ಬಾಗೇಪಲ್ಲಿ ಪುರಸಭೆ ಕೈ ವಶ, ಶಿಡ್ಲಘಟ್ಟ ನಗರಸಭೆ ಅತಂತ್ರ

54 ವಾರ್ಡ್‌ಗಳ ಫ‌ಲಿತಾಂಶ ಪ್ರಕಟ ••ಕೈಗೆ 26, ದಳಕ್ಕೆ 11, ಬಿಎಸ್‌ಪಿ, ಸಿಪಿಎಂಗೆ ತಲಾ 2, ಪಕ್ಷೇತರರು 13

Team Udayavani, Jun 1, 2019, 9:55 AM IST

cb-tdy-1..

ಬಾಗೇಪಲ್ಲಿ ಪುರಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಬೆಂಬಲಿಗಟು ಮೆರವಣಿಗೆ ನಡೆಸಿದರು.

ಚಿಕ್ಕಳ್ಳಾಪುರ: ಲೋಕಸಭಾ ಚುನಾವಣೆ ಮುಗಿದ ಬಳಿಕ ಜಿಲ್ಲೆಯ ರಾಜಕೀಯ ಪಕ್ಷಗಳಿಗೆ ತೀವ್ರ ಪ್ರತಿಷ್ಠೆ ಯಾಗಿ ಪರಿಣಮಿಸಿ ಕಳೆದ ಮೇ 29 ರಂದು ಜಿಲ್ಲೆಯ ಶಿಡ್ಲಘಟ್ಟ ಹಾಗೂ ಬಾಗೇಪಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ಸುಸೂತ್ರವಾಗಿ ನಡೆದಿದ್ದು, ಶುಕ್ರವಾರ ಫ‌ಲಿತಾಂಶ ಪ್ರಕಟಗೊಂಡಿದ್ದು ಬಾಗೇಪಲ್ಲಿ ಪುರಸಭೆ ಯಲ್ಲಿ ಮತದಾರರು ಕೈ ಹಿಡಿದಿದ್ದರೆ, ಶಿಡ್ಲಘಟ್ಟ ನಗರಸಭೆಯಲ್ಲಿ ಯಾರಿಗೂ ಬಹುಮತ ಕೊಡದೇ ಮತದಾರರು ಅತಂತ್ರ ನಗರಸಭೆ ಸೃಷ್ಟಿಸಿದ್ದಾರೆ.

ಶಿಡ್ಲಘಟ್ಟ ನಗರಸಭೆಯ ಒಟ್ಟು 31 ವಾರ್ಡ್‌ಗಳ ಹಾಗೂ ಬಾಗೇಪಲ್ಲಿ ಪುರಸಭೆಯ 23 ವಾರ್ಡ್‌ ಸೇರಿ ಒಟ್ಟು 54 ಕ್ಷೇತ್ರಗಳ ಫ‌ಲಿತಾಂಶ ಮಧ್ಯಾಹ್ನದ ವೇಳೆಗೆ ಆಯಾ ತಾಲೂಕು ಕೇಂದ್ರಗಳಲ್ಲಿ ಬಿಗಿ ಪೊಲೀಸ್‌ ಭದ್ರತೆಯಲ್ಲಿ ಮತ ಎಣಿಕೆ ನಡೆದು ಫ‌ಲಿತಾಂಶ ಪ್ರಕಟಗೊಂಡಿದ್ದು, ಆ ಪೈಕಿ ಕಾಂಗ್ರೆಸ್‌ 26, ಜೆಡಿಎಸ್‌ 11, ಸಿಪಿಎಂ ಹಾಗೂ ಬಿಎಸ್‌ಪಿ ತಲಾ 2 ಹಾಗೂ ಪಕ್ಷೇ ತರರು ಒಟ್ಟು 13 ವಾರ್ಡ್‌ಗಳಲ್ಲಿ ತಮ್ಮ ಪಾರುಪಾತ್ಯ ಸಾಧಿಸುವ ಮೂಲಕ ಗಮನ ಸೆಳೆದಿದ್ದಾರೆ.

