ಸಾಧನೆ ಅಭಿನಂದನೀಯ: ಶಾಸಕ ರಾಜೇಶ್‌ ನಾೖಕ್‌

ದಡ್ಡಲಕಾಡು ಶಾಲಾ ಪ್ರಾರಂಭೋತ್ಸವ

Team Udayavani, May 30, 2019, 6:00 AM IST

x-21

ಬಂಟ್ವಾಳ: ದಡ್ಡಲಕಾಡು ಸರಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ತೆಂಗಿನ ಗಿಡಕ್ಕೆ ನೀರೆರೆಯುವ ಮೂಲಕ ಮೇ 29ರಂದು ಶಾಲಾ ಪ್ರಾರಂಭೋತ್ಸವ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಅವರು ಮಾತನಾಡಿ, ಮುಚ್ಚುವ ಹಂತದಲ್ಲಿದ್ದ ಶಾಲೆಯನ್ನು ಪ್ರಕಾಶ್‌ ಅಂಚನ್‌ ನೇತೃತ್ವದಲ್ಲಿ ಉಳಿಸುವ ಪ್ರಯತ್ನ ನಡೆದಿದೆ. ಇಂದು ಈ ಶಾಲೆಯಲ್ಲಿ ಏಳುನೂರು ಮಂದಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ ಎಂಬುದು ವಿಶಿಷ್ಟ ಸಾಧನೆಯಾಗಿದ್ದು, ಅಭಿನಂದ ನೀಯ. ಆಂಗ್ಲ ಮಾಧ್ಯಮ ಕಲಿಕೆಗೆ ಸರಕಾರವೇ ಅವಕಾಶ ನೀಡಿದ್ದು, ದಡ್ಡಲ ಕಾಡು ಶಾಲೆಗೂ ಅನುಮತಿ ಸಿಕ್ಕಿರುವುದು ಸಂತೋಷ ನೀಡಿದೆ ಎಂದರು.

ಪ್ರೌಢಶಾಲೆ: ಭರವಸೆ
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರೌಢಶಾಲೆ ಮಂಜೂರುಗೊಳಿಸುವ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶಿವಪ್ರಕಾಶ್‌ ಮಾತನಾಡಿ, ನಿರಂತರ ಹೋರಾಟ ಹಾಗೂ ಶ್ರಮದ ಫಲವಾಗಿ ಈ ಶಾಲೆ ಈ ಎತ್ತರಕ್ಕೆ ಬೆಳೆದು ನಿಂತಿದೆ. ಎಲ್ಲ ಅವಕಾಶ ಹಾಗೂ ಸೌಲಭ್ಯಗಳು ಈ ಶಾಲೆಯಲ್ಲಿದ್ದು, ಅದನ್ನು ವಿದ್ಯಾರ್ಥಿಗಳು ಹಾಗೂ ಹೆತ್ತವರು ಸದು ಪಯೋಗಪಡಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಶಾಲಾ ದತ್ತು ಸಂಸ್ಥೆಯ ಅಧ್ಯಕ್ಷ ಪ್ರಕಾಶ್‌ ಅಂಚನ್‌, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಪಂಜಿಕಲ್ಲು ಗ್ರಾ.ಪಂ. ಸದಸ್ಯರಾದ ಪೂವಪ್ಪ ಮೆಂಡನ್‌, ರೂಪಶ್ರೀ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಮೌರೀಸ್‌ ಡಿ’ಸೋಜಾ ಸ್ವಾಗತಿಸಿದರು. ಸಹ ಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್‌ ನಿರೂಪಿಸಿ, ವಿದ್ಯಾರ್ಥಿಗಳ ಪಾಲಕರಿಗೆ ಪೂರಕ ಮಾಹಿತಿ ನೀಡಿದರು. ಪುರುಷೋತ್ತಮ ಅಂಚನ್‌, ನವೀನ್‌ ಸೇಸಗುರಿ, ಬಾಲಕೃಷ್ಣ ಜಿ., ಅಶ್ವತ್ಥ್ ಗಾಣಿಗ ಮತ್ತಿತರರಿದ್ದರು.

