ವಾರ್ಷಿಕ ಸಭೆ, ಸವಿನೆನಪಿನ ಸಮುದಾಯ ಸಂಭ್ರಮ
ಬಲ್ಯಾಯ ಯಾನೆ ಕಣಿಶನ್ ಸಮುದಾಯ
Team Udayavani, Jun 2, 2019, 12:19 PM IST
ಮಹಾನಗರ: ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘದ 64ನೇ ವಾರ್ಷಿಕ ಮಹಾಸಭೆ ಮತ್ತು64ನೇ ವರ್ಷದ ಸವಿನೆನಪಿನ ಸಮುದಾಯ ಸಂಭ್ರಮ ಯುವವೇದಿಕೆ ಹಾಗೂ ಮಹಿಳಾ ವೇದಿಕೆಯ ಸಹಯೋಗದಲ್ಲಿ ಇತ್ತೀಚೆಗೆ ಗರೋಡಿ ಬಳಿ ಇರುವ ಸರ್ವಮಂಗಳ ಸಭಾಭವನದಲ್ಲಿ ಜರಗಿತು.
ಗಣಪತಿ ಹೋಮ, ಸಾರ್ವಜನಿಕ ಸತ್ಯನಾರಾಯಣ ಪೂಜೆ, ಮಕ್ಕಳಿಗಾಗಿ ರಂಗೋಲಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಛದ್ಮವೇಷ ಸ್ಪರ್ಧೆ ಇನ್ನಿತರ ಕಾರ್ಯ ಕ್ರಮಗಳು ನಡೆದವು.
ಮಧ್ಯಾಹ್ನ ಸಮುದಾಯ ಸಂಭ್ರಮದ ಸಭಾ ಕಾರ್ಯಕ್ರಮ ಸಂಘದ ಅಧ್ಯಕ್ಷ ದಿವಾಕರ್ ಕೆ. ಪಂಡಿತ್ ಅಧ್ಯಕ್ಷತೆಯಲ್ಲಿ, ಜರಗಿತು. ಕುಂಪಲದ ವೈದ್ಯ ಡಾ| ಕುಮಾರ ಸದಾನಂದ ಉದ್ಘಾಟಿಸಿದರು.
ಪ್ರತಿಭಾ ಪುರಸ್ಕಾರ
ಸಮುದಾಯದ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಹುಮುಖ ಪ್ರತಿಭೆಗಳಿಗೆ ಅಭಿನಂದನೆ ನಡೆಯಿತು. ಸಮುದಾಯದ ಹಿರಿಯರನ್ನು ಸಮ್ಮಾನಿಸಲಾಯಿತು. ಸಂಘದ ಸೇವೆಗಾಗಿ ಡಾ| ಭಾಸ್ಕರ್ ಜಿ.ಬಿ. ಕೆಂಬಾರ್, ಹಿರಿಯ ನಾಟಿ ವೈದ್ಯೆ ಚಂದ್ರಾವತಿ ರಾಮ ಪಂಡಿತ್ ಬೆಳ್ಮಣ್, ಸಮಾಜ ಸೇವಾ ಕಾರ್ಯಕರ್ತ, ಹವ್ಯಾಸಿ ಯಕ್ಷಗಾನ ಕಲಾವಿದ, ಜ್ಯೋತಿಷಿ ಸುಬ್ರಾಯ ಬಲ್ಯಾಯ ಕಾವು ಅವರನ್ನು ಗೌರವಿಸಲಾಯಿತು.
ಅತಿಥಿಗಳಾಗಿ ಜ್ಯೋತಿಷಿ ಆನಂದ ಬಲ್ಯಾಯ ಎ. ಧರ್ಮತಡ್ಕ, ಶ್ರೀ ರಾಜರಾಜೇಶ್ವರಿ ಫೌಂಡೇಶನ್ನ ವಿಜಯ ಪ್ರಸಾದ್ ಆಳ್ವ, ರೋಶನಿ ನಿಲಯದ ಪ್ರೊ| ವಿನೀತಾ ಕೆ., ಎಸ್.ಆರ್.ಆರ್. ಮಸಾಲ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶೈಲೇಂದ್ರ ವೈ. ಸುವರ್ಣ ಭಾಗವಹಿಸಿ ಶುಭ ಕೋರಿದರು. ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ, ಕಾರ್ಗಿಲ್ ಯೋಧ ಮೇಗಿನಮನೆ ಪ್ರವೀಣ್ ಶೆಟ್ಟಿ ಅವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು.
ಸಂಘದ ನಿರ್ದೇಶಕರು, ಪದಾಧಿ ಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಯುವ ವೇದಿಕೆ, ಮಹಿಳಾ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.
ಸಂಘದ ವಕ್ತಾರ ಸುರೇಶ್ ಕುಮಾರ್ ಮಾರಿಪಳ್ಳ ಪ್ರಸ್ತಾವನೆಗೈದರು. ಕಾರ್ಯ ದರ್ಶಿ ಜಯಪ್ರಕಾಶ್ ಪಂಡಿತ್ ಬಬ್ಬುಕಟ್ಟೆ ಸ್ವಾಗತಿಸಿ, ಮಲ್ಲಿಕಾ ಭಾನುಪ್ರಕಾಶ್ ನಿರ್ವಹಿಸಿದರು. ಜತೆ ಕಾರ್ಯದರ್ಶಿ ರಂಜನ್ ಬಲ್ಯಾಯ ವಂದಿಸಿ, ಯುವ ವೇದಿಕೆಯ ಗೋಪಾಲ್ ಕಲ್ಲಡ್ಕ ನಿರೂಪಿಸಿದರು. ಸ್ವಜಾತಿ ಬಾಂಧವರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.