ಬಾಗೇಪಲ್ಲಿ ಕೈಗೆ ಅಧಿಕಾರ: ಬಾಗೇಪಲ್ಲಿ ಪುರಸಭೆಯ ಒಟ್ಟು 23 ವಾರ್ಡ್‌ಗಳ ಪೈಕಿ ಕಾಂಗ್ರೆಸ್‌ 13, ಸಿಪಿಎಂ 2, ಜೆಡಿಎಸ್‌ 01 ಹಾಗೂ ಪಕ್ಷೇತರರು 7 ಮಂದಿ ಗೆಲುವು ದಾಖಲಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಪಕ್ಷೇತರರರು ಸೆಡ್ಡು ಹೊಡೆದಿದ್ದಾರೆ. ಆದರೆ ಬಾಗೇಪಲ್ಲಿ ಪುರಸಭೆಯಲ್ಲಿ ಕಾಂಗ್ರೆಸ್‌ 13 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

ಕಳೆದ ಬಾರಿ 6 ಸ್ಥಾನಗಳನ್ನು ಹೊಂದಿದ್ದ ಸಿಪಿಎಂ 4 ಸ್ಥಾನಗಳನ್ನು ಕಳೆದುಕೊಂಡು 2ಕ್ಕೆ ಇಳಿದಿದೆ. ಕಳೆದ ಬಾರಿ ಎರಡು ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್‌ ಈ ಬಾರಿ 1 ಸ್ಥಾನ ಕಳೆದುಕೊಂಡು 1 ಸ್ಥಾನಕ್ಕೆ ಇಳಿದಿದೆ. ಪಕ್ಷೇತರರರು ಕಳೆದ ಬಾರಿ 8 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ 1 ಸ್ಥಾನ ಕಳೆದುಕೊಂಡು 7 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೂ ಪಕ್ಷೇತರರ ಬೆಂಬಲದೊಂದಿಗೆ ಆಡಳಿತ ನಡೆಸಿದ್ದ ಕಾಂಗ್ರೆಸ್‌ ಈಗ ಸ್ವಂತ ಬಲದೊಂದಿಗೆ ಪುರಸಭೆಯಲ್ಲಿ ಆಡಳಿತ ನಡೆಸಲು ಸಜ್ಜಾಗಿದೆ.

ಶಿಡ್ಲಘಟ್ಟ ನಗರಸಭೆಗೆ ಆನೆ ಪ್ರವೇಶ: ಇದೇ ಮೊದಲ ಬಾರಿಗೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಬಹುಜನ ಸಮಾಜ ಪಕ್ಷ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ತೆರೆದು ರಾಜಕೀಯವಾಗಿ ಗಮನ ಸೆಳೆದಿದೆ. ಜಿಲ್ಲೆಯ ಶಿಡ್ಲಘಟ್ಟ ನಗರಸಭೆಗೆ ಇದೇ ಮೊದಲ ಬಾರಿಗೆ ಆನೆ ಪ್ರವೇಶ ಮಾಡಿದೆ. ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳಾಗಿ 12ನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಮೌಲ (594) ಮತ ಪಡೆದು ಪ್ರತಿಸ್ಪರ್ಧಿ ಕಾಂಗ್ರೆಸ್‌ ಪಕ್ಷದ ಮುಸಾವರ (347) ವಿರುದ್ಧ 247 ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ವಾರ್ಡ್‌ 29 ರಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದ ಜಬೀವುಲ್ಲಾ (487) ಮತ ಪಡೆದು ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸಮೀರ್‌ ಹುಸೇನ್‌ ಖಾನ್‌ (411) ವಿರುದ್ಧ ಕೇವಲ 19 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅತಂತ್ರವಾಗಿರುವ ಶಿಡ್ಲಘಟ್ಟ ಯಾರಿಗೆ ಒಲಿಯುತ್ತೆ? ಒಟ್ಟು 31 ಸದಸ್ಯ ಬಲ ಇರುವ ಶಿಡ್ಲಘಟ್ಟ ನಗರಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಇಲ್ಲ. ಹೀಗಾಗಿ ಯಾವುದೇ ಪಕ್ಷ ಅಧಿಕಾರಕ್ಕೇ ಏರಬೇಕಾದರೂ ಕನಿಷ್ಠ ಸಂಖ್ಯೆ 16 ಸದಸ್ಯರ ಮೇಲೆ ಇರಬೇಕಿದೆ. ಆದರೆ ಕಾಂಗ್ರೆಸ್‌ 13, ಜೆಡಿಎಸ್‌ 10 ಸ್ಥಾನ ಪಡೆದಿದೆ. ಸ್ಥಳೀಯ ರಾಜಕೀಯ ಪರಿಸ್ಥಿತಿ ಅವಲೋಕಿಸಿದರೆ ರಾಜ್ಯದಲ್ಲಿ ಆದಂತೆ ಇಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿಯಾಗುವುದು ಅನುಮಾನವಾಗಿದೆ.

