ಸಾವಯವ ಗೊಬ್ಬರದಿಂದ ಉತ್ತಮ ಬೆಳೆ ಬೆಳೆಯಲು ಸಾಧ್ಯ
Team Udayavani, Jun 2, 2019, 3:00 AM IST
ಸೋಮೇನಹಳ್ಳಿ: ರೈತರು ರಾಸಾಯನಿಕ ಗೊಬ್ಬರಗಳನ್ನು ಬೆಳೆಗಳಿಗೆ ಬಳಸದೆ ಕೊಟ್ಟಿಗೆ ಗೊಬ್ಬರ, ತಿಪ್ಪೆ ಗೊಬ್ಬರಗಳನ್ನು ಬಳಸುವುದರ ಮೂಲಕ ಸಾವಯವ ಕೃಷಿ ಮಾಡಬೇಕೆಂದು ರೈತರಿಗೆ ಚಿಕ್ಕಬಳ್ಳಾಪುರ ಉಪ ಕೃಷಿ ನಿರ್ದೇಶಕಿ ಎಂ.ಅನುರೂಪ ರೈತರಿಗೆ ಸಲಹೆ ನೀಡಿದರು.
ಗುಡಿಬಂಡೆ ತಾಲೂಕು ಸೋಮೇನಹಳ್ಳಿ ಹೋಬಳಿ ಕಾಟೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೃಷಿ ಇಲಾಖೆ, ಗುಡಿಬಂಡೆ ಮತ್ತು ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇವರ ಆಶ್ರಯದಲ್ಲಿ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆಯ ಅಡಿಯಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಫಲವತ್ತತೆ ಹೆಚ್ಚಳ: ರೈತರು ರಾಸಾಯನಿಕ ಗೊಬ್ಬರಗಳನ್ನು ಹೆಚ್ಚಾಗಿ ಬೆಳೆಗಳಿಗೆ ಬಳಸುವ ಮೂಲಕ ಭೂಮಿಯ ಮಣ್ಣಿನ ಫಲವತ್ತತೆ ಹಾಳಾಗುತ್ತಿದೆ. ಈ ಬೆಳೆಗಳನ್ನು ಉಪಯೋಗಿಸುವುದರಿಂದ ಆರೋಗ್ಯವೂ ಸಹ ಹದಗೆಡುತ್ತಿದೆ.
ಹಸಿರೆಲೆ ಗೊಬ್ಬರ, ಕೊಟ್ಟಿಗೆ ಗೊಬ್ಬರ, ದೇಶೀ ಹಸು(ನಾಟಿ ಹಸು)ಗಳ ಸಗಣಿ, ಗಂಜಲ, ಬೇವಿನ ಸೊಪ್ಪು, ಹೊಂಗೆಸೊಪ್ಪು, ಬೇವಿನ ಕಷಾಯ, ಬೇವಿನ ಹಿಂಡಿ ಮುಂತಾದವುಗಳನ್ನು ಭೂಮಿಗೆ ನೀಡುವುದರಿಂದ ಭೂಮಿಯ ಫಲವತ್ತತೆ ಹೆಚ್ಚಾಗುವುದು. ಉತ್ತಮ ಫಸಲೂ ಸಹ ಬರುವುದರ ಜೊತೆಗೆ ಆಹಾರ ಧಾನ್ಯಗಳು ತಿನ್ನಲು ರುಚಿಯಾಗಿರುತ್ತದೆ ಎಂದು ಹೇಳಿದರು.
ಹಸಿರು, ರಾಗಿ ಹುಲ್ಲು ನೀಡಿ: ರೈತರು ದೇಶೀಯ ಬೀಜಗಳನ್ನು ಬಿತ್ತುವುದರಿಂದ ಕಡಿಮೆ ಬಂಡವಾಳ ಹಾಕಿದರೆ ಸಾಕು. ದೇಶೀ ಹಸುಗಳು ಕಡಿಮೆಯಾಗಿ ಸೀಮೆ ಹಸುಗಳನ್ನು ಹೆಚ್ಚಾಗಿ ಸಾಕುತ್ತಿರುವುದರಿಂದ ಹಾಲು ಸಹ ರುಚಿಯಿಲ್ಲದಂತಾಗಿದೆ. ಇದರ ಲಾಲನೆ, ಪಾಲನೆಯೂ ಸಹ ಕಷ್ಟವಾಗಿ ಹೆಚ್ಚಿನ ಖರ್ಚು ಬರುತ್ತದೆ. ಆದರೆ ನಾಟಿ ಹಸುಗಳಿಗೆ ಹಸಿರು ಹುಲ್ಲು, ರಾಗಿ ಹುಲ್ಲು, ಭತ್ತದ ಹುಲ್ಲು ಹಾಕಿದರೆ ಉತ್ತಮ ಹಾಲು, ತುಪ್ಪ, ಮಜ್ಜಿಗೆ ಪಡೆಯಬಹುದಾಗಿದೆ ಎಂದರು.
ಜಾನುವಾರುಗಳಿಗೆ ಬಹು ವಾರ್ಷಿಕ ಮೇವಿನ ಬೆಳೆ ಬೆಳೆದುಕೊಳ್ಳಲು ಅರಣ್ಯ ಸಸಿ, ಮರಗಿಡಗಳನ್ನು ಹೆಚ್ಚಾಗಿ ಬೆಳೆಸಬೇಕು. ಆಯಾ ಗ್ರಾಮಗಳಲ್ಲಿ ದೇಶೀಯ ತಳಿ ಹುರಳಿ, ಅವರೆ, ಅಲಸಂಧೆ ಮುಂತಾದವುಗಳನ್ನು ಶೇಖರಿಸಿಟ್ಟುಕೊಂಡು ಬೀಜಗಳ ಬ್ಯಾಂಕ್ನ್ನು ಮಾಡಿಕೊಳ್ಳಬಹುದು ಎಂದರು.
ಗುಡಿಬಂಡೆ ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಅನೀಸ್ ಸಲ್ಮಾ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊಟ್ಟ ಮೊದಲು ಸೋಮೇನಹಳ್ಳಿ ಹೋಬಳಿಯ ಕಮ್ಮಡಿಕೆ, ಕಾಟೇನಹಳ್ಳಿ, ಚಿಕ್ಕನಂಚೆರ್ಲು ಗ್ರಾಮಗಳನ್ನು ಸಾವಯವ ಕೃಷಿಗೆ ಆಯ್ಕೆ ಮಾಡಿಕೊಂಡು ತರಬೇತಿಯನ್ನು ರೈತರಿಗೆ ನೀಡುತ್ತಿದ್ದೇವೆ.
ಆತ್ಮ ಯೋಜನೆಯ ಅಡಿಯಲ್ಲಿ ಈ ಗ್ರಾಮಗಳನ್ನು ಮಾದರಿ ಗ್ರಾಮಗಳೆಂದು ಪರಿಗಣಿಸಿ 100 ಹೆಕ್ಟೇರ್ ಭೂಮಿಯಲ್ಲಿ ಮಣ್ಣು ಮಾದರಿ9ಗಳನ್ನು ತೆಗೆದಿದ್ದೇವೆ ಎಂದು ಹೇಳಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸಹ ಸಂಶೋಧಕಿ ಲಾವಣ್ಯ ಬೀಜಾಮೃತ, ಘನಜೀವಾಮೃತ ತಯಾರಿಕೆಯ ಬಗ್ಗೆ ರೈತರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.