ಕೊಡೇರಿ: ಅವಧಿ ಮುಗಿದರೂ ಮುಗಿಯದ ಬ್ರೇಕ್‌ ವಾಟರ್‌ ಕಾಮಗಾರಿ

ಅರ್ಧದಷ್ಟೂ ಮುಗಿಯದ ಕಾಮಗಾರಿ ; ಈ ವರ್ಷದ ಜನವರಿಗೆ ಅಂತಿಮ ಗಡುವು

Team Udayavani, Jun 1, 2019, 6:00 AM IST

3105KDPP2

ಕೊಡೇರಿ ಬಂದರಿನ ದಕ್ಷಿಣ ಭಾಗದಲ್ಲಿ ನಡೆಯುತ್ತಿರುವ ಬ್ರೇಕ್‌ ವಾಟರ್‌ ಕಾಮಗಾರಿ.

ಕಿರಿಮಂಜೇಶ್ವರ: ಕೊಡೇರಿ ಮೀನುಗಾರಿಕಾ ಬಂದರಿನಲ್ಲಿ ಕಡಲ್ಕೊರೆತ ತಡೆಗಾಗಿ 33 ಕೋ.ರೂ. ವೆಚ್ಚದಲ್ಲಿ 2016 ರಲ್ಲಿ ಆರಂಭಗೊಂಡ ಬ್ರೇಕ್‌ ವಾಟರ್‌ ವಿಸ್ತರಣಾ ಕಾಮಗಾರಿಯ ಗಡುವು ಈ ವರ್ಷದ ಜನವರಿಗೆ ಅಂತ್ಯವಾದರೂ, ಕಾಮಗಾರಿ ಮಾತ್ರ ಇನ್ನು ಅರ್ಧದಷ್ಟು ಕೂಡ ಮುಗಿದಿಲ್ಲ.

ಕೊಡೇರಿಯಲ್ಲಿ ಬಂದರು ಮತ್ತು ಮೀನುಗಾರಿಕಾ ಇಲಾಖೆಯಿಂದ ಬ್ರೇಕ್‌ ವಾಟರ್‌ ಕಾಮಗಾರಿಗೆ 33 ಕೋ.ರೂ. ವೆಚ್ಚದ ಯೋಜನೆ ಮಂಜೂರಾಗಿದ್ದು, 2016 ರ ಡಿ. 22 ರಂದು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಇಲ್ಲಿನ ಬಂದರಿನ ದಕ್ಷಿಣ ಭಾಗ ಹಾಗೂ ಉತ್ತರ ಭಾಗದಲ್ಲಿ ತಲಾ 200 ಮೀಟರ್‌ ಉದ್ದದ ಬ್ರೇಕ್‌ ವಾಟರ್‌ ನಿರ್ಮಾಣ ಯೋಜನೆಯಿದೆ.

ಆದರೆ ಈಗ ದಕ್ಷಿಣ ಭಾಗದ ಕಾಮಗಾರಿ ಮಾತ್ರ ನಡೆಯುತ್ತಿದ್ದು, ಅದು ಕೂಡ 80- 100 ಮೀ. ಅಷ್ಟೇ ಮುಗಿದಿದೆ. ಅಂದರೆ ಈ ವರ್ಷದ ಜನವರಿಗೆ ಕಾಮಗಾರಿ ಮುಗಿಸಲು ಗಡುವು ನೀಡಿದರೂ ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿ ಅರ್ಧ ದಷ್ಟೂ ಕಾಮಗಾರಿ ಮುಗಿಸಿಲ್ಲ ಎನ್ನುವ ಆರೋಪ ಇಲ್ಲಿನ ಮೀನುಗಾರರದ್ದು.

ಹೂಳೆತ್ತಿಲ್ಲ
ಈ 33 ಕೋ.ರೂ. ಅನುದಾನದಲ್ಲಿ ಬಂದರಿನ ಎರಡೂ ಬದಿಯ ಬ್ರೇಕ್‌ ವಾಟರ್‌ ಮಧ್ಯದಲ್ಲಿರುವ ಅಳಿವೆ ಭಾಗದಲ್ಲಿ ತುಂಬಿರುವ ಹೂಳನ್ನು ಕೂಡ ತೆಗೆಯಬೇಕು ಎನ್ನುವ ಕರಾರು ಕೂಡ ಆಗಿದೆ. ಆದರೆ ಈವರೆಗೆ ಹೂಳು ತೆಗೆಯಲು ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆದಾರರು ಮುಂದಾಗಿಲ್ಲ.

