ರಾಹುಲ್‌ ಗಾಂಧಿ ರಾಜೀನಾಮೆ ನೀಡಿದರೆ ಕಾಂಗ್ರೆಸ್‌ಗೆ ಸಚಿನ್‌ ಪೈಲಟ್‌ ಗುಡ್‌ಬೈ ?


Team Udayavani, May 29, 2019, 11:15 AM IST

Rahul-Gehlot-Sachin-730

ಜೈಪುರ : ಕಾಂಗ್ರೆಸ್‌ ಅಧ್ಯಕ್ಷರಾಗಿ ರಾಹುಲ್‌ ಗಾಂಧಿಯವರ ಮುಂದುವರಿಕೆ ಅನಿಶ್ಚಿತವಾಗಿರುವ ನಡುವೆಯೇ, ರಾಜಸ್ಥಾನ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ,  ಸಚಿನ್‌ ಪೈಲಟ್‌ ತಮ್ಮ ಶಾಸಕ ತಂಡದೊಂದಿಗೆ ಕಾಂಗ್ರೆಸ್‌ ತೊರೆಯುವರೆಂಬ ಊಹಾಪೋಹಗಳು ಈಗ ಗರಿಗೆದರಿವೆ.

ಸಚಿನ್‌ ಪೈಲಟ್‌ 2014ರಲ್ಲಿ ರಾಜಸ್ಥಾನ ಕಾಂಗ್ರೆಸ್‌ ಅಧ್ಯಕ್ಷರಾಗುವಲ್ಲಿ ರಾಹುಲ್‌ ಗಾಂಧಿ ಕಾರಣರಾಗಿದ್ದರು. ಕಳೆದ ವರ್ಷದ ವಿಧಾನಸಭೆ ಚುನಾವಣೆಯ ಬಳಿಕ ಪೈಲಟ್‌ ಅವರನ್ನು ಅಶೋಕ್‌ ಗೆಹಲೋಟ್‌ ಅವರ ಸರಕಾರದಲ್ಲಿ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು.

ಈಗ ಕಾಂಗ್ರೆಸ್‌ ಅಧ್ಯಕ್ಷರೇ ತಮ್ಮ ಪದಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಸಚಿನ್‌ ಪೈಲಟ್‌ ಭವಿಷ್ಯ ಅನಿಶ್ಚಿತತೆಯಲ್ಲಿ ತೂಗಾಡುತ್ತಿದೆ ಎಂದು ಮೂಲಗಳು ಹೇಳಿವೆ.

ಒಂದೊಮ್ಮೆ ಸಚಿನ್‌ ಅವರ ನೆಲೆಯನ್ನು ಕಾಂಗ್ರೆಸ್‌ ಬದಲಾಯಿಸಲು ಮುಂದಾದಲ್ಲಿ, ಸಚಿನ್‌ ತನ್ನ ಶಾಸಕರ ತಂಡದೊಂದಿಗೆಕಾಂಗ್ರೆಸ್‌ ತೊರೆದು, ಪಕ್ಷೇತರರು ಮತ್ತು ಕೆಲವು ಬಿಜೆಪಿ ಶಾಸಕರ ಬೆಂಬಲದೊಂದಿಗೆ ರಾಜಸ್ಥಾನದಲ್ಲಿ ಹೊಸ ಸರಕಾರ ರಚಿಸುವ ದಾವಾ ಮಂಡಿಸಲಿದ್ದಾರೆ ಎಂಬ ಊಹಾಪೋಹ ರಾಜಕೀಯ ವಲಯಗಳಲ್ಲಿ ಕೇಳಿ ಬರುತ್ತಿದೆ.

200 ಸದಸ್ಯ ಬಲ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ 100 ಸದಸ್ಯರನ್ನು ಹೊಂದಿದೆ. ಉಳಿದಂತೆ ಬಿಜೆಪಿ 73, ಬಿಎಸ್‌ಪಿ 6, ಆರ್‌ಎಲ್‌ಪಿ 3, ಸಿಪಿಎಂ 2, ಬಿಟಿಪಿ 2 ಮತ್ತು ಆರ್‌ಎಲ್‌ಡಿ 1 ಹಾಗೂ 13 ಪಕ್ಷೇತರ ಸದಸ್ಯರು ಇದ್ದಾರೆ.

ಪ್ರಕೃತ ಗೆಹಲೋಟ್‌ ಸರಕಾರಕ್ಕೆ 6 ಬಿಎಸ್‌ಪಿ ಶಾಸಕರು ಮತ್ತು 12 ಪಕ್ಷೇತರರ ಬೆಂಬಲವಿದೆ. ಹಾಗಿದ್ದರೂ ಅದೀಗ ಸಂಕಷ್ಟದಲ್ಲಿದೆ.

ಕಳೆದ ಸೋಮವಾರ ಬಿಎಸ್‌ಪಿ ಶಾಸಕರು ರಾಜ್ಯಪಾಲ ಕಲ್ಯಾಣ್‌ ಸಿಂಗ್‌ ಅವರನ್ನು ಭೇಟಿಯಾಗುವವರಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರ ಭೇಟಿ ರದ್ದಾಗಿತ್ತು.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

rape

Women; 16 ವರ್ಷಗಳಿಂದ ಮನೆಯಲ್ಲೇ ಮಹಿಳೆ ಬಂಧನ: ರಕ್ಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.