಕ್ಕೆ ಪರದಾಡುತ್ತಿದ್ದಾರೆ.

ಕೆಲವೆಡೆ ಕೊಳವೆ ಬಾವಿಗಳಲ್ಲಿ ಅತಿ ಕಡಿಮೆ ನೀರು ಬರುತ್ತಿದ್ದು, ಅದನ್ನೇ ಬಳಸಿಕೊಂಡು ಬೆಳೆಗಳ ರಕ್ಷಣೆಗೆ ರೈತರು ಮುಂದಾಗಿದ್ದಾರೆ. ಮಳೆಯಾಶ್ರಿತ ಪ್ರದೇಶದ ರೈತರು ಮಳೆಯನ್ನೇ ದಿಟ್ಟಿಸಿ ನೋಡುತ್ತಾ, ನೀರಿಲ್ಲದೆ ಬೆಳೆಗಳು ಒಣಗುತ್ತಿರುವುದನ್ನು ಕಂಡು ಚಿಂತಾಕ್ರಾಂತರಾಗಿದ್ದಾರೆ. ಮುಂಗಾರು ಮಳೆ ಆಗಮನಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕಿದ್ದು, ಈಗ ನೀರು ಸಿಕ್ಕರೆ ಬೆಳೆ ಪಡೆದುಕೊಂಡು ಮುಂಗಾರು ಹಂಗಾಮಿನ ಬಿತ್ತನೆಗೆ ಭೂಮಿಯನ್ನು ಹದ ಮಾಡಿಕೊಳ್ಳಲು ಸರಿಹೋಗಲಿದೆ ಎನ್ನುವುದು ರೈತರ ಲೆಕ್ಕಾಚಾರವಾಗಿದೆ.

ಇನ್ನೊಂದು ಕಟ್ಟು ನೀರು ಹರಿಸಿ: ಬಿಸಿಲಿನ ಹೊಡೆತಕ್ಕೆ ಬೆಳೆಗಳು ನೆಲಕಚ್ಚುತ್ತಿವೆ. ಭೂಮಿ ಕಾದು ಕೆಂಡವಾಗಿದೆ. ಕೆರೆಗಳಲ್ಲಿರುವ ಅಲ್ಪಸ್ವಲ್ಪ ನೀರೂ ಇಂಗಿಹೋಗುತ್ತಿದೆ. ತಾಪಮಾನ ಅಧಿಕವಾಗಿರುವ ಪ್ರಸ್ತುತ ದಿನಗಳಲ್ಲಿ ನಾಲೆಗಳಲ್ಲಿ ನೀರು ಹರಿಸಿ ಅನ್ನದಾತರನ್ನು ರಕ್ಷಣೆ ಮಾಡಬೇಕಿದೆ. ಏ.21ರಿಂದ ಮೇ 8ರವರೆಗೆ ಒಂದು ಕಟ್ಟು ನೀರನ್ನು ಹರಿಸಲಾಗಿದೆ. ಅದೇ ರೀತಿಯಲ್ಲಿಯೇ ಇನ್ನೊಂದು ಕಟ್ಟು ನೀರು ಹರಿಸಿದರೆ ಬೇಸಿಗೆ ಬೆಳೆ ಉಳಿಸಿದಂತಾಗುತ್ತದೆ. ಅತಿ ಶೀಘ್ರದಲ್ಲೇ ಎಲ್ಲಾ ನಾಲೆಗಳಿಗೆ ನೀರು ಹರಿಸುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.