ಮೀನುಗಾರರಿಗೆ ಸಮಸ್ಯೆ
ಬ್ರೇಕ್‌ ವಾಟರ್‌ ಕಾಮಗಾರಿ ಮುಗಿಯದೇ ಇರುವುದರಿಂದ, ಅದಲ್ಲದೆ ಅಳಿವೆ ಭಾಗದಲ್ಲಿ ತುಂಬಿರುವ ಹೂಳನ್ನು ಕೂಡ ತೆಗೆಯದ ಕಾರಣ, ಮೀನುಗಾರರು ಸಮಸ್ಯೆ ಎದುರಿಸಲಿದ್ದಾರೆ. ಕೊಡೇರಿಯಲ್ಲಿ 9-10 ಮಾಟು ಬಲೆ ಜೋಡಿ, 100 ಕ್ಕೂ ಮಿಕ್ಕಿ ದೋಣಿಗಳಿದ್ದು, ಸುಮಾರು 400 – 500 ಮೀನುಗಾರರು ಇಲ್ಲಿದ್ದಾರೆ. ಇದು ಸಹಜ ಬಂದರು ಆಗಿರುವುದರಿಂದ ಉಪ್ಪುಂದ ಭಾಗದವರು ಇಲ್ಲಿಗೆ ಬರುತ್ತಾರೆ. ಇವರಿಗೆಲ್ಲ ಮುಂದಿನ ಮೀನುಗಾರಿಕಾ ಋತುವಿನಲ್ಲಿ ಸಮಸ್ಯೆಯಾಗಲಿದೆ.

ನೋಟಿಸ್‌ ಕೊಟ್ಟಿದ್ದೇವೆ

ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿಯ ಕಾಮಗಾರಿ ವಿಳಂಬವಾಗುತ್ತಿರುವ ಕುರಿತು ಗಮನದಲ್ಲಿದ್ದು, ಈ ಬಗ್ಗೆ ನಾವು ವಿಸ್ತೃತವಾದ ವರದಿ ತಯಾರಿಸಿ, ಅದನ್ನು ಮೇಲಾಧಿಕಾರಿಗಳಿಗೆ ಕಳುಹಿಸಿದ್ದೇವೆ. ಮೀನುಗಾರರಿಗೆ ಆಗುತ್ತಿರುವ ತೊಂದರೆ ಬಗ್ಗೆಯೂ ಇದರಲ್ಲಿ ಪ್ರಸ್ತಾಪಿಸಲಾಗಿದೆ. ಇದರ ಜತೆಗೆ ಕಾಮಗಾರಿ ವಹಿಸಿಕೊಂಡವರಿಗೂ ನೋಟಿಸ್‌ ನೀಡಲಾಗಿದೆ.
-ಉದಯ ಕುಮಾರ್‌, ಎಇಇ, ಬಂದರು ಮತ್ತು ಮೀನುಗಾರಿಕಾ ಇಲಾಖೆ ಉಡುಪಿ

ದೂರು ನೀಡಿದರೂ ಪ್ರಯೋಜನವಿಲ್ಲ

ಬ್ರೇಕ್‌ ವಾಟರ್‌ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ನಾವು ಹಲವು ಬಾರಿ ಸಂಬಂಧಪಟ್ಟವರಿಗೆ ದೂರು ನೀಡಿದರೂ ಪ್ರಯೋಜನವಿಲ್ಲ. ಅವಧಿ ಮುಗಿದಿದೆ. ಇನ್ನು ಕೂಡ ಸ್ವಲ್ಪವೂ ಕಾಮಗಾರಿ ಆಗಿಲ್ಲ. ಒಂದು ಭಾಗದಲ್ಲಿ ಮಾತ್ರ ಕಾಮಗಾರಿ ಆಗಿದ್ದು, ಮತ್ತೂಂದು ಕಡೆ ಹಾಗೆಯೇ ಇದೆ. ಗುತ್ತಿಗೆ ವಹಿಸಿಕೊಂಡವರಿಗೆ ಕೇಳಿದರೆ ಎಲ್ಲ ಅನುದಾನ ಸಿಕ್ಕಿಲ್ಲ ಅನ್ನುತ್ತಾರೆ. ಅಧಿಕಾರಿಗಳಿಗೆ ಕೇಳಿದರೆ ಅನುದಾನ ಎಲ್ಲ ಮಂಜೂರಾಗಿದೆ ಎನ್ನುತ್ತಾರೆ.
-ಗೋಪಾಲ್ ಕೊಡೇರಿ, ಮೀನುಗಾರರು
-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.