ಸಾಮಾಜಿಕ ಜವಾಬ್ದಾರಿ ನಿರ್ವಹಣೆ ಮುಖ್ಯ

ಕೆನರಾ ಬ್ಯಾಂಕ್‌ ಪಠ್ಯ ಪುಸ್ತಕ ಬ್ಯಾಂಕ್‌ಗೆ ಚಾಲನೆ

Team Udayavani, Jun 8, 2019, 5:33 PM IST

08-Juen-36

ಸಾಗರ: ಪಪೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಕೆನರಾ ಬ್ಯಾಂಕ್‌ ಜ್ಯುಬಿಲಿ ಎಜುಕೇಶನ್‌ ಫಂಡ್‌ನ‌ ಅಧ್ಯಕ್ಷ ಎಚ್.ಎಂ. ಬಸವರಾಜ್‌ ವಿತರಿಸಿದರು

ಸಾಗರ: ಕೆನರಾ ಬ್ಯಾಂಕ್‌ ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ. 62 ವರ್ಷಗಳ ಹಿಂದೆ ತನ್ನ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಹುಟ್ಟುಹಾಕಿದ ಕೆನರಾ ಬ್ಯಾಂಕ್‌ ಜ್ಯುಬಿಲಿ ಎಜುಕೇಶನ್‌ ಫಂಡ್‌ನ‌ಂತ ಸಂಸ್ಥೆಯನ್ನು ಹುಟ್ಟುಹಾಕಿ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಸಹಾಯ ಗುರುತರವಾಗಿದೆ ಎಂದು ಕೆನರಾ ಬ್ಯಾಂಕ್‌ನ ಮಂಗಳೂರು ಮುಖ್ಯ ಕಚೇರಿಯ ಡಿಜಿಎಂ ಬಾಲಮುಕುಂದ ಶರ್ಮ ತಿಳಿಸಿದರು.

ತಾಲೂಕಿನ ಸಿರಿವಂತೆಯ ಸರ್ಕಾರಿ ಪಪೂ ಕಾಲೇಜಿನಲ್ಲಿ ಪಪೂ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಿಸುವ ಸುಮಾರು ಮೂರೂವರೆ ಲಕ್ಷ ರೂ. ವೆಚ್ಚದ ಯೋಜನೆಯಡಿ ಕೆನರಾ ಬ್ಯಾಂಕ್‌ ಟೆಕ್ಟ್ಬುಕ್‌ ಬ್ಯಾಂಕ್‌ನ್ನು ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಭಾರತ ಹಿಂದೆ ಉಳಿಯಬಾರದು ಎಂಬ ನಿಲುವಿಗನುಸಾರವಾಗಿ ಸಹಾಯ ಹಸ್ತ ಚಾಚಲು ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ. ಆರ್ಥಿಕ ವ್ಯವಹಾರದ ಬ್ಯಾಂಕ್‌ನ ಮುಖ ಪರಿಚಯ ಜನರಿಗಿರುವಂತೆ ಈ ಸಾಮಾಜಿಕ ಕಾಳಜಿಯ ಸ್ವರೂಪವೂ ಜನರಿಗೆ ಮನವರಿಕೆಯಾಗಬೇಕಾಗಿದೆ ಎಂದರು.

ಬೆಂಗಳೂರಿನ ಕೆನರಾ ಬ್ಯಾಂಕ್‌ ಜ್ಯುಬಿಲಿ ಎಜುಕೇಶನ್‌ ಫಂಡ್‌ನ‌ ಅಧ್ಯಕ್ಷ ಎಚ್.ಎಂ. ಬಸವರಾಜ್‌ ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಿಸಿ ಮಾತನಾಡಿ, ನಮ್ಮ ಸಂಸ್ಥೆ ಕೆನರಾ ಬ್ಯಾಂಕ್‌ನ ಆರ್ಥಿಕ ಸಹಕಾರದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸುವ ಯೋಜನೆಯನ್ನು ಬ್ಯಾಂಕ್‌ನ ಲೀಡ್‌ ಜಿಲ್ಲೆಗಳಾದ ಹಾಸನ, ಕೋಲಾರ ಹಾಗೂ ಶಿವಮೊಗ್ಗದಲ್ಲಿ ಈ ವರ್ಷ ಜಾರಿಗೆ ತಂದಿದೆ. ಸರಿಸುಮಾರು ಒಂದು ಸಾವಿರ ರೂ.ಗೂ ಮಿಕ್ಕಿ ವೆಚ್ಚ ತಗುಲುತ್ತಿದ್ದ ಪಠ್ಯ ಪುಸ್ತಕಗಳು ಉಚಿತವಾಗಿ ಲಭ್ಯವಾಗುವುದು ಪೋಷಕರನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ಕಲ್ಲು ಹಾಕದಂತೆ ನೋಡಿಕೊಳ್ಳುತ್ತದೆ ಎಂಬುದು ನಮ್ಮ ಅಭಿಪ್ರಾಯ. ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ತಾಲೂಕಿನ ಸಿರಿವಂತೆಯ ಪಪೂ ಕಾಲೇಜು ವಿದ್ಯಾರ್ಥಿಗಳು ಈ ಅನುಕೂಲವನ್ನು ಅತ್ಯುತ್ತಮ ಅಂಕಗಳಲ್ಲಿ ಪ್ರತಿಫಲ ಕೊಡುವಂತಾಗಬೇಕು ಎಂದರು.

ಕಾಲೇಜಿನ ಅಭಿವೃದ್ಧಿ ಸಮಿತಿಯ ವೆಂಕಟೇಶ್‌ ಪ್ರಭು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕ್‌ ಶಿವಮೊಗ್ಗದ ವಲಯಾಧಿಕಾರಿ ಕೆ. ರಾಘವೇಂದ್ರರಾವ್‌ ಕನಾಲ, ಶಿವಮೊಗ್ಗ ಕೆನರಾ ಬ್ಯಾಂಕ್‌ನ ಡಿವಿಜಿನಲ್ ಮ್ಯಾನೇಜರ್‌ ಸಾಲೋಮನ್‌ ಮೆನೇಜಸ್‌, ಅಧಿಕಾರಿ ಶ್ರೀಕಾಂತ್‌, ಕೆಬಿಜೆಇಎಫ್‌ ಸಂಸ್ಥೆಯ ಕಿರಣ್‌ರಾವ್‌, ಅಭಿವೃದ್ಧಿ ಸಮಿತಿಯ ಸುರೇಶ್‌, ವೀರಪ್ಪ ಇನ್ನಿತರರು ಇದ್ದರು. ಇದೇ ಸಂದರ್ಭದಲ್ಲಿ ಸಿರಿವಂತೆ ಪಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಚೆಕ್‌ ವಿತರಿಸಲಾಯಿತು. ಮಂಗಳಾ ಹೆಗಡೆ ಪ್ರಾರ್ಥಿಸಿದರು. ಕಾಲೇಜು ಪ್ರಾಚಾರ್ಯ ಕೆ. ಮಂಜಪ್ಪ ಸ್ವಾಗತಿಸಿದರು. ಕೆನರಾ ಬ್ಯಾಂಕ್‌ ಜ್ಯುಬಿಲಿ ಎಜುಕೇಶನ್‌ ಫಂಡ್‌ ಬೆಂಗಳೂರು ಸಂಸ್ಥೆಯ ಉಪಾಧ್ಯಕ್ಷ ಕೆ.ಎ.ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ.ಆರ್‌. ನಾಯ್ಕ ನಿರ್ವಹಿಸಿದರು.

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.