ಇದೇ ಸಂದರ್ಭ ಶಾಸಕರು ಶಾಲಾ ಹೊಸ ಬಸ್ಸಿಗೆ ಚಾಲನೆ ನೀಡಿ, ಕೀಲಿ ಕೈಯನ್ನು ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಅವರ ಜಿ.ಪಂ. ಅನುದಾನದಡಿ ಮಂಜೂರುಗೊಂಡ ಪೀಠೊಪಕರಣಗಳನ್ನು ಶಾಲೆಗೆ ಹಸ್ತಾಂತರಿಸಲಾುತು. ಬಂಟ್ವಾಳದ ಅಂಬಿಕಾ ಮೆಟಲ್ನಿಂದ ಉಚಿತವಾಗಿ ಕೊಡಮಾಡಿದ ಸ್ಟೀಲ್ ಬಟ್ಟಲನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಒಂದನೇ ತರಗತಿಗೆ ಸೇರಿದ 125 ವಿದ್ಯಾರ್ಥಿಗಳು ಸಹಿತ ಪ್ರಾಥಮಿಕ ಪೂರ್ವ ಹಾಗೂ ಇತರ ತರಗತಿಗಳಿಗೆ ದಾಖಲಾದ ಒಟ್ಟು 270 ಮಂದಿ ಹೊಸ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿಕೊಳ್ಳಲಾಯಿತು. ಶಾಲೆಯನ್ನು ತಳಿರು ತೋರಣ ಹಾಗೂ ಬಂಟಿಂಗ್ಸ್‌ ಗಳಿಂದ ಸಿಂಗರಿಸಲಾಗಿತ್ತು. ಹೊಸ ವಿದ್ಯಾರ್ಥಿಗಳನ್ನು ಶಾಲಾ ಅಂಗಣದಿಂದ ವಾದ್ಯ ಹಾಗೂ ಬ್ಯಾಂಡ್‌ಗಳ ಮೂಲಕ ಮರೆವಣಿಗೆಯಲ್ಲಿ ಕರೆ ತರಲಾಯಿತು. ಈ ವರ್ಷ ಒಂದನೇ ತರಗತಿಗೆ 125 ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ. ಎಲ್ಕೆಜಿ, ಯುಕೆಜಿ ಸೇರಿ ಒಟ್ಟು 270 ಮಂದಿ ಹೊಸ ವಿದ್ಯಾರ್ಥಿಗಳು ಶಾಲೆಗೆ ಸೇರ್ಪಡೆಗೊಂಡಿದ್ದು, ವಿದ್ಯಾರ್ಥಿಳ ಒಟ್ಟು ಸಂಖ್ಯೆ 700 ಗಡಿ ದಾಟಿದೆ. ಮಕ್ಕಳ ದಾಖಲಾತಿಯಲ್ಲಿ ಏರಿಕೆಯಾಗಿರುವುದರಿಂದ ಒಂದನೇ ತರಗತಿಯಲ್ಲಿ ಎ, ಬಿ, ಸಿ ಎನ್ನುವ ಮೂರು ವಿಭಾಗಗಳನ್ನು ತೆರೆಯಲಾಗಿದೆ.

270 ವಿದ್ಯಾರ್ಥಿಗಳ ಸೇರ್ಪಡೆ
ಒಂದನೇ ತರಗತಿಗೆ ಸೇರಿದ 125 ವಿದ್ಯಾರ್ಥಿಗಳು ಸಹಿತ ಪ್ರಾಥಮಿಕ ಪೂರ್ವ ಹಾಗೂ ಇತರ ತರಗತಿಗಳಿಗೆ ದಾಖಲಾದ ಒಟ್ಟು 270 ಮಂದಿ ಹೊಸ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿಕೊಳ್ಳಲಾಯಿತು. ಶಾಲೆಯನ್ನು ತಳಿರು ತೋರಣ ಹಾಗೂ ಬಂಟಿಂಗ್ಸ್‌ ಗಳಿಂದ ಸಿಂಗರಿಸಲಾಗಿತ್ತು. ಹೊಸ ವಿದ್ಯಾರ್ಥಿಗಳನ್ನು ಶಾಲಾ ಅಂಗಣದಿಂದ ವಾದ್ಯ ಹಾಗೂ ಬ್ಯಾಂಡ್‌ಗಳ ಮೂಲಕ ಮರೆವಣಿಗೆಯಲ್ಲಿ ಕರೆ ತರಲಾಯಿತು. ಈ ವರ್ಷ ಒಂದನೇ ತರಗತಿಗೆ 125 ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ. ಎಲ್ಕೆಜಿ, ಯುಕೆಜಿ ಸೇರಿ ಒಟ್ಟು 270 ಮಂದಿ ಹೊಸ ವಿದ್ಯಾರ್ಥಿಗಳು ಶಾಲೆಗೆ ಸೇರ್ಪಡೆಗೊಂಡಿದ್ದು, ವಿದ್ಯಾರ್ಥಿಳ ಒಟ್ಟು ಸಂಖ್ಯೆ 700 ಗಡಿ ದಾಟಿದೆ. ಮಕ್ಕಳ ದಾಖಲಾತಿಯಲ್ಲಿ ಏರಿಕೆಯಾಗಿರುವುದರಿಂದ ಒಂದನೇ ತರಗತಿಯಲ್ಲಿ ಎ, ಬಿ, ಸಿ ಎನ್ನುವ ಮೂರು ವಿಭಾಗಗಳನ್ನು ತೆರೆಯಲಾಗಿದೆ.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.