ನೆರೆಯ ಗ್ರಾಮದ ರಸ್ತೆ ಕಾಂಕ್ರೀಟ್‌ಗೆ ಬಿಲ್‌ ಪಾವತಿ

ಬಡಗನ್ನೂರು ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ಷೇಪ

Team Udayavani, Jun 5, 2019, 6:00 AM IST

e-17

ಬಡಗನ್ನೂರು : ಗ್ರಾಮ ಪಂಚಾಯತ್‌ ಸ್ಥಿರ ಆಸ್ತಿಯಲ್ಲಿಲ್ಲದ ನೆರೆ ಗ್ರಾಮದ ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ ಬಿಲ್‌ ಪಾವತಿ ಮಾಡಿರುವ ಬಗ್ಗೆ ಬಡಗನ್ನೂರು ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಗ್ರಾ.ಪಂ. ಅಧ್ಯಕ್ಷ ಕೇಶವ ಗೌಡ ಕನ್ನಯ ಅವರ ಅಧ್ಯಕ್ಷತೆಯಲ್ಲಿ ಜೂ. 3ರಂದು ಗ್ರಾ.ಪಂ. ಸಮುದಾಯ ಭವನದಲ್ಲಿ ಸಭೆ ನಡೆಯಿತು.

ಬಡಗನ್ನೂರು ಗ್ರಾ.ಪಂ. ಹಾಗೂ ನೆಟ್ಟಣಿಗೆಮುಟ್ನೂರು ಗ್ರಾಮದ ಗಡಿಭಾಗದಲ್ಲಿರುವ ಪಡುವನ್ನೂರು ಗ್ರಾಮದ ಸಾರಕೂಟೇಲು- ಮುಗುಳಿ ಸಂಪರ್ಕ ರಸ್ತೆಗೆ ಗ್ರಾ.ಪಂ. 14 ನೇ ಹಣಕಾಸು ಯೋಜನೆಯಲ್ಲಿ ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ 76 ಸಾವಿರ ಅನುದಾನ ಇಟ್ಟಿತ್ತು. ಕಾಮಗಾರಿ ಸಂದರ್ಭ ಗುತ್ತಿಗೆದಾರರಿಗೆ ಸ್ಥಳೀಯ ವ್ಯಕ್ತಿಯೋರ್ವರು ಒತ್ತಡ ಹಾಕಿ ಪಂಚಾಯತ್‌ ಸ್ಥಿರ ಆಸ್ತಿಯಲ್ಲಿಲ್ಲದ ಇನ್ನೊಂದು ರಸ್ತೆಗೆ ಕಾಂಕ್ರೀಟ್‌ ಕಾಮಗಾರಿ ನಡೆಸಿದ್ದಾರೆ. ಮಾತ್ರವಲ್ಲದೇ ಸ್ಥಳೀಯ ಕೆಲ ವ್ಯಕ್ತಿಗಳಲ್ಲಿ ರಸ್ತೆ ಬೇಕಾದರೆ ಹಣ ನೀಡಬೇಕು ಎಂದು ಹೇಳಿ ಹಣ ಪಡೆದುಕೊಂಡಿದ್ದಾರೆ ಎಂದು ಸದಸ್ಯ ರವಿರಾಜ ರೈ ಹೇಳಿದರು.

ಬೆದರಿಕೆ ಹಾಕಿದ್ದಾರೆ
ಈ ಬಗ್ಗೆ ಪಿಡಿಒ ವಸೀಮ ಗಂಧದ ಪ್ರತಿಕ್ರಿಯಿಸಿ, ಕಾಮಗಾರಿ ಪೂರ್ಣಗೊಂಡು ಬಿಲ್‌ ಹಂತದ ಸಂದರ್ಭ ಗಮನಕ್ಕೆ ಬಂದಿದೆ ಎಂದರು. ಕ್ರಿಯಾ ಯೋಜನೆ ಇದೇ ರಸ್ತೆಯ ಹೆಸರು ಇದೆ. ಆದರೆ ರಸ್ತೆ ಬದಲಾವಣೆಯಾಗಿ ನೆಟ್ಟಣಿಗೆ ಮಾಟ್ನೂರು ಗ್ರಾಮದ ರಸ್ತೆಗೆ ಕಾಮಗಾರಿ ಮಾಡಲಾಗಿದೆ ಎಂದ ಅವರು, ಬಿಲ್‌ ನಿಡುವಲ್ಲಿ ಸ್ಥಳೀಯ ವ್ಯಕ್ತಿ ಐದಾರು ಬಾರಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯತ್‌ ಸದಸ್ಯ ರವಿರಾಜ ರೈ, ಬೆದರಿಕೆ ಒಡ್ಡಲು, ಬಿಲ್‌ ಕೇಳಲು ಆತ ಯಾರು? ಎಂದು ಪ್ರಶ್ನಿಸಿದರು. ಪಂಚಾಯತ್‌ ಸ್ಥಿರ ಆಸ್ತಿಯಲ್ಲಿರುವ ರಸ್ತೆಗೆ ಮಾತ್ರಬಿಲ್‌ ಪಾವತಿ ಮಾಡುವಂತೆ ನಿರ್ಣಯವನ್ನು ಕೈಗೊಳ್ಳಲಾಯಿತು.

