ಪಠ್ಯಪುಸ್ತಕ ವಿತರಣೆಗೆ ಶಿಕ್ಷಣ ಇಲಾಖೆ ಸಜ್ಜು

•ರಜೆ ಕಳೆದು ಮಕ್ಕಳು ಮರಳಿ ಶಾಲೆಗೆ•ಶಾಲಾ ಪ್ರಾರಂಭೋತ್ಸವದಂದು ಪುಸ್ತಕ ವಿತರಣೆ

Team Udayavani, May 27, 2019, 3:00 PM IST

bg-tdy-3..

ಚಿಕ್ಕೋಡಿ: ಕ್ಷೇತ್ರ ಶಿಕ್ಷಣಾಧಿಕಾರಿ ವಲಯ ವ್ಯಾಪ್ತಿಯಲ್ಲಿ ಹಂಚಿಕೆ ಮಾಡುವ ಪಠ್ಯಪುಸ್ತಕಗಳ ದಾಸ್ತಾನು.

ಚಿಕ್ಕೋಡಿ: ಪ್ರಸಕ್ತ ವರ್ಷದ ಬೇಸಿಗೆ ರಜೆ ಮುಕ್ತಾಯವಾಗಿ ಇದೇ ಮೇ. 29ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪ್ರಾರಂಭವಾಗಲಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಂಟು ವಲಯಗಳ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸಲ್ಲಿಸಿದ ಪಠ್ಯಪುಸ್ತಕಗಳ ಬೇಡಿಕೆಯ ಶೇ.80.03ರಷ್ಟು ಸರಬರಾಜು ಆಗಿದ್ದು, ಶಾಲಾ ಪ್ರಾರಂಭೋತ್ಸವದ ದಿನವೇ ಮಕ್ಕಳಿಗೆ ಪಠ್ಯಪುಸ್ತಕಗಳ ವಿತರಣೆಗೆ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಆಯಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲೆಗಳಿಂದ ಎಸ್‌ಎಟಿಎಸ್‌ ಅನ್ವಯ ಬೇಡಿಕೆ ಸಲ್ಲಿಸಲಾದ ಪ್ರಮಾಣದಲ್ಲಿ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಲಾಗಿದ್ದು, ಇನ್ನು ಕೇವಲ ಶೇ. 20ರಷ್ಟು ಪಠ್ಯಪುಸ್ತಕಗಳ ಸರಬರಾಜು ಆಗಬೇಕಾಗಿದೆ. ಶಾಲೆ ಪ್ರಾರಂಭವಾದ ಒಂದು ವಾರದೊಳಗೆ ಎಲ್ಲ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲು ಶಿಕ್ಷಣ ಇಲಾಖೆ ಸೂಕ್ತಕ್ರಮ ಕೈಗೊಂಡಿದೆ.ಪಠ್ಯಪುಸ್ತಕ ಪೂರೈಕೆ ಎಲ್ಲೆಲ್ಲಿ, ಎಷ್ಟು: ಅಥಣಿ ವಲಯದಿಂದ 5,21,384 ಪಠ್ಯಪುಸ್ತಕಗಳ ಬೇಡಿಕೆ ಸಲ್ಲಿಸಲಾಗಿದ್ದು, 4,38,718 ಪುಸ್ತಕಗಳು ಸರಬರಾಜು ಆಗಿವೆ. ಚಿಕ್ಕೋಡಿ ವಲಯದಿಂದ 4,01,820 ಪಠ್ಯಪುಸ್ತಕಗಳ ಬೇಡಿಕೆ ಪೈಕಿ 3,54,661 ಸರಬರಾಜು ಆಗಿವೆ. ಗೋಕಾಕ ವಲಯದಿಂದ ಸಲ್ಲಿಸಲಾದ 3,78,661 ಪಠ್ಯಪುಸ್ತಕಗಳ ಬೇಡಿಕೆ ಪೈಕಿ 3,22,357 ಪುಸ್ತಕಗಳು ಸರಬರಾಜು ಆಗಿವೆ. ಹುಕ್ಕೇರಿ ವಲಯದಲ್ಲಿ ಸಲ್ಲಿಸಲಾದ 4,98,661 ಬೇಡಿಕೆ ಪೈಕಿ 4,37,249 ಪುಸ್ತಕಗಳು ಸರಬರಾಜು ಆಗಿವೆ. ಕಾಗವಾಡ ವಲಯದಲ್ಲಿ 1,77,705 ಪಠ್ಯಪುಸ್ತಕಗಳ ಬೇಡಿಕೆ ಪೈಕಿ 1,44,014 ಪುಸ್ತಕಗಳು ಸರಬರಾಜು ಆಗಿವೆ.

