![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 2, 2019, 1:53 PM IST
ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಡಳಿಯ ಚುನಾವಣೆಗೆ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಆರ್.ಕೆ.ಭೈರಲಿಂಗಯ್ಯ ಶನಿವಾರ ನಾಮಪತ್ರ ಸಲ್ಲಿಸಿದರು.
ರಾಮನಗರ: 2019-2024ರ ಅವಧಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಡಳಿಯ ಚುನಾವಣೆಗೆ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಹಾಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಕೆ.ಭೈರಲಿಂಗಯ್ಯ ಶನಿವಾರ ನಾಮಪತ್ರ ಸಲ್ಲಿಸಿದರು. ಇವರೊಂದಿಗೆ ಶಿವಸ್ವಾಮಿ ಸಹ ನಾಮಪತ್ರ ಸಲ್ಲಿಸಿದರು.
ನಗರದ ಸ್ಫೂರ್ತಿ ಭವನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಕೆ.ಭೈರಲಿಂಗಯ್ಯ, ಪ್ರೌಢಶಿಕ್ಷಣ ಇಲಾಖೆ ವಿಭಾಗಕ್ಕೆ ಎರಡು ಸ್ಥಾನಗಳು ಮೀಸಲಿದ್ದು, ತಾವು ಮತ್ತು ಶಿವಸ್ವಾಮಿ ಕಣಕ್ಕಿಳಿದಿದ್ದೇನೆ. ನಾಮಪತ್ರ ಸಲ್ಲಿಕೆ ವೇಳೆ ತಾಲೂಕಿನ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ವೃಂದದವರು ಖುದ್ದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮಗೆ ಬೆಂಬಲ ವ್ಯಕ್ತಪಡಿಸಿರುವುದು ಸಂತಸ ತಂದಿದೆ ಎಂದರು.
ಕಳೆದ ಸಾಲಿನಲ್ಲಿ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಆಯ್ಕೆಯಾಗಿ, ಎಲ್ಲ ಇಲಾಖೆಗಳ ನಿರ್ದೇಶಕರ ಸಹಕಾರದಿಂದ ಸಂಘದ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿರುವ ತೃಪ್ತಿ ತಮಗಿದೆ. ಮತ್ತೂಮ್ಮೆ ತಮ್ಮನ್ನು ಆಯ್ಕೆ ಮಾಡಿ ಸಂಘಟನೆಯ ಬಲ ಹೆಚ್ಚಿ ಸಲು ಅವಕಾಶ ಮಾಡಿಕೊಡಬೇಕು. ಸಂಘಟನೆ ಯಲ್ಲಿ ಸೇವೆ ಬಹಳ ಪ್ರಮುಖವಾಗಿದೆ. ಸಂಘದ ಮುಖಾಂತರ ಸಮಾಜಮುಖೀ ಸೇವೆಯನ್ನು ಮಾಡಿರುವುದಾಗಿ, ರಾಮನಗರ ಜಿಲ್ಲಾ ಸ.ನೌ.ಸಂಘ ತಮ್ಮ ಕಾರ್ಯಕ್ರಮಗಳಿಂದಲೇ ರಾಜ್ಯ ಸಂಘದ ಗಮನ ಸೆಳೆದಿದೆ ಎಂದರು. ಜಿಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಮಾತನಾಡಿ, ಸರ್ಕಾರಿ ನೌಕರರ ಸಂಘ ಕ್ರಿಯಾ ಶೀಲವಾಗಿ ಸಂಘಟನೆಯ ಜೊತೆಗೆ ಸಾಮಾಜಿಕ ಕಳಕಳಿ ಕಾರ್ಯಕ್ರಮಗಳನ್ನು ಮಾಡಿ ರಾಜ್ಯದಲ್ಲಿ ಮಾದರಿ ಸಂಘವನ್ನಾಗಿ ಕೊಂಡೊಯ್ಯವಲ್ಲಿ ಆರ್.ಕೆ.ಭೈರಲಿಂಗಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದರು. ಪ್ರಸಕ್ತ ಚುನಾವಣೆಯಲ್ಲೂ ಪ್ರೌಢಶಿಕ್ಷಣ ಇಲಾಖೆ ಅವರ ಬೆಂಬಲಕ್ಕೆ ನಿಂತಿದೆ ಎಂದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.