ಕಾಂಗ್ರೆಸ್‌ ಪಕ್ಷ ಬಿಎಸ್‌ಪಿ ಹಾಗೂ ಪಕ್ಷೇತರರ ಜೊತೆ ಸೇರಿ ಆಡಳಿತ ನಡೆಸುತ್ತಾ ಇಲ್ಲ, 10 ಸದಸ್ಯರನ್ನು ಹೊಂದಿರುವ ಜೆಡಿಎಸ್‌ ಬಿಎಸ್‌ಪಿ, ಪಕ್ಷೇತರರ ಜೊತೆ ಸೇರಿ ಅಧಿಕಾರ ನಡೆಸುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಶಿಡ್ಲಘಟ್ಟ ನಗರಸಭೆಯಲ್ಲಿ ಅಧಿಕಾರ ಹಿಡಿಯಲು ಸದಸ್ಯರ ಕುದುರೆ ವ್ಯಾಪಾರ ನಡೆಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಗೆದ್ದವರು ಬೀಗಿ ಸಂಭ್ರಮಾಚರಣೆ: ಲೋಕಸಭಾ ಚುನಾವಣೆ ಬಳಿಕ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಒಂದು ರೀತಿ ಕಾಂಗ್ರೆಸ್‌ ಪಕ್ಷಕ್ಕೆ ತುಸು ಸಮಾಧಾನ ತಂದಿದೆ. ಮತ ಎಣಿಕೆ ನಡೆದ ಅಭ್ಯರ್ಥಿಗಳ ಫ‌ಲಿತಾಂಶ ಹೊರ ಬೀಳುತ್ತಿದ್ದಂತೆ ಗೆಲುವು ಸಾಧಿಸಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ನಗರದ ಮುಖ್ಯ ರಸ್ತೆಗಳಲ್ಲಿ ಗೆಲುವಿನ ಸಂಭ್ರಮಾಚರಣೆ ನಡೆಸಿದ ದೃಶ್ಯಗಳು ಸಾಮಾನ್ಯವಾಗಿತ್ತು. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳನ್ನು ಬೆಂಬಲಿಗರು ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದರು. ತಮ್ಮ ವಾರ್ಡ್‌ಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಅಭ್ಯರ್ಥಿಗಳ ಗೆಲುವಿನ ಅಂತರ 6 ಮತಗಳಿಂದ ಹಿಡಿದು 706 ಮತಗಳ ಗಡಿ ದಾಟಿದೆ. ಕೆಲವರು 11, 7, 6 ಮತಗಳ ಅಂತರಿಂದ ಚುನಾವಣೆಯಲ್ಲಿ ಸೋತಿದ್ದು ಕಂಡು ಬಂತು.

ಮತ ಎಣಿಕೆ ಕಾರ್ಯ ಸುಸೂತ್ರ : ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಒಟ್ಟು 31 ವಾರ್ಡ್‌ಗಳಿಗೂ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಜೂನಿಯರ್‌ ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭಗೊಂಡು ಮಧ್ಯಾಹ್ನ 12 ಗಂಟೆಗೆಲ್ಲಾ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇವಿಎಂ ಮತಯಂತ್ರಗಳಿಂದ ಅನಾವರಣಗೊಂಡಿತು. ಬಾಗೇಪಲ್ಲಿ ಪುರಸಭೆಯ 23 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದು ಬೆಳಗ್ಗೆ 11 ಗಂಟೆಗೆಲ್ಲಾ ಫ‌ಲಿತಾಂಶ ಹೊರ ಬಿತ್ತು. ಮತ ಎಣಿಕೆ ಕೇಂದ್ರಗಳ ಸುತ್ತಲೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.