ಮೂಡಲಗಿ ವಲಯದಿಂದ 5,39,489 ಪಠ್ಯಪುಸ್ತಕಗಳ ಬೇಡಿಕೆ ಪೈಕಿ 4,81,808 ಪಠ್ಯಪುಸ್ತಕಗಳು ಸರಬರಾಜು ಆಗಿವೆ. ನಿಪ್ಪಾಣಿ ವಲಯದಿಂದ 3,20,370 ಪಠ್ಯಪುಸ್ತಕಗಳ ಬೇಡಿಕೆ ಸಲ್ಲಿಸಲಾಗಿದ್ದು, 2,43,907 ಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ರಾಯಬಾಗ ವಲಯದಿಂದ 5,45,622 ಪಠ್ಯಪುಸ್ತಕಗಳ ಬೇಡಿಕೆ ಪೈಕಿ 4,78,809 ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಎಂಟೂ ವಲಯಗಳಿಂದ ಸಲ್ಲಿಸಲಾದ ಒಟ್ಟಾರೆ 33,83,712 ಪಠ್ಯಪುಸ್ತಕಗಳ ಪೈಕಿ 29,01,523 ಪಠ್ಯಪುಸ್ತಕಗಳು ಸರಬರಾಜು ಆಗಿದ್ದು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 27,07,845 ಪಠ್ಯಪುಸ್ತಕಗಳನ್ನು ಒದಗಿಸಲಾಗಿದೆ. ಸರಾಸರಿ 80.03ರಷ್ಟು ಪಠ್ಯಪುಸ್ತಕಗಳು ಸರಬರಾಜು ಆಗಿವೆ.

ಶಾಲಾ ಪ್ರಾರಂಭೋತ್ಸವದಂದೇ ಪುಸ್ತಕಗಳ ವಿತರಣೆ: ಮೇ 29ರಂದು ಶಿಕ್ಷಣ ಇಲಾಖೆ ವತಿಯಿಂದ ಶಾಲೆ ಪ್ರಾರಂಭೋತ್ಸವ ನಡೆಯಲಿದ್ದು, ಅಂದು ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸುವ ನಿಟ್ಟಿನಲ್ಲಿ ಆಯಾ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಸರಬರಾಜು ಮಾಡುತ್ತಿದೆ. ಗ್ರಾಮಗಳಲ್ಲಿ ಶಾಲಾ ಬಂಡಿ ಸಂಚರಿಸಲಿದ್ದು, ಮಕ್ಕಳಿಗೆ ಸಿಹಿ ಊಟ ನೀಡಲಾಗುವುದು. ಸ್ಥಳೀಯ ಜನಪ್ರತಿನಿಧಿಗಳಿಂದ ಮಕ್ಕಳಿಗೆ ಪಠ್ಯಪುಸ್ತಕ ಮತ್ತಿತರ ಸರ್ಕಾರದ ಸವಲತ್ತುಗಳನ್ನು ವಿತರಿಸಲಾಗುವುದು. ಒಂದು ವಾರದಲ್ಲಿ ಸಮವಸ್ತ್ರಗಳೂ ಪೂರೈಕೆಯಾಗಲಿದ್ದು, ಅವುಗಳನ್ನೂ ಮಕ್ಕಳಿಗೆ ವಿತರಿಸಲು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯವಸ್ಥೆ ಕಲ್ಪಿಸಿಕೊಂಡಿದೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.