ದೂರು ಅರ್ಜಿ
ಕಜಮೂಲೆ-ಸಾರೆಪ್ಪಾಡಿ ಪಂಚಾಯತ್‌ ರಸ್ತೆಯನ್ನು ಸ್ಥಳೀಯ ವ್ಯಕ್ತಿಯೋರ್ವರು ಅಡ್ಡಗಟ್ಟಿ ಬಂದ್‌ ಮಾಡಿದ ದೂರು ಅರ್ಜಿ ಬಗ್ಗೆ ಅಧ್ಯಕ್ಷ ಕೇಶವ ಗೌಡ ಮಾತನಾಡಿ, ಈ ಬಗ್ಗೆ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಣಯ ಮಾಡಲಾಯಿತು.

ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಬೇಬಿ ಎಸ್‌., ಸದಸ್ಯರಾದ ರವಿರಾಜ ರೈ ಸಜಂಕಾಡಿ, ಗುರುಪ್ರಸಾದ್‌ ರೈ ಕುದಾRಡಿ, ಬಾಲಕೃಷ್ಣ ಮುಂಡೋಳೆ, ಗೋಪಾಲಕೃಷ್ಣ ಸುಳ್ಯಪದವು, ರಘುನಾಥ ರೈ ಕುತ್ಯಾಳ, ಉದಯ ಕುಮಾರ್‌ ಶರವು, ಸುಶೀಲಾ ಪಕ್ಯೂಡ್‌, ದಮಯಂತಿ ನೆಕ್ಕರೆ, ಸವಿತಾ ಮಡ್ಯಲಮೂಲೆ, ಹೇಮಲತಾ ಗೌಡ ಸಂಪಿಗೆಮಜಲು, ದೇವಕಿ ಕನ್ನಡ್ಕ, ವಿಜಯಲಕ್ಷ್ಮೀ ಮೇಗಿನಮನೆ, ದಾಮೋದರ ಆಚಾರ್ಯ ನೆಕ್ಕರೆ, ರೋಹಿನಿ ಕಜಮೂಲೆ, ಸವಿತಾ ಪದಡ್ಕ, ಜಲಜಾಕ್ಷಿ ನೆರೋತ್ತಡ್ಕ, ಪಿಡಿಒ ವಸೀಮ ಗಂಧದ ಉಪಸ್ಥಿತರಿದ್ದರು. ಗ್ರಾ.ಪಂ. ಕಾರ್ಯದರ್ಶಿ ಶಾರದಾ ಕೆ., ಸ್ವಾಗತಿಸಿದರು. ಗುಮಾಸ್ತ ಜಯಾಪ್ರಸಾದ ರೈ ಗತ ಸಭೆಯ ವರದಿ ಮಂಡಿಸಿ, ವಂದಿಸಿದರು. ಸಿಬಂದಿ ಅಬ್ದುಲ್‌ ರಹೆಮಾನ್‌, ಸುಕನ್ಯಾ, ಹೇಮಾವತಿ, ಶಾರದಾ ಹಾಗೂ ಶೀಲಾವತಿ ಸಹಕರಿಸಿದರು.

ಕಾಡಿದೆ ನೀರಿನ ಸಮಸ್ಯೆ; ಬಿಲ್‌ ಮನ್ನಾ!
ಏರಾಜೆ ಪಳ್ಳತ್ತಾರು ಕುಡಿಯುವ ನೀರಿನ ಪೈಪ್‌ ಒಡೆದು ಪಂಪ್‌ ತೆಗೆದು ಹಾಕಿದ ಕಿಡಿಗೇಡಿಗಳ ಬಗ್ಗೆ ಪಂಚಾಯತ್‌ ಯಾವುದೇ ಕ್ರಮ ಕೈಗೊಂಡಿಲ್ಲ. ಅಂದಿನಿಂದ ಏರಾಜೆ- ಪಳ್ಳತ್ತಾರು ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂದು ಸದಸ್ಯೆ ವಿಜಯಲಕ್ಷ್ಮೀ ಹೇಳಿದರು. ಈ ಭಾಗದ ನಳ್ಳಿ ನೀರಿನ ಫ‌ಲಾನುಭವಿಗಳ ತಂಡ ಆಗಮಿಸಿ ಮೂರು ತಿಂಗಳಿಂದ ನೀರಿನ ಸಮಸ್ಯೆ ಬಗ್ಗೆ ಗ್ರಾ.ಪಂ. ಸದಸ್ಯರಿಗೆ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಕೊನೆಯ ಬಾರಿಗೆ ಕೊಳವೆ ಬಾವಿ ಡಿಪ್‌ ಮಾಡಲಾಯಿತು. ಆದರೂ ನೀರು ಸರಿಯಾಗಿ ಬರುತ್ತಿಲ್ಲ ಎಂದು ತಿಳಿಸಿದರು.

ಅಧ್ಯಕ್ಷ ಕೇಶವ ಗೌಡ ಮಾತನಾಡಿ, ಕಳೆದ ಮೂರು ತಿಂಗಳ ನೀರಿನ ಬಿಲ್‌ ಮನ್ನಾ ಮಾಡುವ ಬಗ್ಗೆ ತಿಳಿಸಿ ಮುಂದೆ ಹೊಸ ಕೊಳವೆಬಾವಿ ತೆಗೆಯುವವರೆಗೆ ಮೂರು ದಿವಸಕ್ಕೆ ಒಂದು ಬಾರಿ ನೀರು ಬಿಡುವ ಬಗ್ಗೆ ಪಂಪ್‌ ಚಾಲಕರಿಗೆ ಆದೇಶಿಸಿ ನಿರ್ಣಯ ಕೈಗೊಂಡರು.

ಟಾಪ್ ನ್ಯೂಸ್

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.