‘ಜೀವನದಲ್ಲಿ ಗುರಿ ಸಾಧಿಸುವ ಛಲವಿದ್ದಲ್ಲಿ ಯಶಸ್ಸು’
Team Udayavani, Jun 8, 2019, 6:00 AM IST
ಶಿರ್ವ: ಜೀವನದಲ್ಲಿ ಯಶಸ್ಸು ಗಳಿಸಲು ಯಾವುದೇ ಸುಲಭ ದಾರಿ ಇಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇರಿಸಿಕೊಂಡು ಕಠಿಣ ಪರಿಶ್ರಮದೊಂದಿಗೆ ಗುರಿ ಸಾಧಿಸುವ ಛಲವಿದ್ದಲ್ಲಿ ಯಶಸ್ಸು ಸಿಗುತ್ತದೆ ಎಂದು ಉಡುಪಿ ಕೆಥೋಲಿಕ್ ಧರ್ಮಪ್ರಾಂತ್ಯದ ಬಿಷಪ್ ರೈ|ರೆ|ಡಾ| ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಅವರು ಗುರುವಾರ ಡಾನ್ ಬೊಸ್ಕೊ ಸಿಬಿಎಸ್ಇ ಶಾಲಾ ಸಭಾಂಗಣದಲ್ಲಿ ನಡೆದ ಸಂಸ್ಥೆಯ 2019-20ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಪ್ರಾರಂಭೋತ್ಸವ ಮತ್ತು ಮಂಗಳೂರಿನ ಎಜುಕೇರ್ ಟೀಂನ ಸಂಸ್ಥೆಯ ಭೇಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮಂಗಳೂರಿನ ಎಜುಕೇರ್ ಸಂಸ್ಥೆಯ ಪ್ರಮೋಟರ್ ಮೈಕಲ್ ಡಿ ಸೋಜಾ ಮಾತನಾಡಿ ಗ್ರಾಮೀಣ ಪರಿಸರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಶಿಕ್ಷಣ ಸಂಸ್ಥೆಯ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡಿ ಎಂದು ಹೇಳಿದರು.
ಎಜುಕೇರ್ ಸಂಸ್ಥೆಯ ಪ್ರಮೋಟರ್ ಮೈಕಲ್ ಡಿ‡ ಸೋಜಾ,ಸಂಸ್ಥೆಯ ಆಧ್ಯಾತ್ಮಿಕ ಗುರು ರೆ|ಫಾ| ವಲೇರಿಯನ್ ಡಿ‡ ಸೋಜಾ, ಮಂಗಳೂರು ದಾಯ್ಜಿವರ್ಲ್ಡ್ ಸಂಸ್ಥೆಯ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮತ್ತು ಸ್ಟೀವನ್ ಪಿಂಟೋ ಅವರನ್ನು ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು. ಉಡುಪಿ ಕೆಥೋಲಿಕ್ ಧರ್ಮಪ್ರಾಂತ್ಯದ ವಿಕಾರ್ ಜನರಲ್ ರೆ|ಫಾ|ಮೊ| ಬ್ಯಾಪ್ಟಿಸ್ಟ್ ಡಿ‡’ಸೋಜಾ ಸಮ್ಮಾನಿತರ ಪರಿಚಯ ಮಾಡಿದರು.
ಚರ್ಚ್ನ ಸಹಾಯಕ ಧರ್ಮಗುರು ರೆ|ಫಾ| ಅಶ್ವಿನ್ ಅರಾನ್ಹಾ ,ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ವಿಲ್ಸನ್ ಡಿ‡ ಸೋಜಾ,ಶಾಲಾಡಳಿತ ಮಂಡಳಿಯ ಸದಸ್ಯರಾದ ಮೆಲ್ವಿನ್ ಅರಾನ್ಹಾ, ಜೂಲಿಯಾನ್ ರೊಡ್ರಿಗಸ್,ಮೆಲ್ವಿನ್ ಡಿ‡ ಸೋಜಾ ಮತ್ತು ಡಯಾನಾ ಸಲ್ದಾನಾ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕಿ ಐರಿನ್ ರೋಡ್ರಿಗಸ್, ಶಾಲಾ ಉಪ ಪ್ರಾಂಶುಪಾಲೆ ಐರಿನ್ ಕಾರ್ಡೋಜಾ, ಶಾಲಾ ನಾಯಕ ಬ್ರಾನೆಟ್ ನಜರೆತ್, ಉಪ ನಾಯಕ ಎಡ್ರಿನ್ ಡಿ‡ ಸೋಜಾ,ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿರ್ವ ಆರೋಗ್ಯ ಮಾತಾ ದೇವಾಲಯದ ಧರ್ಮಗುರು ಹಾಗೂ ಸಂತ ಮೇರಿ ಮತ್ತು ಡೊನ್ ಬೊಸ್ಕೊ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ|ಫಾ| ಡೆನ್ನಿಸ್ ಡೇಸಾ ಸ್ವಾಗತಿಸಿದರು. ಜೀನಲ್ ಕ್ವಾಡ್ರಸ್ಕಾರ್ಯಕ್ರಮ ನಿರೂಪಿಸಿ, ಶಾಲಾ ಪ್ರಾಂಶುಪಾಲ ರೆ|ಫಾ|ಮಹೇಶ್ ಡಿ ಸೋಜಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.