![Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ](https://www.udayavani.com/wp-content/uploads/2024/12/gold-3-415x240.jpg)
ಬಿಜೆಪಿ ಗೆಲುವಿನ ಹಿಂದೆ ಇವಿಎಂ: ದಿನೇಶ್ ಆರೋಪ
Team Udayavani, Jun 1, 2019, 3:06 AM IST
![dinesh](https://www.udayavani.com/wp-content/uploads/2019/06/dinesh-517x465.jpg)
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಪ್ರಥಮ ಸ್ಥಾನ ಬಂದಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಬಂದಿರುವ ಫಲಿತಾಂಶ ನೋಡಿದರೆ ಇವಿಎಂಗಳ ಮೇಲೆ ಅನುಮಾನ ಮೂಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ತನಿಖೆಯಾಗಬೇಕೆಂದು ಟ್ವೀಟ್ ಕೂಡ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವಿಎಂಗಳಲ್ಲಿ ತೋರಿಸುತ್ತಿರುವ ಅಂಕಿ ಸಂಖ್ಯೆಗಳಲ್ಲಿ ವ್ಯತ್ಯಾಸ ಕಾಣಿಸುತ್ತಿದೆ. 15 ದಿನದ ಹಿಂದೆ ಆಗಿರುವ ಮತದಾನಕ್ಕೂ, ಈಗ ಆಗಿರುವ ಮತದಾನಕ್ಕೂ ವ್ಯತ್ಯಾಸ ಇದೆ ಎಂದರೆ, ಈ ಬಗ್ಗೆ ಪರಿಶೀಲನೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆ ಫಲಿತಾಂಶ ನೋಡಿ ನಮಗೆ ಆಶ್ಚರ್ಯವಾಗಿತ್ತು. ಈ ಫಲಿತಾಂಶ ಮೈತ್ರಿ ಪಕ್ಷಗಳಿಗೆ ಹೆಚ್ಚು ಸ್ಫೂರ್ತಿದಾಯಕವಾಗಿ ಕೆಲಸ ಮಾಡಲು ಅನುಕೂಲವಾಗುವಂತೆ ಮಾಡಿದೆ. ಮಂಗಳೂರಿನ ಮೂಡಬಿದರೆಯಲ್ಲಿ ಬಿಜೆಪಿ ನಮಗಿಂತ ಒಂದು ಸ್ಥಾನ ಹೆಚ್ಚು ಗೆದ್ದಿದೆ.
ಮುಲ್ಕಿಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ. ಇದನ್ನು ನೋಡಿದರೆ, ಇವಿಎಂಗಳನ್ನು ಮ್ಯಾನೇಜ್ ಮಾಡಲಾಗುತ್ತದೆಯೇ ಎಂಬ ಬಗ್ಗೆ ಅನುಮಾನ ಮೂಡುತ್ತದೆ. ಇದನ್ನು ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು ಎಂದರು.
ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ಗೆ ಸ್ವಂತ ಬಲವಿದ್ದರೆ ಅಧಿಕಾರ ಹಿಡಿಯಲು ಸೂಚಿಸಲಾಗಿದೆ. ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಕಡೆ ಜೆಡಿಎಸ್ ಜತೆ ಸೇರಿ ಅಧಿಕಾರ ಹಿಡಿಯುವಂತೆ ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
![Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ](https://www.udayavani.com/wp-content/uploads/2024/12/gold-3-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ](https://www.udayavani.com/wp-content/uploads/2024/12/ane-4-150x83.jpg)
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
![ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ](https://www.udayavani.com/wp-content/uploads/2024/12/hubballi-1-150x99.jpg)
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
![Bheema-Naik](https://www.udayavani.com/wp-content/uploads/2024/12/Bheema-Naik-150x90.jpg)
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
![Yatnal-Team](https://www.udayavani.com/wp-content/uploads/2024/12/Yatnal-Team-150x90.jpg)
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
![Congress-Session](https://www.udayavani.com/wp-content/uploads/2024/12/Congress-Session-150x90.jpg)
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ](https://www.udayavani.com/wp-content/uploads/2024/12/gold-3-150x87.jpg)
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
![Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…](https://www.udayavani.com/wp-content/uploads/2024/12/annamalai-150x83.jpg)
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
![Madhya Pradesh Education Minister’s substitute statement sparks political storm](https://www.udayavani.com/wp-content/uploads/2024/12/mao-150x87.jpg)
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
![Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ](https://www.udayavani.com/wp-content/uploads/2024/12/Manmohan1-150x84.jpg)
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
![ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ](https://www.udayavani.com/wp-content/uploads/2024/12/ane-4-150x83.jpg)
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.