ನಡುಗಡ್ಡೆ ಪ್ರದೇಶ ಸ್ಥಳಾಂತರಕ್ಕೆ ಆಗ್ರಹಿಸಿ ಮನವಿ


Team Udayavani, May 31, 2019, 2:35 PM IST

bagalkote-tdy-4..

ಬಾಗಲಕೋಟೆ: ಕೃಷ್ಣಾ ಭಾಗ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕ ವಿ. ಶಂಕರ ಅವರಿಗೆ -ಉತ್ತರ ಕರ್ನಾಟಕ ಹೋರಾಟ ಸಮಿತಿಯ ಮುಖಂಡರು ಮನವಿ ಸಲ್ಲಿಸಿದರು.

ಬಾಗಲಕೋಟೆ: ಆಲಮಟ್ಟಿ ಜಲಾಶಯವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಿದಾಗ ನಡುಗಡ್ಡೆಯಾಗುವ ನಗರದ ಪ್ರದೇಶ ಸ್ಥಳಾಂತರಕ್ಕೆ ಹಿಂದೆ ಸರ್ಕಾರ ಕ್ರಮ ಕೈಗೊಂಡಿತ್ತು. ಆದರೆ, ಈ ಪ್ರಕ್ರಿಯೆ ಸದ್ಯಕ್ಕೆ ಕೈಬಿಟ್ಟಿದ್ದು, ಕೂಡಲೇ ನಡುಗಡ್ಡೆ ಪ್ರದೇಶ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ನಗರದ ಪ್ರಮುಖರು ಒತ್ತಾಯಿಸಿದ್ದಾರೆ.

ಈಚೆಗೆ ನಗರಕ್ಕೆ ಆಗಮಿಸಿದ್ದ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಶಂಕರ ಅವರಿಗೆ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ – ಉತ್ತರ ಕರ್ನಾಟಕ ಹೋರಾಟ ಸಮಿತಿಯ ಮುಖಂಡ ಎ.ಎ. ದಂಡಿಯಾ, ಬಿಟಿಡಿಎ ಮಾಜಿ ಸದಸ್ಯ ಜಿ.ಎಂ. ಟಂಕಸಾಲಿ, ಪ್ರಮುಖರಾದ ಸುರೇಂದ್ರ ಸಂಗಮ, ಇಸಾಕ ದಂಡಿಯಾ ಮುಂತಾದವರು ಲಿಖೀತ ಮನವಿ ಸಲ್ಲಿಸಿದರು.

ನಗರದ ವಾಡ್‌‌ರ್ ನಂ. 1, 2, 3, 6, 7 ಹಾಗೂ 9ರ ವ್ಯಾಪ್ತಿಯ ಸುಮಾರು 855 ಕಟ್ಟಡಗಳು, ನಡುಗಡ್ಡೆಯಾಗಲಿವೆ. ಈ ಪ್ರದೇಶ ಮುಳುಗಡೆ ವ್ಯಾಪ್ತಿಗೆ ಬರುವುದಿಲ್ಲ. ಆಲಮಟ್ಟಿ ಜಲಾಶಯ ಎತ್ತರಿಸಿದಾಗ ಇಲ್ಲಿ 855 ಮನೆಗಳೂ ನಡುಗಡ್ಡೆಯಾಗಿ, ನಗರದ ಸಂಪರ್ಕ ಕಳೆದುಕೊಳ್ಳಲಿವೆ. ಆದ್ದರಿಂದ ಹಿಂದೆ ಸರ್ಕಾರ, ಈ ಮನೆಗಳನ್ನು ಮುಳುಗಡೆ ಪ್ರದೇಶವೆಂದು ಘೋಷಿಸಿ, ಸಮೀಕ್ಷೆ ಕಾರ್ಯ ಆರಂಭಿಸಿತ್ತು. ಆದರೆ, ಈಗ ಅದನ್ನು ನಿಲ್ಲಿಸಲಾಗಿದ ಎಂದು ಕೆಬಿಜೆಎನ್‌ಎಲ್ ಎಂಡಿ ಗಮನಕ್ಕೆ ತಂದರು.

ಹಿಂದಿನ ಸರ್ಕಾರ, 855 ಮನೆಗಳ ಸರ್ವೆ ನಡೆಸಿ, ಬಳಿಕ ಸ್ವಾಧೀನ ಪ್ರಕ್ರಿಯೆ ಆರಂಭಿಸಿತ್ತು. ಈ ಕುರಿತು 855 ಮನೆಗಳ ಮಾಲಿಕರು, ಬಿಟಿಡಿಎಗೆ ಅಗತ್ಯ ದಾಖಲೆ ಸಲ್ಲಿಸಿದ್ದಾರೆ. ಆದರೂ, ಬಿಟಿಡಿಎ ಮುಂದಿನ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಮನವಿ ಆಲಿಸಿದ ಕೆಬಿಜೆಎನ್‌ಎಲ್ ಎಂಡಿ ವಿ.ಶಂಕರ ಮಾತನಾಡಿ, ನಡುಗಡ್ಡೆಯಾಗುವ ಪ್ರದೇಶ ಹಾಗೂ ಇಲ್ಲಿನ ಮುಳುಗಡೆ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಲು ಪ್ರತ್ಯೇಕವಾಗಿ ಆಗಮಿಸುತ್ತೇನೆ. ಅಲ್ಲದೇ ನಡುಗಡ್ಡೆ ಪ್ರದೇಶದ ಸ್ಥಳಾಂತರ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಿಟಿಡಿಎ ಮುಖ್ಯ ಇಂಜಿನಿಯರ್‌ ಅಶೋಕ ವಾಸನದ, ಎಇಇ ಮೋಹನ ಹಲಗತ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.