ಭಾಲ್ಕಿ ಪುರಸಭೆ ಕಣದಲ್ಲಿ ಪ್ರಚಾರ ಜೋರು

ಮೂರೂ ಪಕ್ಷಗಳ ನಾಯಕರಿಂದ ಮತಯಾಚನೆ •ಮತದಾರರ ಸೆಳೆಯಲು ಅಭ್ಯರ್ಥಿಗಳ ಯತ್ನ

Team Udayavani, May 27, 2019, 10:44 AM IST

27-May-7

ಭಾಲ್ಕಿ: ಪುರಸಭೆ ಚುನಾವಣೆ ಪ್ರಚಾರದ ವೇಳೆ ಸ್ಥಳೀಯರ ಸಮಸ್ಯೆ ಆಲಿಸಿದ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ.

ಭಾಲ್ಕಿ: ಪಟ್ಟಣದ ಪುರಸಭೆ ಚುನಾವಣೆ ಮೇ 29ರಂದು ನಡೆಯಲಿದ್ದು, ವಿವಿಧ ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಪುರಸಭೆ ಹಾಲಿ, ಮಾಜಿ ಸದಸ್ಯರು ಬಡಾವಣೆಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವತ್ತ ಮುತುವರ್ಜಿ ವಹಿಸುತ್ತಿರುವುದು ವಿಶೇಷವಾಗಿದೆ.

ಪುರಸಭೆಯು ಒಟ್ಟು 27 ಸದಸ್ಯಬಲ ಹೊಂದಿದ್ದು, ಅಧಿಕಾರದ ಗದ್ದುಗೆ ಹಿಡಿಯಲು 14 ಸದಸ್ಯಬಲ ಬೇಕು. ಹೀಗಾಗಿ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಸೇರಿದಂತೆ ಬಿಎಸ್‌ಪಿ ಮತ್ತು ಪಕ್ಷೇತರರ ಮಧ್ಯ ತೀವ್ರ ಪೈಪೋಟಿ ಏರ್ಪಟ್ಟಿದೆ. ಮತದಾರರು ಮಾತ್ರ ಯಾರಿಗೆ ಆಶೀರ್ವಾದ ಮಾಡಲಿದ್ದಾರೆ ಎನ್ನುವುದು ಇನ್ನೂ ನಿಗೂಢ.

ಈಗಾಗಲೇ ಅಭ್ಯರ್ಥಿಗಳು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದು, ವಿವಿಧ ರೀತಿಯಲ್ಲಿ ಪ್ರಚಾರ ನಡೆಸುವ ಮೂಲಕ ಮತದಾರನ ಮನ ಗೆಲ್ಲಲು ಮುಂದಾಗಿದ್ದಾರೆ. ಸುಡುವ ಬಿಸಿಲು ಲೆಕ್ಕಿಸದೇ ಅಭ್ಯರ್ಥಿಗಳು ಮತದಾರರ ಮನೆಗಳಿಗೆ ತೆರಳಿ ಈ ಸಲ ನನ್ನನ್ನೇ ಗೆಲ್ಲಿಸಬೇಕು ಎಂದು ಮತದಾರರ ಮುಂದೆ ಬೇಡಿಕೆ ಇಡುತ್ತಿದ್ದಾರೆ.

ಎಲ್ಲಾ ಪಕ್ಷಗಳ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ, ಪುರಸಭೆ ತಮ್ಮದಾಗಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇದುವರೆಗೆ ಕಾಂಗ್ರೆಸ್‌ ತೆಕ್ಕೆಯಲ್ಲಿದ್ದ ಪುರಸಭೆಯು ಇನ್ನುಮುಂದೆ ಜೆಡಿಎಸ್‌ ಮತ್ತು ಬಿಜೆಪಿ ತಮ್ಮ ಪಾಲಾಗಿಸಿಕೊಳ್ಳಲು ಹೋರಾಟ ನಡೆಸಿವೆ. ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯ ಫಲಿತಾಂಶ ಆನೆಬಲ ತಂದು ಕೊಟ್ಟಿದೆ.

ಪ್ರಚಾರಕ್ಕೆ ಇನ್ನೂ ಎರಡುದಿನ ಮಾತ್ರ ಬಾಕಿ ಇರುವುದರಿಂದ ಎಲ್ಲಾ ಪಕ್ಷದ ಘಟಾನುಘಟಿಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದ್ದಾರೆ. ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಅವರು ಲೋಕಸಭಾ ಚುನಾವಣೆಯ ಸೋಲಿನ ಹತಾಶೆಯಿಂದ ಹೊರಬಂದು, ತಮ್ಮ ಪಕ್ಷದ ಅಭ್ಯರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುತ್ತ, ಸುಡುಬಿಸಿಲು ಲೆಕ್ಕಿಸದೇ ರವಿವಾರ ವಿವಿಧ ಓಣಿಗಳಲ್ಲಿ ಪ್ರಚಾರ ನಡೆಸಿದರು. ಅಲ್ಲದೇ ಅಲ್ಲಿಯ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಮುತುವರ್ಜಿ ವಹಿಸುತ್ತಿರುವುದು ಕಂಡು ಬಂತು.

ಜೆಡಿಎಸ್‌ ಮುಖಂಡ, ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪಾ ಖಾಶೆಂಪೂರ ಅವರನ್ನು ಪ್ರಚಾರ ಸಭೆಗೆ ಕರೆಸಿ, ತಮ್ಮ ಪಕ್ಷದ ಅಭ್ಯರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಪುರಸಭೆ ಚುಕ್ಕಾಣಿ ಹಿಡಿಯುವಲ್ಲಿ ನಾವೇ ಯಶಸ್ವಿಯಾಗುವೆವು ಎಂದು ಮುನ್ನುಗ್ಗುತ್ತಲಿದ್ದಾರೆ.

ಬಿಜೆಪಿ ಅಭ್ಯರ್ಥಿಗಳು ಮೊದಲಿನಿಂದಲೂ ಬಿರುಸಿನಿಂದ ಪ್ರಚಾರ ನಡೆಸುತ್ತಲಿದ್ದು. ಲೋಕಸಭಾ ಚುನಾವಣೆಯ ನಂತರ ತಮ್ಮ ನಾಯಕರ ಜೊತೆಯಲ್ಲಿ ಎಲ್ಲ ವಾರ್ಡ್‌ಗಳಲ್ಲಿ ಮೋದಿ ಸಾಧನೆಯ ಬಗ್ಗೆ ಮೆಲುಕು ಹಾಕುತ್ತಾ ಪ್ರಚಾರಕ್ಕೆ ರಂಗು ತಂದುಕೊಟ್ಟಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.