ದೊಡ್ಡಾಟ ಅಪ್ಪಟ ಶ್ರೇಷ್ಠ ದೇಶೀಯ ಕಲೆ

ತಿಂಗಳ ಬೆಳಕು ಕಾರ್ಯಕ್ರಮ ದೊಡ್ಡಾಟ ಕಲಾವಿದ, ಕತೆಗಾರ ಬಸವರಾಜ ಶಿಗ್ಗಾಂವ ಅಭಿಪ್ರಾಯ

Team Udayavani, Jun 3, 2019, 10:01 AM IST

rn-tdy-1..

ರಾಮನಗರ: ದೊಡ್ಡಾಟವನ್ನು ಶ್ರೇಷ್ಠ ಕಲೆ, ಅಪ್ಪಟ ದೇಶೀ ಕಲೆ. ರಂಗಭೂಮಿಯಲ್ಲಿ ಜೀವಂತವಾಗಿರುವ ಕಲೆ. ವಿದ್ಯಾವಂತರೂ ಈ ಕಲೆಯನ್ನು ಕಲಿತು ಕಲೆಯನ್ನು ಮುಂದಿನ ಪೀಳಿಗೆಗಳಿಗೆ ಕೊಡುಗೆ ನೀಡ ಬೇಕೆಂದು ದೊಡ್ಡಾಟ ಕಲಾವಿದ ಮತ್ತು ಕತೆಗಾರ ಬಸವರಾಜ ಶಿಗ್ಗಾಂವ ಅಭಿಪ್ರಾಯಪಟ್ಟರು.

ತಾಲೂಕಿನ ಕೃಷ್ಣಾಪುರದೊಡ್ಡಿಯ ತಾನಿನ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಿಂಗಳ ಬೆಳೆಕು ಕಾರ್ಯಕ್ರಮದ ಅತಿಥಿಯಗಿ ಭಾಗವಹಿಸಿದ್ದ ದೊಡ್ಡಾಟ ಕತೆಗಾರ ಬಸವರಾಜ ಶಿಗ್ಗಾಂವ ದೊಡ್ಡಾಟ ಕಲೆ ಹಾಗೂ ತಮ್ಮ ಜೀವನದ ಪುಟಗಳನ್ನು ತೆರೆದಿಟ್ಟರು.

ತಾವು ನೂರಾರು ದೊಡ್ಡಾಟ ಪ್ರದರ್ಶನ ಕೊಟ್ಟಿದ್ದು, ಕಲೆಯ ಉಳಿವಿಗಾಗಿ ಶಿಷ್ಯ ಬಳಗವನ್ನು ಸೃಷ್ಟಿಸಿದ್ದೇನೆ. ವಿದ್ಯಾವಂತರು ಈ ಕಲೆಯನ್ನು ಕಲಿತು ಪ್ರದರ್ಶನ ನೀಡಬಹುದು. ರಾಜ್ಯದ 24 ಜಿಲ್ಲೆಗಳಲ್ಲಿ ಬಯಲಾಟ, ದೊಡ್ಡಾಟವನ್ನು ಪ್ರದರ್ಶಿಲಾಗುತ್ತದೆ. ಉತ್ತರ ಕರ್ನಾಟಕ ಭಾಗದ ದೊಡ್ಡಾಟಕ್ಕೆ ತನ್ನದೆಯಾದ ಸ್ವರೂಪವಿವೆ. ಇಂತಹ ವಿಶೇಷ ಕಲೆಯನ್ನು ಉಳಿಸುವಲ್ಲಿ ಕಲಾವಿದರ ಪಾತ್ರ ಗಣನೀಯವಾಗಿದೆ ಎಂದರು.

ಅನಕ್ಷರಸ್ಥರ ಪ್ರಯೋಗ ಯಶಸ್ವಿ: ನಾಟ್ಯಶಾಸ್ತ್ರ ಅಧ್ಯಯನ ಮಾಡುವ ಅನೇಕರು ಕಲಾಪ್ರಕರಗಳನ್ನು ಹೊರತರುವಲ್ಲಿ ಯಶಸ್ವಿಯಾಗುವುದಿಲ್ಲ. ಆದರೆ ಅನಕ್ಷರಸ್ಥ ಜನರು ತಮ್ಮ ಜೀವನದ ಅನುಭವಗಳನ್ನು ದೊಡ್ಡಾಟ, ಬಯಲಾಟದಲ್ಲಿ ತೊಡಗಿಸಿಕೊಂಡು ಅನೇಕ ಪ್ರಯೋಗಗಳನ್ನು ಯಶಸ್ವಿಯಾಗಿ ಮಾಡುತ್ತಾರೆ ಎಂದು ದೊಡ್ಡಾಟ ಕಲಾವಿದರ ಹಿರಿಮೆಯ ಬಗ್ಗೆ ತಿಳಿಸಿಕೊಟ್ಟರು. ಆದರೆ ಇಂದು ಕಲಾವಿದರ ಸೋಗು ಹಾಕಿಕೊಂಡ ಅನೇಕರು ಸರ್ಕಾರದ ಮುಂದೆ ಭಿಕ್ಷುಕರಂತೆ ಅನುದಾನವನ್ನು ಬೇಡುತ್ತಿದ್ದಾರೆ ಎಂದು ವಿಷಾದಿಸಿದರು. ಕಲೆಯನ್ನು ರೂಢಿಸಿಕೊಳ್ಳುವುದರಿಂದ ಸಹನೆಯ ಗುಣ ಬೆಳೆಯುತ್ತದೆ. ಇಲ್ಲಿ ಆಯ್ಕೆ, ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮದಾದರೆ ಕಲೆ ಉಳಿಯುತ್ತದೆ. ದೊಡ್ಡಾಟ ಕಲೆ ಉಳಿವಿಗೆ ನಿರಂತರವಾಗಿ ಕಲಾಸಕ್ತರು ಪ್ರಾಮಾಣಿಕವಾದ ಪ್ರಯತ್ನ ಪಡಬೇಕು ಎಂದು ತಿಳಿಸಿದರು.

ಕಲೆ ಉಳಿವಿಗೆ ಪ್ರಯತ್ನಿಸುವವರ ಸಂಖ್ಯೆ ಕ್ಷೀಣ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಲು ಕಲೆ ಸಹಾಯಕ ಎನ್ನುತ್ತಾರೆ. ಆದರೆ ಕಲೆ ಉಳುವಿಗಾಗಿ ಪ್ರಯತ್ನಿಸುವವರು ಸಂಖ್ಯೆ ಕ್ಷೀಣಿಸುತ್ತಿದೆ. ಕಲೆ ಪ್ರೋತ್ಸಾಹಿಸಿದಾಗ ಪಾರಂಪರಿಕ ಕಲೆ ಉಳಿದು, ಬೆಳೆಯಲು ಸಾಧ್ಯವಾಗುತ್ತದೆ. ಪ್ರಾಮಾಣಿಕ ಕಲಾವಿದನಿಗೆ ಕಲೆಯೇ ಉಸಿರಾಗಿರುತ್ತದೆ. ಈ ನಿಟ್ಟಿನಲ್ಲಿ ತಮ್ಮ ಬದುಕನ್ನು ಕಲೆಗಾಗಿ ಸವೆಸುತ್ತಿದ್ದೇನೆ ಎಂದು ತಿಳಿಸಿದರು.

ಹೋಮಿಯೋಪತಿ ವೈದ್ಯ ಡಾ. ಸತೀಶ್‌ ಮಾತನಾಡಿದರು. ದೊಡ್ಡಾಟ ಕಲಾವಿದರಾದ ವೀರೇಶ್‌ ಬಡಿಗೇರ್‌, ಮಲ್ಲೇಶಪ್ಪ ತಡಸದ, ಹೇಮಂತ್‌ ಕುಮಾರ್‌ ಭಜಂತ್ರಿ, ಕನಕಪ್ಪ, ಬಗರಿಕರ್‌, ಮಲ್ಲೇಶ್‌, ನೀಲಗುರಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಕೆ. ಕಾಳಯ್ಯ, ಉಪನ್ಯಾಸಕ ಕೆ.ಎಸ್‌. ಧನಂಜಯ, ಶಿಕ್ಷಕರಾದ ನೆ.ರ. ಪ್ರಭಾಕರ್‌, ಎಂ.ಎಚ್. ಚನ್ನವೀರಪ್ಪ, ನೃತ್ಯ ಕಲಾವಿದೆ ಚಿತ್ರಾರಾವ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.